ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಬಹರೈನ್ ವತಿಯಿಂದ ಸೆಪ್ಟೆಂಬರ್ 29ರ ಗುರುವಾರ ಅಸ್ತಮಿಸಿದ ಶುಕ್ರವಾರ ರಾತ್ರಿ 08ಗಂಟೆಯಿಂದ ಮನಾಮದಲ್ಲಿರುವ ಪಾಕಿಸ್ತಾನ ಕ್ಲಬ್ ಮೈದಾನದಲ್ಲಿ ಬೃಹತ್ ಮೀಲಾದ್ ಕಾನ್ಫರೆನ್ಸ್ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಅಸ್ಸಯ್ಯಿದ್ ಅಲೀ ಬಾಫಖಿ ತಂಙಳ್ ರವರು ಆಗಮಿಸಲಿದ್ದು, ಮೌಲಾನಾ ಪೇರೋಡ್ ಅಬ್ದುರ್ರಹ್ಮಾನ್ ಸಖಾಫಿಯವರು ಮುಖ್ಯ ಪ್ರಬಾಷಣ ಮಾಡಲಿದ್ದಾರೆ.
ರಾಷ್ಟ್ರೀಯ, ಅಂತರ್ರಾಷ್ಟ್ರೀಯ ಸಂಘಟನಾ ನೇತಾರರು, ಉಲಮಾಗಲು, ಸಾದಾತ್ಗಳು, ಸಾಮಾಜಿಕ ಹಾಗೂ ರಾಜಕೀಯ ನೇತಾರರು ಕಾರ್ಯಕ್ರಮದಲ್ಲಿ ಬಾಗವಹಿಸಲಿದ್ದಾರೆ.
“ಪ್ರವಾದಿ ಮುಹಮ್ಮದ್ ಮುಸ್ತಫಾ (ﷺِ) ಮಾನವೀಯತೆಯ ಮಹಾನಾಯಕ” ಎಂಬ ಶೀರ್ಷಿಕೆಯಲ್ಲಿ ನಡೆಯಲಿರುವ ಮೀಲಾದ್ ಕ್ಯಾಂಪೈನ್ ಭಾಗವಾಗಿ ಮೌಲಿದ್ ಜಲ್ಸಾಗಳು, ಅಹ್ಲನ್ ಯಾ ರಬೀಹ್ ಕಾರ್ಯಕ್ರಮ, ಪ್ರಭಾತ ಮೌಲಿದ್, ಮಹಿಳಾ ತರಗತಿಗಳು, ಪ್ರವಾದಿ ಜೀವನ ಚರಿತ್ರೆಯ ಪುಸ್ತಕ ವಿತರಣೆ, ಸೌಹಾರ್ದ ಕೂಟ ಸೇರಿದಂತೆ ವೈವಿದ್ಯಮವಾದ ಕಾರ್ಯಕ್ರಮಗಳನ್ನು ಕೆಸಿಎಫ್ ಬಹರೈನ್ ಹಮ್ಮಿಕೊಂಡಿದ್ದು, ಈ ಕ್ಯಾಂಪೈನನ್ನು ಈಗಾಗಲೇ ನೂರುಸ್ಸಾದಾತ್ ಅಸ್ಸಯ್ಯಿದ್ ಬಾಯಾರ್ ತಂಗಳ್ ರವರು ಉದ್ಘಾಟಿಸಿದ್ದಾರೆ ಎಂದು ಕೆಸಿಎಫ್ ಬಹರೈನ್ ಮೀಲಾದ್ ಕಾನ್ಫರೆನ್ಸ್ ಸ್ವಾಗತ ಸಮಿತಿಯ ನೇತಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ