ಮಂಗಳೂರು: ವಿವಿಧ ಭಾಷೆಗಳ ಒಕ್ಕೂಟ ವ್ಯವಸ್ಥೆಯಾದ ಭಾರತದಲ್ಲಿ, ವಿವಿಧ ಭಾಷಾ ವಾರು ಪ್ರಾಂತ್ಯಗಳ ಆಧಾರದಲ್ಲಿಯೇ ರಾಜ್ಯಗಳ ಸ್ಥಾಪನೆಯಾಗಿದ್ದು, ಪ್ರಸ್ತುತ ಕೇಂದ್ರ ಸರಕಾರ ರಾಜ್ಯಗಳ ಮೇಲೆ ಖಡ್ಡಾಯ ಹಿಂದಿ ಭಾಷೆ ಯನ್ನು ಹೇರುವ ಅಪ್ರಾಯೋಗಿಕ ಪ್ರಯತ್ನ ಮಾಡುತ್ತಿರುವುದನ್ನು ದ.ಕ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್ ರವರು ಪತ್ರಿಕಾ ಹೇಳಿಕೆಯಲ್ಲಿ ಖಂಡಿಸಿದ್ದಾರೆ.
ವಿವಿಧತೆಯಲ್ಲಿ ಏಕತೆ ಈ ನಾಡಿನ ಒಗ್ಗಟ್ಟಿನ ಜೀವಾಳ, ಕರ್ನಾಟಕದಲ್ಲಿ ಕನ್ನಡವೇ ಆಡು ಬಾಷೆ, ಇದರ ಮೇಲೆ ಕೇಂದ್ರ ಸರಕಾರ ಹಿಂದಿಯನ್ನು ಖಡ್ಡಾಯವಾಗಿ ಹೇರಿ, ಉತ್ತರ ಭಾರತೀಯತೆಯನ್ನು ನಮ್ಮ ಮೇಲೆ ಸವಾರಿ ಮಾಡುವ ಪ್ರಯತ್ನ ಸಹಿಸಲು ಅಸಾದ್ಯ.
ಕೇಂದ್ರ ಸರಕಾರವು ತನ್ನ ಹಿಂದಿ ಹೇರಿಕೆಯ ನಿಲುವಿನಿಂದ ಹಿಂದೆ ಸರಿಯದೆ ಇದ್ದಲ್ಲಿ, ಕರಾವಳಿ ಮತ್ತು ಮಲಬಾರ್ ಜಿಲ್ಲೆಗಳನ್ನು ಕೇಂದ್ರೀಕರಿಸಿ ತುಳು – ಕನ್ನಡ – ಮಲಯಾಳಂ ಸಮ್ಮಿಲನದಲ್ಲಿ ಗಡಿನಾಡ ಕನ್ನಡಿಗ ಕಯ್ಯಾರ ಕಿಂಞಣ್ಣ ರೈ ಮಾದರಿಯ ಪ್ರಾದೇಶಿಕ ಭಾಷಾ ಚಳುವಳಿ ಮಾಡಲಾಗುವುದು.
ಭಾಷಾ ಚಳುವಳಿ ಮತ್ತು ಕರ್ನಾಟಕ ಏಕೀಕರಣ ಚಳವಳಿಗೆ ನಮಗೆ ಕಯ್ಯಾರ ರೈ ಅವರೇ ಮಾದರಿ. ಕಯ್ಯಾರ ರೈ ಅವರು 1997 ರಲ್ಲಿ ಮಂಗಳೂರಿನಲ್ಲಿ ನಡೆದ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸ್ಥಾನದಲ್ಲಿ ಕನ್ನಡಿಗರಿಗೆ ನೀಡಿದ ಭಾಷಾ ಅನುಸರಣೆಯ ಮಾರ್ಗದರ್ಶನ ನಮಗೆ ಅಂತಿಮ. ಕೇಂದ್ರ ಸರಕಾರ ಅಪ್ರಾಯೋಗಿಕ ಹಿಂದಿ ಹೇರಿಕೆಯ ತನ್ನ ನಿಲುವನ್ನು ಶೀಘ್ರ ಹಿಂದಕ್ಕೆ ಪಡೆಯಬೇಕು.ಇಲ್ಲದೆ ಇದ್ದಲ್ಲಿ ಅಪ್ರಾಯೋಗಿಕ ಹಿಂದಿ ಹೇರಿಕೆಯ ವಿರುದ್ಧ ಜಿಲ್ಲೆಯಲ್ಲಿ ಸುದೃಢ ಚಳುವಳಿ ರೂಪಿಸಲಾಗುವುದು ಎಂದು ಕೆ.ಅಶ್ರಫ್ ಎಚ್ಚರಿಕೆ ನೀಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ