ಮಂಗಳೂರು: ಸಮಸ್ತ ಕೇರಳ ಸುನ್ನಿ ಮಹಲ್ ಫೆಡರೇಷನ್ ಇದರ ಮಂಗಳೂರು ವಲಯ ಸಮಿತಿ ರಚನೆಯು ನಗರದ ಕಂಕನಾಡಿ, ಜಮಿಯ್ಯತುಲ್ ಫಲಾಹ್ ಆಡಿಟೋರಿಯಂನಲ್ಲಿ ಇತ್ತೀಚೆಗೆ ನಡೆಯಿತು.ಸುನ್ನಿ ಮಹಲ್ ಫೆಡರೇಷನ್ ನೋಂದಾವಣಿಗೊಂಡ ಮೊಹಲ್ಲಾಗಳು ಆಯ್ದ ಪ್ರತಿನಿಧಿಗಳು ಸಭೆಯಲ್ಲಿ ಹಾಜರಿದ್ದರು.
ಮಸೀದಿಗಳನ್ನು ಕೇಂದ್ರೀಕರಿಸಿ ಮುಸ್ಲಿಮರ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಅಭಿವೃದ್ಧಿಯಲ್ಲಿ ಬಹು ಮುಖ್ಯ ಪಾತ್ರ ವಹಿಸಲು ಅನುಕೂಲವಾಗುವಂತೆ ಮೊಹಲ್ಲಾ ಸಮಿತಿಗಳನ್ನು ಜಿಲ್ಲಾ ಮಟ್ಟದಲ್ಲಿ ರಚಿಸುವ ನಿಟ್ಟಿನಲ್ಲಿ “ಸಮಸ್ತ”ದ ಮಾರ್ಗದರ್ಶನದಂತೆ ಸುನ್ನಿ ಮಹಲ್ ಫೆಡರೇಷನ್ ವಲಯ ಮಟ್ಟದ ಸಮಿತಿಗಳನ್ನು ರಚಿಸಲಾಗುತ್ತಿದೆ.
ಸಮುದಾಯವು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ಕಾರ್ಯಸೂಚಿಯನ್ನು ಮುಂದಿಟ್ಟು ಮೊಹಲ್ಲಾಗಳಲ್ಲಿ ಕಾರ್ಯರೂಪಕ್ಕೆ ತರುವ ಬಗ್ಗೆ ವ್ಯಾಪಕವಾಗಿ ಚರ್ಚೆ ನಡೆಯಬೇಕೆಂದು ಕಾರ್ಯಕ್ರಮವನ್ನು ಉದ್ಘಾಟಿಸಿ ಮೌಲಾನಾ ಅಝೀಝ್ ದಾರಿಮಿಯವರು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಉಸ್ತಾದ್ ಎಸ್.ಬಿ.ದಾರಿಮಿಯವರು ಮಾತನಾಡಿ, ಮೊಹಲ್ಲಾ ಪದ್ಧತಿಯು ಮುಸ್ಲಿಮರ ಅವಿಭಾಜ್ಯ ಧಾರ್ಮಿಕ ಅಂಗವಾಗಿದ್ದು ಇದನ್ನು ಶಿಥಿಲೀಕರಿಸುವ ಯಾವುದೇ ಚಟುವಟಿಕೆಗಳಿಗೆ ಯಾರೂ ಪ್ರೋತ್ಸಾಹ ನೀಡಬಾರದು. ಮೊಹಲ್ಲಾಗಳು ಇಚ್ಚಾ ಶಕ್ತಿ ಪ್ರದರ್ಶಿಸಿದರೆ ಮುಸ್ಲಿಮರ ಬಹುತೇಕ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ ಎಂದು ಹೇಳಿದರು.
ದಾರುನ್ನೂರು ವಿದ್ಯಾಸಂಸ್ಥೆಯ ಸಹಾಯಕ ಪ್ರಾಂಶುಪಾಲರಾದ ಹುಸೈನ್ ರಹ್ಮಾನಿ ವಿಷಯ ಮಂಡಿಸಿದರು.
ಮಂಗಳೂರಿನ ಝೀನತ್ ಬಕ್ಷ್ ಕೇಂದ್ರ ಜುಮ್ಮಾ ಮಸೀದಿ ಖತೀಬರಾದ ಬಹು! ಅಬುಲ್ ಅಕ್ರಂ ಬಾಖವಿ ಉಸ್ತಾದ್ ರವರ ದುಆದೊಂದಿಗೆ ಸಭೆಗೆ ಚಾಲನೆ ನೀಡಲಾಯಿತು.
ಸಮಸ್ತ ಕೇರಳ ಜಂ-ಇಯ್ಯತುಲ್ ಉಲಮಾ ಕರ್ನಾಟಕ ಮುಶಾವರ ಕಾರ್ಯದರ್ಶಿ ಅಬ್ದುಲ್ ಖಾದರ್ ದಾರಿಮಿ ಕುಕ್ಕಿಲ, ಮತ್ತು ಮದರಸ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ನ ಜಿಲ್ಲಾ ಕೋಶಾಧಿಕಾರಿ ಮೆಟ್ರೋ ಸಾಹುಲ್ ಹಮಿದ್ ಹಾಜಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಮದರಸ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ನ ಜಿಲ್ಲಾಧ್ಯಕ್ಷರಾದ ಐ.ಮೊಯ್ದಿನಬ್ಬ ಹಾಜಿ, ದಾರುನ್ನೂರು ವಿದ್ಯಾಸಂಸ್ಥೆಯ ಕೋಶಾಧಿಕಾರಿ ಹನೀಫ್ ಹಾಜಿ ಬಂದರ್ ಹಾಗೂ ರಫೀಕ್ ಹಾಜಿ ಕೊಡಾಜೆ ಮೊದಲಾದ ಉಲಮಾ- ಉಮರಾ ನೇತಾರರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ SMF ಮಂಗಳೂರು ವಲಯ ಸಮಿತಿ ರಿಟೇನಿಂಗ್ ಅಧಿಕಾರಿಯಾಗಿ ನಿಯುಕ್ತಿಗೊಂಡಿರುವ ಉಸ್ತಾದ್ ಎಸ್.ಬಿ.ದಾರಿಮಿಯವರು ವಲಯ ಸಮಿತಿ ಸದಸ್ಯರುಗಳ ಪಟ್ಟಿಯನ್ನು ಪರಿಶೀಲಿಸಿ ಚುನಾವಣಾ ಪ್ರಕ್ರಿಯೆಯನ್ನು ನಡೆಸಿ ಮುಂದಿನ ಅವಧಿಗೆ ಈ ಕೆಳಕಂಡಂತೆ ಪದಾಧಿಕಾರಿಗಳನ್ನು ಆಯ್ಕೆ ಮಾಡಿದರು.
1.ಅಧ್ಯಕ್ಷರಾಗಿ : ಯು.ಕೆ.ಎ.ಅಝೀಝ್ ದಾರಿಮಿ ಚೊಕ್ಕಬೆಟ್ಟು
2.ಪ್ರಧಾನ ಕಾರ್ಯದರ್ಶಿಯಾಗಿ: ಇಬ್ರಾಹಿಂ ಕೊಣಾಜೆ
3.ಕೋಶಾಧಿಕಾರಿಯಾಗಿ : ಎನ್.ಕೆ.ಅಬೂಬಕ್ಕರ್ ಕುದ್ರೋಳಿ
4. ಉಪಾಧ್ಯಕ್ಷರುಗಳಾಗಿ:
1.ಹನೀಫ್ ಹಾಜಿ ಬಂದರ್
2.ಅಬ್ದುಲ್ ಖಾದರ್ ದಾರಿಮಿ ಕುಕ್ಕಿಲ
3.ಅಬ್ದುಲ್ ರಹ್ಮಾನ್ ದಾರಿಮಿ ತಬೂಕ್
5.ಜತೆ ಕಾರ್ಯದರ್ಶಿಗಳಾಗಿ:
1.ಮೆಟ್ರೋ ಸಾಹುಲ್ ಹಮೀದ್ ಹಾಜಿ
2.ರಿಯಾಝ್ ಹಾಜಿ ಬಂದರ್
3.ಮುಹಮ್ಮದ್ ಶಾಫಿ ಪಡ್ಡಂದಡ್ಕ
ಜಿಲ್ಲಾ ಕೌನ್ಸಿಲರ್ ಗಳಾಗಿ:
1.ಐ.ಮೊಯ್ದಿನಬ್ಬ ಹಾಜಿ
2.ಇಸ್ಮಾಯಿಲ್ ಹಾಜಿ ಉಳಾಯಿಬೆಟ್ಟು
3.ಮುಹಮ್ಮದ್ ಸ್ವಾಲಿಹ್ ಕಣ್ಣೂರು
ಇವರುಗಳನ್ನು ಆಯ್ಕೆ ಮಾಡಲಾಯಿತು.
SMF ಮಂಗಳೂರು ವಲಯ ವೀಕ್ಷಕರಾದ ಅಬ್ದುಲ್ ರಹ್ಮಾನ್ ದಾರಿಮಿ ತಬೂಕ್ ಸ್ವಾಗತಿಸಿದರೆ,
ನೂತನ ಪ್ರಧಾನ ಕಾರ್ಯದರ್ಶಿ ಇಬ್ರಾಹಿಮ್ ಕೊಣಾಜೆ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ