ಮಂಗಳೂರು: ಸಮಸ್ತ ಕೇರಳ ಸುನ್ನಿ ಮಹಲ್ ಫೆಡರೇಷನ್ ಇದರ ಮಂಗಳೂರು ವಲಯ ಸಮಿತಿ ರಚನೆಯು ನಗರದ ಕಂಕನಾಡಿ, ಜಮಿಯ್ಯತುಲ್ ಫಲಾಹ್ ಆಡಿಟೋರಿಯಂನಲ್ಲಿ ಇತ್ತೀಚೆಗೆ ನಡೆಯಿತು.ಸುನ್ನಿ ಮಹಲ್ ಫೆಡರೇಷನ್ ನೋಂದಾವಣಿಗೊಂಡ ಮೊಹಲ್ಲಾಗಳು ಆಯ್ದ ಪ್ರತಿನಿಧಿಗಳು ಸಭೆಯಲ್ಲಿ ಹಾಜರಿದ್ದರು.
ಮಸೀದಿಗಳನ್ನು ಕೇಂದ್ರೀಕರಿಸಿ ಮುಸ್ಲಿಮರ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಅಭಿವೃದ್ಧಿಯಲ್ಲಿ ಬಹು ಮುಖ್ಯ ಪಾತ್ರ ವಹಿಸಲು ಅನುಕೂಲವಾಗುವಂತೆ ಮೊಹಲ್ಲಾ ಸಮಿತಿಗಳನ್ನು ಜಿಲ್ಲಾ ಮಟ್ಟದಲ್ಲಿ ರಚಿಸುವ ನಿಟ್ಟಿನಲ್ಲಿ “ಸಮಸ್ತ”ದ ಮಾರ್ಗದರ್ಶನದಂತೆ ಸುನ್ನಿ ಮಹಲ್ ಫೆಡರೇಷನ್ ವಲಯ ಮಟ್ಟದ ಸಮಿತಿಗಳನ್ನು ರಚಿಸಲಾಗುತ್ತಿದೆ.
ಸಮುದಾಯವು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ಕಾರ್ಯಸೂಚಿಯನ್ನು ಮುಂದಿಟ್ಟು ಮೊಹಲ್ಲಾಗಳಲ್ಲಿ ಕಾರ್ಯರೂಪಕ್ಕೆ ತರುವ ಬಗ್ಗೆ ವ್ಯಾಪಕವಾಗಿ ಚರ್ಚೆ ನಡೆಯಬೇಕೆಂದು ಕಾರ್ಯಕ್ರಮವನ್ನು ಉದ್ಘಾಟಿಸಿ ಮೌಲಾನಾ ಅಝೀಝ್ ದಾರಿಮಿಯವರು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಉಸ್ತಾದ್ ಎಸ್.ಬಿ.ದಾರಿಮಿಯವರು ಮಾತನಾಡಿ, ಮೊಹಲ್ಲಾ ಪದ್ಧತಿಯು ಮುಸ್ಲಿಮರ ಅವಿಭಾಜ್ಯ ಧಾರ್ಮಿಕ ಅಂಗವಾಗಿದ್ದು ಇದನ್ನು ಶಿಥಿಲೀಕರಿಸುವ ಯಾವುದೇ ಚಟುವಟಿಕೆಗಳಿಗೆ ಯಾರೂ ಪ್ರೋತ್ಸಾಹ ನೀಡಬಾರದು. ಮೊಹಲ್ಲಾಗಳು ಇಚ್ಚಾ ಶಕ್ತಿ ಪ್ರದರ್ಶಿಸಿದರೆ ಮುಸ್ಲಿಮರ ಬಹುತೇಕ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ ಎಂದು ಹೇಳಿದರು.
ದಾರುನ್ನೂರು ವಿದ್ಯಾಸಂಸ್ಥೆಯ ಸಹಾಯಕ ಪ್ರಾಂಶುಪಾಲರಾದ ಹುಸೈನ್ ರಹ್ಮಾನಿ ವಿಷಯ ಮಂಡಿಸಿದರು.
ಮಂಗಳೂರಿನ ಝೀನತ್ ಬಕ್ಷ್ ಕೇಂದ್ರ ಜುಮ್ಮಾ ಮಸೀದಿ ಖತೀಬರಾದ ಬಹು! ಅಬುಲ್ ಅಕ್ರಂ ಬಾಖವಿ ಉಸ್ತಾದ್ ರವರ ದುಆದೊಂದಿಗೆ ಸಭೆಗೆ ಚಾಲನೆ ನೀಡಲಾಯಿತು.
ಸಮಸ್ತ ಕೇರಳ ಜಂ-ಇಯ್ಯತುಲ್ ಉಲಮಾ ಕರ್ನಾಟಕ ಮುಶಾವರ ಕಾರ್ಯದರ್ಶಿ ಅಬ್ದುಲ್ ಖಾದರ್ ದಾರಿಮಿ ಕುಕ್ಕಿಲ, ಮತ್ತು ಮದರಸ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ನ ಜಿಲ್ಲಾ ಕೋಶಾಧಿಕಾರಿ ಮೆಟ್ರೋ ಸಾಹುಲ್ ಹಮಿದ್ ಹಾಜಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಮದರಸ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ನ ಜಿಲ್ಲಾಧ್ಯಕ್ಷರಾದ ಐ.ಮೊಯ್ದಿನಬ್ಬ ಹಾಜಿ, ದಾರುನ್ನೂರು ವಿದ್ಯಾಸಂಸ್ಥೆಯ ಕೋಶಾಧಿಕಾರಿ ಹನೀಫ್ ಹಾಜಿ ಬಂದರ್ ಹಾಗೂ ರಫೀಕ್ ಹಾಜಿ ಕೊಡಾಜೆ ಮೊದಲಾದ ಉಲಮಾ- ಉಮರಾ ನೇತಾರರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ SMF ಮಂಗಳೂರು ವಲಯ ಸಮಿತಿ ರಿಟೇನಿಂಗ್ ಅಧಿಕಾರಿಯಾಗಿ ನಿಯುಕ್ತಿಗೊಂಡಿರುವ ಉಸ್ತಾದ್ ಎಸ್.ಬಿ.ದಾರಿಮಿಯವರು ವಲಯ ಸಮಿತಿ ಸದಸ್ಯರುಗಳ ಪಟ್ಟಿಯನ್ನು ಪರಿಶೀಲಿಸಿ ಚುನಾವಣಾ ಪ್ರಕ್ರಿಯೆಯನ್ನು ನಡೆಸಿ ಮುಂದಿನ ಅವಧಿಗೆ ಈ ಕೆಳಕಂಡಂತೆ ಪದಾಧಿಕಾರಿಗಳನ್ನು ಆಯ್ಕೆ ಮಾಡಿದರು.
1.ಅಧ್ಯಕ್ಷರಾಗಿ : ಯು.ಕೆ.ಎ.ಅಝೀಝ್ ದಾರಿಮಿ ಚೊಕ್ಕಬೆಟ್ಟು
2.ಪ್ರಧಾನ ಕಾರ್ಯದರ್ಶಿಯಾಗಿ: ಇಬ್ರಾಹಿಂ ಕೊಣಾಜೆ
3.ಕೋಶಾಧಿಕಾರಿಯಾಗಿ : ಎನ್.ಕೆ.ಅಬೂಬಕ್ಕರ್ ಕುದ್ರೋಳಿ
4. ಉಪಾಧ್ಯಕ್ಷರುಗಳಾಗಿ:
1.ಹನೀಫ್ ಹಾಜಿ ಬಂದರ್
2.ಅಬ್ದುಲ್ ಖಾದರ್ ದಾರಿಮಿ ಕುಕ್ಕಿಲ
3.ಅಬ್ದುಲ್ ರಹ್ಮಾನ್ ದಾರಿಮಿ ತಬೂಕ್
5.ಜತೆ ಕಾರ್ಯದರ್ಶಿಗಳಾಗಿ:
1.ಮೆಟ್ರೋ ಸಾಹುಲ್ ಹಮೀದ್ ಹಾಜಿ
2.ರಿಯಾಝ್ ಹಾಜಿ ಬಂದರ್
3.ಮುಹಮ್ಮದ್ ಶಾಫಿ ಪಡ್ಡಂದಡ್ಕ
ಜಿಲ್ಲಾ ಕೌನ್ಸಿಲರ್ ಗಳಾಗಿ:
1.ಐ.ಮೊಯ್ದಿನಬ್ಬ ಹಾಜಿ
2.ಇಸ್ಮಾಯಿಲ್ ಹಾಜಿ ಉಳಾಯಿಬೆಟ್ಟು
3.ಮುಹಮ್ಮದ್ ಸ್ವಾಲಿಹ್ ಕಣ್ಣೂರು
ಇವರುಗಳನ್ನು ಆಯ್ಕೆ ಮಾಡಲಾಯಿತು.
SMF ಮಂಗಳೂರು ವಲಯ ವೀಕ್ಷಕರಾದ ಅಬ್ದುಲ್ ರಹ್ಮಾನ್ ದಾರಿಮಿ ತಬೂಕ್ ಸ್ವಾಗತಿಸಿದರೆ,
ನೂತನ ಪ್ರಧಾನ ಕಾರ್ಯದರ್ಶಿ ಇಬ್ರಾಹಿಮ್ ಕೊಣಾಜೆ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ