ಕುವೈತ್ ಸಿಟಿ: ರಮಝಾನ್ನಲ್ಲಿ ಅನಧಿಕೃತವಾಗಿ ಹಣ ಸಂಗ್ರಹ ಮಾಡುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕುವೈತ್ ಎಚ್ಚರಿಸಿದೆ.
ಒಂಟಿಯಾಗಿ ಅಥವಾ ಒಗ್ಗೂಡಿ ಹಣಸಂಗ್ರಹಿಸುವವರ ಮೇಲ್ವಿಚಾರಣೆಗಾಗಿ ನವೀನ ರೀತಿಯ ಕಾರ್ಯವಿಧಾನವನ್ನು ಜಾರಿಗೊಳಿಸಿರುವುದಾಗಿ ಔಖಾಫ್ ಸಚಿವಾಲಯವು ತಿಳಿಸಿದೆ. ಸೆರೆಹಿಡಿಯಲಾಗುವ ವಲಸಿಗರನ್ನು ಗಡೀಪಾರು ಮಾಡಲಾಗುತ್ತದೆ.
ಜೀವ ಕಾರುಣ್ಯ ಸೇವೆಗಾಗಿ ಕುವೈತ್ ನಲ್ಲಿ ಕಾನೂನುಬದ್ಧ ವ್ಯವಸ್ಥೆಗಳಿವೆ.ಅನುಮತಿ ಇಲ್ಲದ ಹಣ ಸಂಗ್ರಹವನ್ನು ಭಿಕ್ಷಾಟನೆ ಎಂದು ಪರಿಗಣಿಸಲಾಗುವುದು. ಬಿಕ್ಷಾಟನೆಯ ಮೂಲಕ ಕುವೈತ್ ನ ಚಿತ್ರನವನ್ನು ವಿಕಲಗೊಳಿಸುವುದನ್ನು ಕ್ಷಮಿಸಲು ಸಾಧ್ಯವಿಲ್ಲ.ಆದ್ದರಿಂದಲೇ ಅನಧಿಕೃತ ಸಂಗ್ರಹದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಇಂತಹ ಪ್ರಕರಣಗಳಲ್ಲಿ, ಬಂಧಿತರಾಗುವ ಕುವೈತ್ ವ್ಯಕ್ತಿಗಳ ಸಂಪೂರ್ಣ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗುತ್ತದೆ.
ಔಖಾಫ್, ಗೃಹ ಸಚಿವಾಲಯ ಮತ್ತು ಪುರಸಭೆಯು ಕಾನೂನುಬಾಹಿರ ಹಣ ಸಂಗ್ರದದ ವಿರುದ್ಧದ ಕ್ರಮಗಳನ್ನು ಒಪ್ಪಿಕೊಂಡಿವೆ. ಕಾನೂನು ಉಲ್ಲಂಘಿಸುವ ರೀತಿಯಲ್ಲಿ ಹಣ ಸಂಗ್ರಹಿಸುವುದು ಗಂಡು ಬಂದಲ್ಲಿ ,ತಿಳಿಸುವಂತೆ ಮೂಲ ನಿವಾಸಿಗಳು ಮತ್ತು ವಿದೇಶಿಯರಿಗೆ ಔಖಾಫ್ ಸಚಿವಾಲಯ ಮನವಿ ಮಾಡಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ