ಕಿನ್ಯಾ: ಪುಣ್ಯ ಪ್ರವಾದಿ ಸ್ವಲ್ಲಲ್ಲಾಹು ಅಲೈಹಿ ವಸಲ್ಲಂ ರವರ ಅನುಗ್ರಹೀತ ಜನ್ಮ ತಿಂಗಳಾದ ಪವಿತ್ರ ರಬೀವುಲ್ ಅವ್ವಲ್ ಪ್ರಯುಕ್ತ ಅಕ್ಟೋಬರ್ 23 ಕ್ಕೆ ಕಿನ್ಯ ದಲ್ಲಿ SჄS ಮತ್ತು SSF ವತಿಯಿಂದ ಐತಿಹಾಸಿಕ “ಹುಬ್ಬುರ್ರಸೂಲ್ ಸಮಾವೇಶ ಹಾಗೂ ಬೃಹತ್ ಮೀಲಾದ್ ರ್ಯಾಲಿ” ನಡೆಯಲಿದೆ.
ಈ ಸಂಬಂಧ ಕಿನ್ಯ ಬೆಳರಿಂಗೆ ಸುನ್ನೀ ಸೆಂಟರ್ ನಲ್ಲಿ ಸೇರಿದ್ದ ಸಭೆಯಲ್ಲಿ, ಕಾರ್ಯಕ್ರಮದ ಯಶಸ್ವಿಗಾಗಿ ಸ್ವಾಗತ ಸಮಿತಿಗೆ ರೂಪು ನೀಡಲಾಯಿತು.
ಹಾಜಿ ಬಿ.ಎಂ ಇಸ್ಮಾಈಲ್ ಪರಮಾಂಡ ಚಯರ್ಮಾನ್, ಬಷೀರ್ ಕೂಡಾರ ಜನರಲ್ ಕನ್ವೀನರ್, ರಹ್ಮತ್ ನಗರ ಇಬ್ರಾಹೀಂ ಹಾಜಿ ಕೋಶಾಧಿಕಾರಿ ಯಾಗಿ ಆರಿಸಲಾಯಿತು.ಇರ್ಫಾನ್ ಸಖಾಫಿ ಖುತುಬಿನಗರ ವೈಸ್ ಚಯರ್ಮಾನ್ ಆಶಿಖ್ ಮೀಂಪ್ರಿ ವೈಸ್ ಕನ್ವೀನರ್ ಆಗಿ ಆಯ್ಕೆ ಮಾಡಲಾಯಿತು.
ಅಕ್ಟೋಬರ್ 23 ಆದಿತ್ಯವಾರ ಮಧ್ಯಾಹ್ನ ಎರಡು ಗಂಟೆಗೆ ಕಿನ್ಯ ಖುತುಬಿನಗರದಿಂದ ಹೊರಡುವ ಕಾಲ್ನಡಿಗೆ ಜಾಥಾ ರಹ್ಮತ್ ನಗರ, ಕುರಿಯ ಮೂಲಕ ಸಾಗಿಬಂದು ಕಿನ್ಯ ಕೇಂದ್ರ ಮಸ್ಜಿದ್ ವಠಾರದಲ್ಲಿ ಅಂತ್ಯ ವಿಶ್ರಾಂತಿ ಹೊಂದುತ್ತಿರುವ ಹಝ್ರತ್ ಹುಸೈನ್ ವಲಿಯುಲ್ಲಾಹಿ ರವರ ದರ್ಗಾ ಝಿಯಾರತ್ ನಡೆಸಿ ಮುಂದೆ ಸಾಗುವ ಜಾಥಾ ಉಕ್ಕುಡ, ಮೀಂಪ್ರಿ ಮಾರ್ಗವಾಗಿ ಬದ್ರಿಯ್ಯಾನಗರ ಮೂಲಕ ಬೆಳರಿಂಗೆ ಯಲ್ಲಿ ಸಮಾಪ್ತಿ ಗೊಳ್ಳಲಿದೆ. ಸಂಜೆ 4.30 ಕ್ಕೆ ಮದ್ಹುರ್ರಸೂಲ್ ಕಾರ್ಯಕ್ರಮ ನಡೆಯಲಿದೆ,
ಕಾರ್ಯಕ್ರಮದಲ್ಲಿ ಊರಿನ ಸುನ್ನೀ ಸಂಘ ಕುಟುಂಬದ ನಾಯಕರು, ರಾಜಕೀಯ, ಸಾಮಾಜಿಕ ಮುಖಂಡರು ಭಾಗವಹಿಸುವರು.
ಎಸ್.ವೈ.ಎಸ್ ಕಿನ್ಯ ಸೆಂಟರ್ ಪ್ರಧಾನ ಕಾರ್ಯದರ್ಶಿ ಕೆ.ಎಂ ಇಸ್ಮಾಈಲ್ ಸಾಗ್ ಸ್ವಾಗತಿಸಿದ ಸಭೆಯನ್ನು ಎಸ್ಸೆಸ್ಸೆಫ್ ಕಿನ್ಯ ಸೆಕ್ಟರ್ ಅಧ್ಯಕ್ಷ ನೌಫಲ್ ಅಹ್ಸನಿ ಉದ್ಘಾಟಿಸಿದರು, ಎಸ್.ವೈ.ಎಸ್ ಕಿನ್ಯ ಸೆಂಟರ್ ಕೋಶಾಧಿಕಾರಿ ಪಿ.ಎಂ ಉಸ್ಮಾನ್ ಝುಹ್ರಿ ಕುರಿಯ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಕೇರಳ ವಿಧಾನಸಭಾ ಚುನಾವಣೆ: 102 ಸ್ಥಾನಗಳಲ್ಲಿ UDF ಗೆ ಭರ್ಜರಿ ಜಯ- LDF ಗೆ ಹೀನಾಯ ಸೋಲು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ