ಮಂಗಳೂರು: ಕಾರವಾರ ಜಿಲ್ಲೆಯಲ್ಲಿ ಅಂದು ಸಂಭವಿಸಿದ ಪರೇಶ್ ಮೇಸ್ತ ಎಂಬ ಹಿಂದುಳಿದ ವರ್ಗದ ಯುವಕನ ಸಾವನ್ನು, ತಕ್ಷಣ ಕೊಲೆ ಎಂದು ಪರಿವರ್ತಿಸಿ, ನಂತರ ಕೊಲೆಯ ಆರೋಪವನ್ನು ಒಂದು ನಿರ್ಧಿಷ್ಟ ಸಮುದಾಯದ ಮೇಲೆ ಹೊರಿಸಲಾಯಿತು.
ಆಗಾಗಲೇ ಅಭಿವೃದ್ಧಿ ವಿಷಯಗಳ ಬದಲಿಗೆ, ಧರ್ಮ, ನಂಬಿಕೆ, ಅತಿ ದೇಶ ಪ್ರೇಮ ಎಂಬಿತ್ಯಾದಿ ವಿಷಯಗಳ ಅಘೋಷಿತ ಪ್ರಣಾಳಿಕೆ ಹೊಂದಿದ್ದ ಬಿ.ಜೆ.ಪಿ ಪಕ್ಷಕ್ಕೆ ಸಾವುಗಳು ಪ್ರಣಾಳಿಕೆಯಾದವು, ಹಿಂದುಳಿದ ವರ್ಗ,ದಲಿತರು,ಪರಿಶಿಷ್ಟ ಪಂಗಡಕ್ಕೆ ಸೇರಿದ ಜನರ ಸಾವುಗಳನ್ನು ಈ ಪಕ್ಷವು ತನ್ನ ಫಸಲುಗಳಾಗಿ ಪರಿವರ್ತಿಸಿ, ಜನರಿಗೆ ತನ್ನ ಪ್ರಣಾಳಿಕಾ ಪ್ರಯೋಜನವನ್ನು ನೀಡಿತು.
ಅದೇ ಸಂದರ್ಭದಲ್ಲಿ ತಾನು ತನ್ನ ಪಕ್ಷದ ಜನತೆಗೆ ನೀಡಿದ ಭರವಸೆಯ ಅನುಪಾತದಲ್ಲಿ ಆರೋಪಿತ ಸಮುದಾಯದ ಜನತೆಯ, ಆಸ್ತಿ,ಪಾಸ್ತಿ ಗಳನ್ನು ನಷ್ಟ ಪಡಿಸಿತು. ಆರೋಪಿತ ಸಮುದಾಯದ ಜನತೆಗೆ ಅಸುರಕ್ಷಿತತೆ , ಭಯ, ಆತಂಕದ ಕೊಡುಗೆಯನ್ನು ನೀಡಿದೆ.ಪರೇಶ್ ಮೇಸ್ತ ಎಂಬ ಹಿಂದುಳಿದ ವರ್ಗದ ಜೀವವು ಪ್ರಕೃತಿಯಲ್ಲಿ ಲೀನವಾಯಿತು.
ಪ್ರಣಾಳಿಕಾ ಪ್ರಯೋಜನಾರ್ಥಿಗಳು ಇಂದು ನಿರಾಳರಾಗಿರುತ್ತಾರೆ. ಪರೇಶ್ ಮೇಸ್ತ ಸಾವಿನ ತನಿಖೆಯೂ ಅಂತ್ಯಗೊಂಡು ತನಿಖಾ ತಂಡ ಸಿ.ಬಿ.ಐ ಸಾವು ಆಕಸ್ಮಿಕ ಎಂದು ಘೋಷಿಸಿದೆ. ಪರೇಶ್ ಮೇಸ್ತ ಹೆಸರಿನಲ್ಲಿ ಚುನಾವಣೆ ಗೆದ್ದ ಬಿ.ಜೆ.ಪಿ ಜನತೆಯ ‘ ಕ್ಷಮೆ ‘ ಕೇಳಬೇಕಿದೆ. ಬಿ.ಜೆ.ಪಿ ತನ್ನ ಮುಂದಿನ ಪ್ರಣಾಳಿಕೆಯಲ್ಲಿ ಅಭಿವೃದ್ಧಿ ವಿಷಯವನ್ನು ಪ್ರಮುಖವಾಗಿಸಿ ಚುನಾವಣೆ ಎದುರಿಸಲಿ ಎಂದು ಕೆ.ಅಶ್ರಫ್.
(ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ) ಹೇಳಿಕೆ ನೀಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ