ಮಂಗಳೂರು: ಕಾರವಾರ ಜಿಲ್ಲೆಯಲ್ಲಿ ಅಂದು ಸಂಭವಿಸಿದ ಪರೇಶ್ ಮೇಸ್ತ ಎಂಬ ಹಿಂದುಳಿದ ವರ್ಗದ ಯುವಕನ ಸಾವನ್ನು, ತಕ್ಷಣ ಕೊಲೆ ಎಂದು ಪರಿವರ್ತಿಸಿ, ನಂತರ ಕೊಲೆಯ ಆರೋಪವನ್ನು ಒಂದು ನಿರ್ಧಿಷ್ಟ ಸಮುದಾಯದ ಮೇಲೆ ಹೊರಿಸಲಾಯಿತು.
ಆಗಾಗಲೇ ಅಭಿವೃದ್ಧಿ ವಿಷಯಗಳ ಬದಲಿಗೆ, ಧರ್ಮ, ನಂಬಿಕೆ, ಅತಿ ದೇಶ ಪ್ರೇಮ ಎಂಬಿತ್ಯಾದಿ ವಿಷಯಗಳ ಅಘೋಷಿತ ಪ್ರಣಾಳಿಕೆ ಹೊಂದಿದ್ದ ಬಿ.ಜೆ.ಪಿ ಪಕ್ಷಕ್ಕೆ ಸಾವುಗಳು ಪ್ರಣಾಳಿಕೆಯಾದವು, ಹಿಂದುಳಿದ ವರ್ಗ,ದಲಿತರು,ಪರಿಶಿಷ್ಟ ಪಂಗಡಕ್ಕೆ ಸೇರಿದ ಜನರ ಸಾವುಗಳನ್ನು ಈ ಪಕ್ಷವು ತನ್ನ ಫಸಲುಗಳಾಗಿ ಪರಿವರ್ತಿಸಿ, ಜನರಿಗೆ ತನ್ನ ಪ್ರಣಾಳಿಕಾ ಪ್ರಯೋಜನವನ್ನು ನೀಡಿತು.
ಅದೇ ಸಂದರ್ಭದಲ್ಲಿ ತಾನು ತನ್ನ ಪಕ್ಷದ ಜನತೆಗೆ ನೀಡಿದ ಭರವಸೆಯ ಅನುಪಾತದಲ್ಲಿ ಆರೋಪಿತ ಸಮುದಾಯದ ಜನತೆಯ, ಆಸ್ತಿ,ಪಾಸ್ತಿ ಗಳನ್ನು ನಷ್ಟ ಪಡಿಸಿತು. ಆರೋಪಿತ ಸಮುದಾಯದ ಜನತೆಗೆ ಅಸುರಕ್ಷಿತತೆ , ಭಯ, ಆತಂಕದ ಕೊಡುಗೆಯನ್ನು ನೀಡಿದೆ.ಪರೇಶ್ ಮೇಸ್ತ ಎಂಬ ಹಿಂದುಳಿದ ವರ್ಗದ ಜೀವವು ಪ್ರಕೃತಿಯಲ್ಲಿ ಲೀನವಾಯಿತು.
ಪ್ರಣಾಳಿಕಾ ಪ್ರಯೋಜನಾರ್ಥಿಗಳು ಇಂದು ನಿರಾಳರಾಗಿರುತ್ತಾರೆ. ಪರೇಶ್ ಮೇಸ್ತ ಸಾವಿನ ತನಿಖೆಯೂ ಅಂತ್ಯಗೊಂಡು ತನಿಖಾ ತಂಡ ಸಿ.ಬಿ.ಐ ಸಾವು ಆಕಸ್ಮಿಕ ಎಂದು ಘೋಷಿಸಿದೆ. ಪರೇಶ್ ಮೇಸ್ತ ಹೆಸರಿನಲ್ಲಿ ಚುನಾವಣೆ ಗೆದ್ದ ಬಿ.ಜೆ.ಪಿ ಜನತೆಯ ‘ ಕ್ಷಮೆ ‘ ಕೇಳಬೇಕಿದೆ. ಬಿ.ಜೆ.ಪಿ ತನ್ನ ಮುಂದಿನ ಪ್ರಣಾಳಿಕೆಯಲ್ಲಿ ಅಭಿವೃದ್ಧಿ ವಿಷಯವನ್ನು ಪ್ರಮುಖವಾಗಿಸಿ ಚುನಾವಣೆ ಎದುರಿಸಲಿ ಎಂದು ಕೆ.ಅಶ್ರಫ್.
(ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ) ಹೇಳಿಕೆ ನೀಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)