ಮಂಗಳೂರು. ಅ,07:ದಕ್ಷಿಣ ಕನ್ನಡ ಜಿಲ್ಲೆಯಿಂದ ತ್ರೋಬಾಲ್ ಪಂದ್ಯಾವಳಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಪ್ರತಿಭೆಗಳಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಇವರು ಕ್ರೀಡಾ ಸಮವಸ್ತ್ರಗಳನ್ನು ನೀಡಿ ಪ್ರೋತ್ಸಾಹಿಸಿದರು
ಮಂಗಳೂರಿನ ಕೈಕಂಬ ಸಮೀಪದ ಪದವಿ ಪೂರ್ವ ಕಾಲೇಜಿನ ಹುಡುಗರ ತಂಡ ಇತ್ತೀಚೆಗೆ ಜಿಲ್ಲಾ ಮಟ್ಟದಲ್ಲಿ ನಡೆದ ತ್ರೋಬಾಲ್ ಪಂದ್ಯಾವಳಿಯಲ್ಲಿ ಜಯಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದರು.
ಸ್ಥಳೀಯ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿದ ಬಿಜೆಪಿ ರಾಜ್ಯ ಹಿಂದುಳಿದ ವರ್ಗದ ಸದಸ್ಯ ಅಬ್ದುಲ್ ರಜಾಕ್ ತೋಕೂರು ಅವರು ರಾಜ್ಯಮಟ್ಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಲಿರುವ ವಿದ್ಯಾರ್ಥಿಗಳ ತಂಡದ ಬಗ್ಗೆ ಶಾಸಕ ರಾಜೇಶ್ ನಾಯಕ್ ಅವರ ಗಮನಕ್ಕೆ ತಂದಾಗ, ತಕ್ಷಣ ಸ್ಪಂದಿಸಿ ಸಹಾಯ ನೀಡಿದ ಶಾಸಕರು ಕ್ರೀಡಾಪಟುಗಳಿಗೆ ಬೇಕಾಗುವ ಕ್ರೀಡಾ ಸಹವಾಸಗಳನ್ನು ನೀಡಿ ಶುಭ ಹಾರೈಸಿದರು. ಮುಂದೆಯೂ ಕೂಡ ಸರಕಾರದ ವತಿಯಿಂದ ಸಿಗುವ ಹಾಗೂ ಇತರ ಎಲ್ಲಾ ರೀತಿಯಲ್ಲೂ ಸಹಾಯ ನೀಡುವ ಭರವಸೆಯನ್ನು ನೀಡಿ ಕ್ರೀಡಾಪಟುಗಳ ಮುಂದಿನ ಭವಿಷ್ಯಕ್ಕೆ ಶುಭಹಾರೈಸಿದರು.
ವರದಿ: ಅದ್ದಿ ಬೊಳ್ಳೂರು
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ