ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(KSRTC) ಹಾಗೂ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಉಚಿತ ಕೆ.ಎಸ್.ಆರ್.ಟಿ.ಸಿ. ಪಾಸ್ ಸೌಲಭ್ಯವನ್ನು ನೀಡಲಾಗುತ್ತಿದೆ. ಇಡಿಸಿಎಸ್ (EDCS) ಇಲಾಖೆಯ ಸೇವಾ ಸಿಂಧು(sevasindhu) ಪೋರ್ಟಲ್ ರವರ ಗ್ರಾಮ ಒನ್ (gramaone) ಸೇವಾ ಮತ್ತು ಕರ್ನಾಟಕ ಒನ್(karnatakaone) ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸುವಂತೆ ಕೆ.ಎಸ್.ಆರ್.ಟಿ.ಸಿ. ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.
ಪಾಸ್ ಪಡೆಯಲು ಯಾವುದೇ ಶುಲ್ಕ ಇರುವುದಿಲ್ಲ. ಅರ್ಜಿಯೊಂದಿಗೆ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಪಡೆದ ಗುರುತಿನ ಚೀಟಿ, ಆಧಾರ್ ಕಾರ್ಡ್ ಸಲ್ಲಿಸಿ ಅಲ್ಲಿಯೇ ಸ್ಮಾರ್ಟ್ ಕಾರ್ಡ್ ಮಾದರಿಯ ಬಸ್ಪಾಸ್ಗಳನ್ನು ಪಡೆದುಕೊಳ್ಳಬಹುದು.
ಬಸ್ ಪಾಸ್ಗಾಗಿ ಅರ್ಜಿ ಸಲ್ಲಿಸುವ ಕಾರ್ಮಿಕರು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಣಿಯಾಗಿರಬೇಕು ಹಾಗೂ ನೋಂದಣಿ ಚಾಲ್ತಿಯಲ್ಲಿರಬೇಕು. ಪಾಸುದಾರರು ನಗರ, ಸಾಮಾನ್ಯ/ಹೊರವಲಯ ಹಾಗೂ ವೇಗದೂತ ಬಸ್ಸುಗಳಲ್ಲಿ, ಪಾಸಿನಲ್ಲಿ ನಮೂದಿಸಲಾದ ಪ್ರಾರಂಭಿಕ ಸ್ಥಳ/ಪ್ರಾರಂಭಿಕ ಬಸ್ ನಿಲ್ದಾಣದಿಂದ 07 ಹಂತಗಳವರೆಗೆ (ಗರಿಷ್ಟ 45 ಕಿ.ಮೀ) ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶವಿರುತ್ತದೆ.
ಬಸ್ ಪಾಸ್ನ ಮಾನ್ಯತಾ ಅವಧಿಯು ಮೂರು ತಿಂಗಳಾಗಿರುತ್ತದೆ. ಮೂರು ತಿಂಗಳ ಬಸ್ ಪಾಸ್ ಮಾನ್ಯತಾ ಅವಧಿ ಮುಕ್ತಾಯವಾಗುವ ಕೊನೆಯ ದಿನಾಂಕಕ್ಕಿಂತ 15 ದಿನಗಳ ಮೊದಲು ಮರು ಅವಧಿಗೆ ಹೊಸದಾಗಿ ಅರ್ಜಿ ಸಲ್ಲಿಸಿ, ಸೇವಾ ಸಿಂಧು ಪೋರ್ಟಲ್ ಮೂಲಕ ಬಸ್ ಪಾಸ್ ಪಡೆಯಲು ಅವಕಾಶ ಕಲ್ಪಿಸಲಾಗಿರುತ್ತದೆ. ಈ ಸಂದರ್ಭದಲ್ಲಿ ವಿಳಾಸವನ್ನು ಬದಲಾಯಿಸಿಕೊಳ್ಳಲು ಅವಕಾಶವನ್ನು ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ