ಸುರತ್ಕಲ್,ಅ.28: ಸುರತ್ಕಲ್ ಎನ್ಐಟಿಕೆ ಟೋಲ್ಗೇಟ್ ಬಳಿ ಇಂದಿನಿಂದ ಆರಂಭಿಸಲು ಉದ್ದೇಶಿಸಲಾಗಿದ್ದ ಟೋಲ್ಗೇಟ್ ವಿರೋಧಿ ಹೋರಾಟಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ಆದರೆ ಇನ್ನೊಂದೆಡೆ ಟೋಲ್ಗೇಟ್ ವಿರೋಧಿ ಹೋರಾಟಗಾರರು ತಮ್ಮ ಅನಿರ್ದಿಷ್ಟಾವಧಿ ಧರಣಿ ಇದೀಗ ಆರಂಭಿಸಿದ್ದಾರೆ.

ಸುರತ್ಕಲ್ ಟೋಲ್ಗೇಟ್ ತೆರವಿಗೆ ಸಂಬಂಧಿಸಿದಂತೆ ಕೇಂದ್ರ ಸರಕಾರದಿಂದ ಅಂತಿಮ ಪ್ರಕ್ರಿಯೆಗಳು ನಡೆಯುತ್ತಿವೆ. ಸರಕಾರವು ಅಧಿಕೃತವಾಗಿ ಗೆಜೆಟ್ ನೋಟಿಫಿಕೇಶನ್ ಹೊರಡಿಸುವವರೆಗೂ ಧರಣಿಯನ್ನು ಮುಂದೂಡುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕುಮಾರ್ ನಿನ್ನೆ ಮನವಿ ಮಾಡಿದ್ದಾರೆ.


ಇನ್ನೊಂದೆಡೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅವರು ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಟೋಲ್ ಗೇಟ್ ಸಮೀಪದ 200 ಮೀಟರ್ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ 6ರಿಂದ ನವೆಂಬರ್ 3ರ ಸಂಜೆ 6ರವರೆಗೆ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆ ವಿಧಿಸಿ ಆದೇಶಿಸಿದ್ದಾರೆ.
ಕಾನೂನು ಸುವ್ಯವಸ್ಥೆ ಹದಗೆಡುವ, ಸಾರ್ವಜನಿಕರ ಸುರಕ್ಷತೆ ಕಾಪಾಡುವ ಮತ್ತು ಟೋಲ್ ಗೇಟ್ನ ಭದ್ರತೆಯ ಹಿತದೃಷ್ಠಿಯಿಂದ ಸೆಕ್ಷನ್ ಜಾರಿ ಮಾಡಲಾಗಿದೆ ಎಂದು ಕಮಿಷನರ್ ಹೇಳಿದ್ದಾರೆ. ಆದರೆ ಪ್ರತಿಭಟನಾಕಾರರು ಈಗಾಗಲೇ 200 ಮೀಟರ್ ವ್ಯಾಪ್ತಿಯಿಂದ ಹೊರತಾದ ಪ್ರದೇಶದಲ್ಲಿ ತಮ್ಮ ಪ್ರತಿಭಟನೆಯನ್ನು ಆರಂಭಿಸುವುದಾಗಿ ಹೇಳಿದ್ದಾರೆ.
ಅದೇ ರೀತಿ ಇದೀಗ ಇಂದು ಮತ್ತೆ ಟೋಲ್ಗೇಟ್ ಬಳಿ ಹೋರಾಟಗಾರರು ನಿಷೇಧಾಜ್ಞೆ ಇರುವ ವ್ಯಾಪ್ತಿಯನ್ನು ಹೊರತುಪಡಿಸಿ ಮತ್ತೆ ಪ್ರತಿಭಟನೆ ಆರಂಭಿಸಿದ್ದಾರೆ.
ವರದಿ: ಅದ್ದಿ ಬೊಳ್ಳೂರು
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?