ಬೆಂಗಳೂರು: ಆಸ್ಪತ್ರೆಗಳಲ್ಲಿ ವೈದ್ಯರು, ವೈದ್ಯಾಧಿಕಾರಿಗಳು ಅಮಾನವೀಯವಾಗಿ ನಡೆದುಕೊಂಡರೆ ಕೇವಲ ಅಮಾನತಲ್ಲ, ಕೆಲಸದಿಂದಲೇ ವಜಾ ಮಾಡಲಾಗುವುದು. ಈ ಕುರಿತು ವಜಾ ಮಾಡಲು ಕಾನೂನಿನಲ್ಲಿ ಬದಲಾವಣೆ ತರಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ತಾಯಿ ಹಾಗೂ ನವಜಾತ ಶಿಶುಗಳ ಮರಣದ ದುರ್ಘಟನೆ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಅಧಿವೇಶನದಲ್ಲೇ ಕಾನೂನು ತಿದ್ದುಪಡಿ ತರಲು ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದರು.
ನತದೃಷ್ಟ ಹೆಣ್ಣುಮಗಳನ್ನು ಬಾಲಕಿಯರ ಮಂದಿರಕ್ಕೆ ದಾಖಲಿಸಲಾಗಿದೆ. ಆಕೆಗೆ ಸರ್ಕಾರದಿಂದಲೇ 5 ಲಕ್ಷ ರೂ. ಎಫ್ಡಿ ಇರಿಸಲು ಕ್ರಮ ವಹಿಸಲಾಗಿದೆ. ಹಾಗೆಯೇ ಆಕೆಯ ಶೈಕ್ಷಣಿಕ ಭವಿಷ್ಯವನ್ನೂ ರೂಪಿಸಲಾಗುವುದು. ಈ ಘಟನೆಯಲ್ಲಿ ಅಮಾನವೀಯವಾಗಿ ನಡೆದುಕೊಂಡ ವೈದ್ಯರು, ಸಿಬ್ಬಂದಿಗೆ ಹಾಗೂ ಜಿಲ್ಲಾ ಸರ್ಜನ್ ಗೆ, ಆಡಳಿತ ವೈಫಲ್ಯ ಎಂದು ಪರಿಗಣಿಸಿ ಕಾರಣ ಕೇಳಿ ನೋಟಿಸ್ ನೀಡಲಾಗಿದೆ. ಕರ್ತವ್ಯದಲ್ಲಿರುವ ವೈದ್ಯರಿಗೆ ಕೂಡ ಪ್ರಕರಣದ ಗಂಭೀರತೆ ಬಗ್ಗೆಯೂ ತಿಳಿಸಲಾಗಿದೆ. ಹಾಗೆಯೇ ಅವರಿಗೂ ಶೋಕಾಸ್ ನೋಟಿಸ್ ನೀಡಿ 24 ಗಂಟೆಯೊಳಗೆ ಉತ್ತರ ನೀಡಲು ಸೂಚಿಸಲಾಗಿದೆ ಎಂದು ತಿಳಿಸಿದರು.
ಈ ರೀತಿಯ ಘಟನೆ ಎಂದೂ ಮರುಕಳಿಸಬಾರದು. ಅದಕ್ಕಾಗಿ ಎಲ್ಲಾ ಕ್ರಮಗಳನ್ನು ವಹಿಸಲಾಗಿದೆ. ಯಾವುದೇ ರೋಗಿ ತುರ್ತು ಪರಿಸ್ಥಿತಿಯಲ್ಲಿ ಆಸ್ಪತ್ರೆಗೆ ಬಂದಾಗ ಯಾವ ದಾಖಲೆಗಳೂ ಮುಖ್ಯವಲ್ಲ. ತಾಯಿ ಕಾರ್ಡ್, ಆಧಾರ್ ಕಾರ್ಡ್ಗಳನ್ನು ಚಿಕಿತ್ಸೆ ನೀಡಿದ ಬಳಿಕವೂ ಕೇಳಬಹುದು. ಈ ಬಗ್ಗೆ ಹಿಂದಿನಿಂದಲೂ ಸೂಚನೆ ಇದೆ. ಖಾಸಗಿ ಆಸ್ಪತ್ರೆಗಳಲ್ಲಿ 76 ತುರ್ತು ಸೇವೆಗಳನ್ನು ಜೋಡಿಸಲಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಈ ಸೇವೆಗಳು ಇಲ್ಲವಾದರೆ, ಖಾಸಗಿ ಆಸ್ಪತ್ರೆಯಲ್ಲಿ ಆ ಸೇವೆ ಪಡೆಯಬಹುದು. ಆಗ ಸರ್ಕಾರವೇ ವೆಚ್ಚ ಭರಿಸುತ್ತದೆ ಎಂದರು.
ಕರಾಳ ಘಟನೆ
ಎಲ್ಲಾ ಸೌಲಭ್ಯಗಳು ಇದ್ದರೂ, ಆರೋಗ್ಯ ಸಿಬ್ಬಂದಿ ಮಾಡಿದ ಕೆಲಸದಿಂದ ಸರ್ಕಾರಕ್ಕೆ ಮುಜುಗರವಾಗಿದೆ. ಇದು ಇಡೀ ಮಾನವ ಸಂಕುಲಕ್ಕೆ ಕರಾಳ ದಿನವಾಗಿದೆ. ಇದಕ್ಕಾಗಿ ನಾನು ಬಹಳ ವಿಷಾದ, ಸಹಾನುಭೂತಿ ವ್ಯಕ್ತಪಡಿಸುತ್ತೇನೆ ಎಂದರು.
ಈ ಕುಟುಂಬದ ಸಂಬಂಧಿಕರನ್ನು ಪತ್ತೆ ಮಾಡಲು 36 ಗಂಟೆಗಳಿಂದ ಪೊಲೀಸರು ಶ್ರಮಿಸುತ್ತಿದ್ದಾರೆ. ಆದರೆ ಯಾರೂ ಇನ್ನೂ ಮುಂದೆ ಬಂದಿಲ್ಲ. ಇಂತಹ ಪರಿಸ್ಥಿತಿ ಇದ್ದರೂ, ಸಂಪೂರ್ಣ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಳ್ಳಲಿದೆ ಎಂದರು.
ಗರ್ಭಿಣಿ ಯಾವುದೇ ರಾಜ್ಯದವರಾಗಿದ್ದರೂ, ದಾಖಲೆ ಇಲ್ಲದಿದ್ದರೂ ಆಸ್ಪತ್ರೆಗೆ ಬಂದಾಗ ಚಿಕಿತ್ಸೆ ನೀಡಿ ಹೆರಿಗೆ ಮಾಡಿಸಬೇಕಿತ್ತು. ಮಾನವೀಯತೆಯಿಂದ ಅವರೊಂದಿಗೆ ನಡೆದುಕೊಳ್ಳಬೇಕಿತ್ತು.ಇಲ್ಲಿ ದಾಖಲೆ ಮುಖ್ಯವಲ್ಲ, ಜೀವ ಮುಖ್ಯ. ಕೆಲವರಿಂದ ಆದ ಈ ಘಟನೆಯಿಂದ ಇಡೀ ವ್ಯವಸ್ಥೆಗೆ ಕೆಟ್ಟ ಹೆಸರು ಬಂದಿದೆ ಎಂದು ಬೇಸರ ವ್ಯಕ್ತಪಡಿಸಿದರು
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ