ಮಂಗಳೂರು,ನ.9: ಇಲ್ಲಿನ ಹೊರವಲಯದ ಅತಿ ಪುರಾಣ ಮಳಲಿ ಮಸೀದಿಯ ಕಾಮಗಾರಿ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ನ ಅರ್ಜಿಯನ್ನು ಮಂಗಳೂರು ನ್ಯಾಯಾಲಯ ಸ್ವೀಕರಿಸಿದೆ.
ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್, ಮಸೀದಿಯ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ತೀರ್ಪುನೀಡಿದೆ.
ಮಸೀದಿ ಕಾಮಗಾರಿ ತಡೆಯಾಜ್ಞೆಯನ್ನು ತೆರವುಗೊಳಿಸಿ, ವಿಎಚ್ ಪಿ ಅರ್ಜಿ ವಜಾಗೊಳಿಸುವಂತೆ ಮಸೀದಿ ಕಮಿಟಿ ಸಲ್ಲಿಸಿದ ಅರ್ಜಿ ಇದೀಗ ವಜಾಗೊಂಡಿದೆ.
ಈ ಕುರಿತ ಅರ್ಜಿ ವಿಚಾರಣೆ ಸಿವಿಲ್ ಕೋರ್ಟ್ ವ್ಯಾಪ್ತಿಯಲ್ಲಿ ನಡೆಯಲಿದೆ ಎಂದು ತೀರ್ಪಿನಲ್ಲಿ ತಿಳಿಸಲಾಗಿದೆ. ಮುಂದಿನ ವಿಚಾರಣೆ 2023 ರ ಜನವರಿ ಮೊದಲ ವಾರಕ್ಕೆ ಮುಂದೂಡಲಾಗಿದೆ.
ಸುಮಾರು 900 ವರ್ಷಗಳ ಇತಿಹಾಸವಿರುವ ಮಳಲಿ ಪೇಟೆ ಜುಮಾ ಮಸೀದಿಯನ್ನು ನವೀಕರಣಗೊಳಿಸಲು ಉದ್ದೇಶಿಸಲಾಗಿತ್ತು. ಅದರಂತೆ ಒಳಗಿನ ಮಸೀದಿಯ ಇತಿಹಾಸಕ್ಕೆ ಧಕ್ಕೆಯಾಗದಂತೆ ರಕ್ಷಿಸಿ ಹೊರಭಾಗವನ್ನು ಕೆಡವಿ ನವೀಕರಣ ಮಾಡುವುದಕ್ಕಾಗಿ ಹೊರಗಿನ ಪಾರ್ಶ್ವವನ್ನು ಕೆಡವಲಾಗಿತ್ತು.
ಈ ನಡುವೆ ಯಾರೋ ಕಿಡಿಗೇಡಿಗಳು ಒಳಗಿನ ಮಸೀದಿಯ ಚಿತ್ರವನ್ನು ದೇವಸ್ಥಾನ ಎಂದು ಬಿಂಬಿಸಿ ಸಾಮಾಜಿಕ ಜಾಲತಾಣದಲ್ಲಿ ಸಂದೇಶಗಳನ್ನು ಹರಡಿರುವುದು ವಿವಾದಕ್ಕೆ ಕಾರಣವಾಯಿತು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ