ಮಂಗಳೂರು,ನ.9: ಇಲ್ಲಿನ ಹೊರವಲಯದ ಅತಿ ಪುರಾಣ ಮಳಲಿ ಮಸೀದಿಯ ಕಾಮಗಾರಿ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ನ ಅರ್ಜಿಯನ್ನು ಮಂಗಳೂರು ನ್ಯಾಯಾಲಯ ಸ್ವೀಕರಿಸಿದೆ.
ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್, ಮಸೀದಿಯ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ತೀರ್ಪುನೀಡಿದೆ.
ಮಸೀದಿ ಕಾಮಗಾರಿ ತಡೆಯಾಜ್ಞೆಯನ್ನು ತೆರವುಗೊಳಿಸಿ, ವಿಎಚ್ ಪಿ ಅರ್ಜಿ ವಜಾಗೊಳಿಸುವಂತೆ ಮಸೀದಿ ಕಮಿಟಿ ಸಲ್ಲಿಸಿದ ಅರ್ಜಿ ಇದೀಗ ವಜಾಗೊಂಡಿದೆ.
ಈ ಕುರಿತ ಅರ್ಜಿ ವಿಚಾರಣೆ ಸಿವಿಲ್ ಕೋರ್ಟ್ ವ್ಯಾಪ್ತಿಯಲ್ಲಿ ನಡೆಯಲಿದೆ ಎಂದು ತೀರ್ಪಿನಲ್ಲಿ ತಿಳಿಸಲಾಗಿದೆ. ಮುಂದಿನ ವಿಚಾರಣೆ 2023 ರ ಜನವರಿ ಮೊದಲ ವಾರಕ್ಕೆ ಮುಂದೂಡಲಾಗಿದೆ.
ಸುಮಾರು 900 ವರ್ಷಗಳ ಇತಿಹಾಸವಿರುವ ಮಳಲಿ ಪೇಟೆ ಜುಮಾ ಮಸೀದಿಯನ್ನು ನವೀಕರಣಗೊಳಿಸಲು ಉದ್ದೇಶಿಸಲಾಗಿತ್ತು. ಅದರಂತೆ ಒಳಗಿನ ಮಸೀದಿಯ ಇತಿಹಾಸಕ್ಕೆ ಧಕ್ಕೆಯಾಗದಂತೆ ರಕ್ಷಿಸಿ ಹೊರಭಾಗವನ್ನು ಕೆಡವಿ ನವೀಕರಣ ಮಾಡುವುದಕ್ಕಾಗಿ ಹೊರಗಿನ ಪಾರ್ಶ್ವವನ್ನು ಕೆಡವಲಾಗಿತ್ತು.
ಈ ನಡುವೆ ಯಾರೋ ಕಿಡಿಗೇಡಿಗಳು ಒಳಗಿನ ಮಸೀದಿಯ ಚಿತ್ರವನ್ನು ದೇವಸ್ಥಾನ ಎಂದು ಬಿಂಬಿಸಿ ಸಾಮಾಜಿಕ ಜಾಲತಾಣದಲ್ಲಿ ಸಂದೇಶಗಳನ್ನು ಹರಡಿರುವುದು ವಿವಾದಕ್ಕೆ ಕಾರಣವಾಯಿತು.
















ಇನ್ನಷ್ಟು ಸುದ್ದಿಗಳು
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ