ಮಂಗಳೂರು: ಜಾಮಿಯಾ ಮಸೀದಿ ಮಳಲಿ ಪೇಟೆಗೆ ಸಂಭಂದಿಸಿದಂತೆ ಇಂದು ಮಾನ್ಯ 3 ನೆ ಸಿವಿಲ್ ಮತ್ತು ಜೆ.ಎಂ. ಎಫ್.ಸಿ ನ್ಯಾಯಾಲಯ ವ್ಯಾಜ್ಯದ ವ್ಯಾಪ್ತಿಯ ಬಗ್ಗೆಗಿನ ಮಸೀದಿ ಆಡಳಿತ ಮಂಡಳಿಯ ಅರ್ಜಿಯನ್ನು ವಜಾಗೊಳಿಸಿ, ತನಿಖೆಯ ವ್ಯಾಪ್ತಿಯನ್ನು ಸಿವಿಲ್ ನ್ಯಾಯಾಲಯದ ವ್ಯಾಪ್ತಿಯಲ್ಲಿಯೇ ಮುಂದುವರಿಸಿ ಕೊಂಡು ಹೋಗುವ ತೀರ್ಪು ನೀಡಿದೆ.
ಈ ಬೆಳವಣಿಗೆಯನ್ನು ಕೆಲವು ಸಂಘಟನೆಗಳು ಪತ್ರಿಕಾ ಹೇಳಿಕೆಯ ಮೂಲಕ ವೈಭವೀಕರಿಸಿ, ನ್ಯಾಯಲಯ ವ್ಯಾಪ್ತಿಯ ವಿಷಯಗಳನ್ನು ಪ್ರಸ್ತಾಪಿಸಿ ವ್ಯಾಜ್ಯದ ಬಗ್ಗೆಗಿನ ಮಾನ್ಯ ನ್ಯಾಯಾಲಯದ ಇತಿ ಮಿತಿ ಯನ್ನು ಮೀರಿ ವಿಷಯವನ್ನು ಸಾರ್ವಜನಿಕವಾಗಿ ಬಿಂಬಿಸುವುದು ಕಂಡು ಬರುತ್ತಿದೆ.ಇದು ಕಾನೂನಿನ ನಡೆಯ ಪ್ರಕ್ರಿಯೆಗೆ ವಿರುದ್ದವಾದ ನಡೆ ಆಗಿರುತ್ತದೆ ಎಂದು ಮಾಜಿ ಮೇಯರ್ ಕೆ.ಅಶ್ರಫ್ ಅವರು ಪತ್ರಿಕಾ ಹೇಳಿಕೆ ಮೂಲಕ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸಂಘಟನೆಗಳ ಇಂತಹ ಹೇಳಿಕೆಗಳು ಸರಿಯಲ್ಲ ಮತ್ತು ಕಾನೂನಿಗೆ ವಿರುದ್ದವಾದ ನಡೆ ಆಗಿರುತ್ತದೆ. ಇದು ಸಾರ್ವಜನಿಕ ಗೊಂದಲ ಸೃಷ್ಟಿಗೆ ಕೂಡಾ ಕಾರಣ ಆಗುತ್ತದೆ. ಆದುದರಿಂದ ಸಂಘಟನೆಗಳ ಅಥವಾ ವ್ಯಕ್ತಿಗಳ ಅಂತಹ ವ್ಯಾಪ್ತಿಯೇತರ ಹೇಳಿಕೆಯನ್ನು ಪರಿಗಣಿಸದೆ ಇರುವಂತೆ ಸಾರ್ವಜನಿಕರೊಂದಿಗೆ ಮಾಜಿ ಮೇಯರ್ ಕೆ.ಅಶ್ರಫ್(ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ) ವಿನಂತಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ