ಮಂಗಳೂರು: ಜಾಮಿಯಾ ಮಸೀದಿ ಮಳಲಿ ಪೇಟೆಗೆ ಸಂಭಂದಿಸಿದಂತೆ ಇಂದು ಮಾನ್ಯ 3 ನೆ ಸಿವಿಲ್ ಮತ್ತು ಜೆ.ಎಂ. ಎಫ್.ಸಿ ನ್ಯಾಯಾಲಯ ವ್ಯಾಜ್ಯದ ವ್ಯಾಪ್ತಿಯ ಬಗ್ಗೆಗಿನ ಮಸೀದಿ ಆಡಳಿತ ಮಂಡಳಿಯ ಅರ್ಜಿಯನ್ನು ವಜಾಗೊಳಿಸಿ, ತನಿಖೆಯ ವ್ಯಾಪ್ತಿಯನ್ನು ಸಿವಿಲ್ ನ್ಯಾಯಾಲಯದ ವ್ಯಾಪ್ತಿಯಲ್ಲಿಯೇ ಮುಂದುವರಿಸಿ ಕೊಂಡು ಹೋಗುವ ತೀರ್ಪು ನೀಡಿದೆ.
ಈ ಬೆಳವಣಿಗೆಯನ್ನು ಕೆಲವು ಸಂಘಟನೆಗಳು ಪತ್ರಿಕಾ ಹೇಳಿಕೆಯ ಮೂಲಕ ವೈಭವೀಕರಿಸಿ, ನ್ಯಾಯಲಯ ವ್ಯಾಪ್ತಿಯ ವಿಷಯಗಳನ್ನು ಪ್ರಸ್ತಾಪಿಸಿ ವ್ಯಾಜ್ಯದ ಬಗ್ಗೆಗಿನ ಮಾನ್ಯ ನ್ಯಾಯಾಲಯದ ಇತಿ ಮಿತಿ ಯನ್ನು ಮೀರಿ ವಿಷಯವನ್ನು ಸಾರ್ವಜನಿಕವಾಗಿ ಬಿಂಬಿಸುವುದು ಕಂಡು ಬರುತ್ತಿದೆ.ಇದು ಕಾನೂನಿನ ನಡೆಯ ಪ್ರಕ್ರಿಯೆಗೆ ವಿರುದ್ದವಾದ ನಡೆ ಆಗಿರುತ್ತದೆ ಎಂದು ಮಾಜಿ ಮೇಯರ್ ಕೆ.ಅಶ್ರಫ್ ಅವರು ಪತ್ರಿಕಾ ಹೇಳಿಕೆ ಮೂಲಕ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸಂಘಟನೆಗಳ ಇಂತಹ ಹೇಳಿಕೆಗಳು ಸರಿಯಲ್ಲ ಮತ್ತು ಕಾನೂನಿಗೆ ವಿರುದ್ದವಾದ ನಡೆ ಆಗಿರುತ್ತದೆ. ಇದು ಸಾರ್ವಜನಿಕ ಗೊಂದಲ ಸೃಷ್ಟಿಗೆ ಕೂಡಾ ಕಾರಣ ಆಗುತ್ತದೆ. ಆದುದರಿಂದ ಸಂಘಟನೆಗಳ ಅಥವಾ ವ್ಯಕ್ತಿಗಳ ಅಂತಹ ವ್ಯಾಪ್ತಿಯೇತರ ಹೇಳಿಕೆಯನ್ನು ಪರಿಗಣಿಸದೆ ಇರುವಂತೆ ಸಾರ್ವಜನಿಕರೊಂದಿಗೆ ಮಾಜಿ ಮೇಯರ್ ಕೆ.ಅಶ್ರಫ್(ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ) ವಿನಂತಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಗುರುವಾಯನಕೆರೆಯಲ್ಲಿ ನಾಳೆ ‘ಗ್ರ್ಯಾಂಡ್ ಹುಬ್ಬುರ್ರಸೂಲ್ ಕಾನ್ಫರೆನ್ಸ್’ ಹಾಗೂ ಬೃಹತ್ ‘ಸಮಸ್ತ ಸೆಂಟಿನರಿ ಜಾಥಾ’
ಸಾಗ್ ಕುಟುಂಬದ ‘ಗ್ರ್ಯಾಂಡ್ ಫ್ಯಾಮಿಲಿ ಮೀಟ್-2026: ಮೀಲಾದುನ್ನಬಿ ﷺ ಸಮಾವೇಶ ಹಾಗೂ ದುಆ ಮಜ್ಲಿಸ್
BFR ಕಾಟಿಪಳ್ಳ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ- ಆನ್ಲೈನ್ ಸ್ಪರ್ಧೆಗಳು
ಕರಾವಳಿ ಐಕ್ಯತಾ ವೇದಿಕೆಯಿಂದ 80ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆ
ನೆಲ್ಲಿಕಾರ್ ಮದ್ರಸ ದಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ
ಬಜಗೋಳಿ ನೂರುಲ್ ಹುದಾ ಜುಮ್ಮಾ ಮಸೀದಿ: ಸಂಭ್ರಮದ ಸ್ವಾತಂತ್ರ್ಯೋತ್ಸವ
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ