ಮೂಡುಬಿದಿರೆ: ಅಲ್ ಮಫಾಝ್ ಮೂಡಬಿದ್ರೆ ಸಂಸ್ಥೆಯಿಂದ ಪ್ರಾಂತ್ಯ ಗ್ರಾಮದಲ್ಲಿ ನಿರ್ಮಿಸಲಾದ ಕಟ್ಟಡದ ಕಡಿತಗೊಳಿಸಿರುವ ವಿದ್ಯುತ್ ಸಂಪರ್ಕವನ್ನು ಪುನರ್ಜೋಡಿಸುವಂತೆ ಮೆಸ್ಕಾಂಗೆ ಉಚ್ಚನ್ಯಾಯಾಲಯ ಆದೇಶ ನೀಡಿದೆ.
ಪುರಸಭೆಯಿಂದ ಪರವಾನಿಗೆ ಪಡೆದು ಕಟ್ಟಡವನ್ನು ಕಟ್ಟಲಾಗಿತ್ತು,ಆ ಬಳಿಕ ಸದ್ರಿ ಕಟ್ಟಡವನ್ನು ವಾಣಿಜ್ಯ ಬಳಕೆಯ ಉದ್ದೇಶದಿಂದ ಕಾನೂನು ಪ್ರಕಾರವೇ ಪುರಸಭೆಗೆ ಮನವಿಯನ್ನು ಸಲ್ಲಿಸಲಾಗಿತ್ತು.ಆ ಸಂದರ್ಭದಲ್ಲಿ ಅಶಾಂತಿಯನ್ನು ಉಂಟು ಮಾಡುವ ಉದ್ದೇಶದಿಂದಲೇ ಕೆಲವರು ಆಕ್ಷೇಪವನ್ನು ಸಲ್ಲಿಸಿದ್ದರು. ಈ ಬಗ್ಗೆ ಪುರಸಭೆಯ ಕೌನ್ಸಿಲ್ ನಲ್ಲಿ ಮೀಟಿಂಗ್ ಹಂತದಲ್ಲಿ ಇರುವಾಗಲೇ ಒತ್ತಡಕ್ಕೆ ಮಣಿದು ಅಧಿಕಾರಿಗಳು ಅಲ್ ಮಫಾಝ್ ಗೆ ಯಾವುದೇ ಅವಕಾಶವನ್ನು ನೀಡದೇ ಕಾನೂನು ಬಾಹಿರವಾಗಿ ಕಟ್ಟಡದ ವಿದ್ಯುತ್ ಸಂಪರ್ಕ ವನ್ನುಕಡಿತ ಗೊಳಿಸಿದ್ದರು.
ವಿದ್ಯುತ್ ಕಡಿತ ಗೊಳಿಸಿದ ಬಗ್ಗೆ ಹಾಗೂ ಪರವಾನಿಗೆ ನೀಡುವ ಬಗ್ಗೆ ಪುರಸಭೆಯು ನೊಟೀಸ್ ಮಾಡಿರುವ ಬಗ್ಗೆ ಬೆಂಗಳೂರು ಮಾನ್ಯ ಉಚ್ಚನ್ಯಾಯಾಲಯದಲ್ಲಿ ದಾವೆ ಹೂಡಿದ್ದು. ಪ್ರಕರಣವನ್ನು ಗಮನಿಸಿ ಮಾನ್ಯ ಉಚ್ಚನ್ಯಾಯಾಲಯವು ಕಾನೂನು ಬಾಹಿರ ವಾಗಿ ಯಾವುದೇ ಕ್ರಮ ಜರುಗಿಸದಂತೆ ತಡೆಯಾಜ್ಞೆಯನ್ನು ನೀಡಿದೆ. ಹಾಗೂ, ಕಡಿತಗೊಳಿಸಿರುವ ವಿದ್ಯುತ್ ಸಂಪರ್ಕವನ್ನು ತಕ್ಷಣವೇ ಪುನರ್ಜೋಡಿಸುವಂತೆ ಮೆಸ್ಕಾಂಗೆ ಆದೇಶ ನೀಡಿದೆ. ಮೆಸ್ಕಾಂ ಇಲಾಖೆಯು ಉಚ್ಚನ್ಯಾಯಾಲಯದ ಆದೇಶದಂತೆ ಕಟ್ಟಡಕ್ಕೆ ವಿದ್ಯುತ್ ಸಂಪರ್ಕ ವನ್ನು ಪುನರ್ಜೊಡಣೆ
ಮಾಡಿರುತ್ತಾರೆ. ಕಾನೂನು ಹೋರಾಟದಲ್ಲಿ ಅಲ್ ಮಫಾಝ್ ಮೂಡಬಿದ್ರೆ ಸಂಸ್ಥೆಗೆ ಜಯವಾಗಿದೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ