ಮೂಡುಬಿದಿರೆ: ಅಲ್ ಮಫಾಝ್ ಮೂಡಬಿದ್ರೆ ಸಂಸ್ಥೆಯಿಂದ ಪ್ರಾಂತ್ಯ ಗ್ರಾಮದಲ್ಲಿ ನಿರ್ಮಿಸಲಾದ ಕಟ್ಟಡದ ಕಡಿತಗೊಳಿಸಿರುವ ವಿದ್ಯುತ್ ಸಂಪರ್ಕವನ್ನು ಪುನರ್ಜೋಡಿಸುವಂತೆ ಮೆಸ್ಕಾಂಗೆ ಉಚ್ಚನ್ಯಾಯಾಲಯ ಆದೇಶ ನೀಡಿದೆ.
ಪುರಸಭೆಯಿಂದ ಪರವಾನಿಗೆ ಪಡೆದು ಕಟ್ಟಡವನ್ನು ಕಟ್ಟಲಾಗಿತ್ತು,ಆ ಬಳಿಕ ಸದ್ರಿ ಕಟ್ಟಡವನ್ನು ವಾಣಿಜ್ಯ ಬಳಕೆಯ ಉದ್ದೇಶದಿಂದ ಕಾನೂನು ಪ್ರಕಾರವೇ ಪುರಸಭೆಗೆ ಮನವಿಯನ್ನು ಸಲ್ಲಿಸಲಾಗಿತ್ತು.ಆ ಸಂದರ್ಭದಲ್ಲಿ ಅಶಾಂತಿಯನ್ನು ಉಂಟು ಮಾಡುವ ಉದ್ದೇಶದಿಂದಲೇ ಕೆಲವರು ಆಕ್ಷೇಪವನ್ನು ಸಲ್ಲಿಸಿದ್ದರು. ಈ ಬಗ್ಗೆ ಪುರಸಭೆಯ ಕೌನ್ಸಿಲ್ ನಲ್ಲಿ ಮೀಟಿಂಗ್ ಹಂತದಲ್ಲಿ ಇರುವಾಗಲೇ ಒತ್ತಡಕ್ಕೆ ಮಣಿದು ಅಧಿಕಾರಿಗಳು ಅಲ್ ಮಫಾಝ್ ಗೆ ಯಾವುದೇ ಅವಕಾಶವನ್ನು ನೀಡದೇ ಕಾನೂನು ಬಾಹಿರವಾಗಿ ಕಟ್ಟಡದ ವಿದ್ಯುತ್ ಸಂಪರ್ಕ ವನ್ನುಕಡಿತ ಗೊಳಿಸಿದ್ದರು.
ವಿದ್ಯುತ್ ಕಡಿತ ಗೊಳಿಸಿದ ಬಗ್ಗೆ ಹಾಗೂ ಪರವಾನಿಗೆ ನೀಡುವ ಬಗ್ಗೆ ಪುರಸಭೆಯು ನೊಟೀಸ್ ಮಾಡಿರುವ ಬಗ್ಗೆ ಬೆಂಗಳೂರು ಮಾನ್ಯ ಉಚ್ಚನ್ಯಾಯಾಲಯದಲ್ಲಿ ದಾವೆ ಹೂಡಿದ್ದು. ಪ್ರಕರಣವನ್ನು ಗಮನಿಸಿ ಮಾನ್ಯ ಉಚ್ಚನ್ಯಾಯಾಲಯವು ಕಾನೂನು ಬಾಹಿರ ವಾಗಿ ಯಾವುದೇ ಕ್ರಮ ಜರುಗಿಸದಂತೆ ತಡೆಯಾಜ್ಞೆಯನ್ನು ನೀಡಿದೆ. ಹಾಗೂ, ಕಡಿತಗೊಳಿಸಿರುವ ವಿದ್ಯುತ್ ಸಂಪರ್ಕವನ್ನು ತಕ್ಷಣವೇ ಪುನರ್ಜೋಡಿಸುವಂತೆ ಮೆಸ್ಕಾಂಗೆ ಆದೇಶ ನೀಡಿದೆ. ಮೆಸ್ಕಾಂ ಇಲಾಖೆಯು ಉಚ್ಚನ್ಯಾಯಾಲಯದ ಆದೇಶದಂತೆ ಕಟ್ಟಡಕ್ಕೆ ವಿದ್ಯುತ್ ಸಂಪರ್ಕ ವನ್ನು ಪುನರ್ಜೊಡಣೆ
ಮಾಡಿರುತ್ತಾರೆ. ಕಾನೂನು ಹೋರಾಟದಲ್ಲಿ ಅಲ್ ಮಫಾಝ್ ಮೂಡಬಿದ್ರೆ ಸಂಸ್ಥೆಗೆ ಜಯವಾಗಿದೆ.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ