ಮಂಜನಾಡಿ: ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿ ಹಮ್ಮಿಕೊಂಡ ಉಸ್ವತುನ್ನಬಿ ಅಕಾಡೆಮಿಕ್ ಸೆಮಿನಾರ್ ಅಲ್ ಮದೀನಾದ ದಅವಾ ಕಾಲೇಜು ಲೈಬ್ರರಿ ಹಾಲ್ ನಲ್ಲಿ ನಡೆಯಿತು. “ಅಂತ್ಯಪ್ರವಾದಿ: ಬದುಕು ಮತ್ತು ಬಳುವಳಿಗಳು” ಎಂಬ ವಿಷಯದ ಕುರಿತು ರಾಷ್ಟ್ರದ ವಿವಿಧೆಡೆಯಿಂದ ಬಂದ ಹತ್ತು ಆಯ್ದ ಸಂಶೋಧಕರು ಪ್ರಬಂಧ ಮಂಡಿಸಿದರು.
ಪ್ರವಾದಿಯವರ ಆದರ್ಶಗಳು, ನಾಯಕತ್ವ ಗುಣಗಳು, ರಾಜತಾಂತ್ರಿಕ ನಡವಳಿಕೆಗಳು ಮುಂತಾದ ವಿಷಯಗಳತ್ತ ಬೆಳಕು ಹರಿಸುವ ಪ್ರಬಂಧಗಳನ್ನು ಮಂಡಿಸಿ ಚರ್ಚೆಗಳನ್ನು ಕೈಗೊಳ್ಳಲಾಯಿತು. ಪ್ರಬಂಧ ಮಂಡಿಸಲು ಆಯ್ಕೆಯಾದ ಸಂಶೋಧಕರನ್ನು ಶಾಸಕರಾದ ಯು ಟಿ ಖಾದರ್ ರವರು ಅನುಮೋದಿಸಿದರು.
ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷರಾದ ಅಬ್ದುಲ್ ಲತೀಫ್ ಸಅದಿಯವರ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮವನ್ನು ಅಲ್ ಮದೀನಾ ಮ್ಯಾನೇಜಿಂಗ್ ಡೈರೆಕ್ಟರ್ ಅಬ್ದುಲ್ ಖಾದರ್ ಸಖಾಫಿ ಉದ್ಘಾಟಿಸಿದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಮತ್ತು ರಾಜ್ಯ ದಅವಾ ಕಾರ್ಯದರ್ಶಿ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಇಂದಿರಾ ಗಾಂಧಿ ನ್ಯಾಷನಲ್ ಟ್ರೈಬಲ್ ವಿವಿ ಫೆಲೋ ರಾಶಿದ್ ನೂರಾನಿಯವರು ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.

ಅಲ್ ಮದೀನಾ ಎಕ್ಸಿಕ್ಯೂಟಿವ್ ಡೈರೆಕ್ಟರ್ ಮುಹಮ್ಮದ್ ಕುಂಜಿ ಅಮ್ಜದಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಎಸ್ಸೆಸ್ಸೆಫ್ ದಅವಾ ಕನ್ವೀನರ್ ಖುಬೈಬ್ ತಂಗಳ್,ಅಲ್ ಮದೀನಾ ಪ್ರಾಧ್ಯಾಪಕರುಗಳಾದ ಅಬೂಸ್ವಾಲಿಹ್ ಅಝ್ಹರಿ, ಅಬ್ದುರಹ್ಮಾನ್ ಮರ್ಝುಖಿ ವಳಾಲು, ಅನ್ಸಾರ್ ಮಾಸ್ಟರ್ ಫಜೀರ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ರಾಜ್ಯ ದಅವಾ ಸಿಂಡಿಕೇಟ್ ಸದಸ್ಯ ನಝೀರ್ ಅಬ್ಬಾಸ್ ಸುರೈಜಿ ಸ್ವಾಗತಿಸಿ ಹಸನ್ ಮುಈನ್ ನೂರಾನಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ