ಅಬುಧಾಬಿ: ರಾಷ್ಟ್ರೀಯ ದಿನಾಚರಣೆಯ ಅಂಗವಾಗಿ ಯುಎಇಯಲ್ಲಿ ಎರಡು ಸಾವಿರಕ್ಕೂ ಹೆಚ್ಚು ಕೈದಿಗಳನ್ನು ಬಿಡುಗಡೆ ಮಾಡುವುದಾಗಿ ಘೋಷಿಸಲಾಗಿದೆ. ಗಂಭೀರ ಅಪರಾಧಗಳಲ್ಲದ ಪ್ರಕರಣಗಳಲ್ಲಿ ಭಾಗಿಯಾಗಿರುವ ಕೈದಿಗಳಿಗೆ ಬಿಡುಗಡೆ ಭಾಗ್ಯ ಲಭಿಸಲಿದೆ.ಬಿಡುಗಡೆ ಪ್ರಕ್ರಿಯೆ ಆರಂಭವಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಯುಎಇ ಅಧ್ಯಕ್ಷ ಶೈಖ್ ಮುಹಮ್ಮದ್ ಬಿನ್ ಝಾಯಿದ್ ಆಲ್ ನಹ್ಯಾನ್ (Shaikh Muhammad Bin Zayed) ಅವರು 1530 ಕೈದಿಗಳನ್ನು ಬಿಡುಗಡೆ ಮಾಡಲು ಆದೇಶಿಸಿದರು. ವಿವಿಧ ಅಪರಾಧಗಳಿಗಾಗಿ ಜೈಲು ಶಿಕ್ಷೆಯನ್ನು ಅನುಭವಿಸಿದ ಕ್ಷಮಾಪಣೆ ಪಡೆದ ಕೈದಿಗಳ ಆರ್ಥಿಕ ಬಾಧ್ಯತೆಗಳನ್ನು ಇತ್ಯರ್ಥಗೊಳಿಸಲು ಶೈಖ್ ಮುಹಮ್ಮದ್ ಕರೆ ನೀಡಿದರು. ಕೈದಿಗಳಿಗೆ ಮರುಪರಿಶೀಲನೆ ಮತ್ತು ಹೊಸ ಜೀವನವನ್ನು ನಡೆಸಲು ದಾರಿ ಮಾಡಿಕೊಡುವುದಾಗಿದೆ ಬಿಡುಗಡೆಯ ಉದ್ದೇಶ ಎಂದು ಶೈಖ್ ಹೇಳಿದರು.
ಶಾರ್ಜಾ ಮತ್ತು ಫುಜೈರಾ ಆಡಳಿತಗಾರರು ಹೆಚ್ಚಿನ ಕೈದಿಗಳನ್ನು ಬಿಡುಗಡೆ ಮಾಡಲು ಆದೇಶಿಸಿದರು. ಶಾರ್ಜಾ ಎಮಿರೇಟ್ನಲ್ಲಿ 333 ಮತ್ತು ಫುಜೈರಾದಲ್ಲಿ 153 ಕೈದಿಗಳನ್ನು ರಾಷ್ಟ್ರೀಯ ದಿನಾಚರಣೆಯ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಈ ಬಗ್ಗೆ ಸುಪ್ರೀಂ ಕೌನ್ಸಿಲ್ ಸದಸ್ಯ ಮತ್ತು ಶಾರ್ಜಾ ಆಡಳಿತಗಾರ ಶೈಖ್ ಡಾ. ಸುಲ್ತಾನ್ ಬಿನ್ ಮುಹಮ್ಮದ್ ಅಲ್ ಖಾಸಿಮಿ, ಸುಪ್ರೀಂ ಕೌನ್ಸಿಲ್ ಸದಸ್ಯ ಮತ್ತು ಫುಜೈರಾದ ಆಡಳಿತಗಾರ ಶೈಖ್ ಹಮದ್ ಬಿನ್ ಮುಹಮ್ಮದ್ ಅಲ್ ಶರ್ಕಿ ಕೂಡ ಆದೇಶ ಹೊರಡಿಸಿದ್ದಾರೆ. ಪ್ರತಿ ವರ್ಷ, ಯುಎಇ ಅಧಿಕಾರಿಗಳು ಹಬ್ಬದ ದಿನಗಳಲ್ಲಿ ಕೈದಿಗಳನ್ನು ಬಿಡುಗಡೆ ಮಾಡುತ್ತಾರೆ.ಭಾರತೀಯರು ಸೇರಿದಂತೆ ಅನೇಕ ವಲಸಿಗರು ಇದರ ಫಲಾನುಭವಿಗಳಾಗಿದ್ದಾರೆ.
















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ