ರಿಯಾದ್: ಸೌದಿ ಅರೇಬಿಯಾದಲ್ಲಿ, ಸಾಮಾಜಿಕ ಮಾಧ್ಯಮಗಳ ಮೂಲಕ(Social Media) ಹಣಕಾಸಿನ ನೆರವು ಕೋರುವುದು ಶಿಕ್ಷಾರ್ಹವಾಗಿದೆ. ಇದು 50,000 ರಿಯಾಲ್ (10 ಲಕ್ಷ ರೂ.) ದಂಡ ಅಥವಾ ಆರು ತಿಂಗಳ ಜೈಲು ಶಿಕ್ಷೆ ವಿಧಿಸಬಹುದಾದ ಅಪರಾಧವಾಗಿದೆ ಎಂದು ವಕೀಲರು ಎಚ್ಚರಿಸಿದ್ದಾರೆ.
ಸಾಮಾಜಿಕ ಮಾಧ್ಯಮದ ಮೂಲಕ ಸಹಾಯಕ್ಕಾಗಿ ವಿನಂತಿಸುವುದು ಎಲೆಕ್ಟ್ರಾನಿಕ್ ಭಿಕ್ಷಾಟನೆಯ ಅಡಿಯಲ್ಲಿ ಬರುತ್ತದೆ ಎಂದು ವಕೀಲ ಸಾರಾ ಅಲ್ ಹರ್ಬಿ ಸೌದಿ ದೂರದರ್ಶನಕ್ಕೆ ಬಹಿರಂಗಪಡಿಸಿದ್ದಾರೆ.
ಸೌದಿ ಅರೇಬಿಯಾದಲ್ಲಿ ಸಹಾಯಕ್ಕಾಗಿ ಇಂತಹ ಬೇಡಿಕೆಗಳನ್ನು ಕಾನೂನುಬಾಹಿರ ಮತ್ತು ಭಿಕ್ಷೆ ಎಂದು ಪರಿಗಣಿಸಲಾಗುತ್ತದೆ ಎಂದು ಅವರು ಹೇಳಿದರು. ಭಿಕ್ಷುಕರು ಮತ್ತು ಅವರಿಗೆ ಸಹಾಯ ಮಾಡುವವರಿಗೆ ಆರು ತಿಂಗಳ ಜೈಲು ಶಿಕ್ಷೆ ಅಥವಾ 50,000 ರಿಯಾಲ್ ದಂಡ. ಅಪರಾಧ ಪುನರಾವರ್ತನೆಯಾದರೆ, ದಂಡವನ್ನು ದ್ವಿಗುಣಗೊಳಿಸಲಾಗುವುದು ಎಂದು ಅವರು ಹೇಳಿದರು. ಭಿಕ್ಷಾಟನೆಯಲ್ಲಿ ತೊಡಗಿರುವ ವಿದೇಶಿಯರನ್ನು ಶಿಕ್ಷೆಗೆ ಗುರಿಪಡಿಸಿದ ನಂತರ ಗಡೀಪಾರು ಮಾಡಲಾಗುತ್ತದೆ ಮತ್ತು ಸೌದಿ ಅರೇಬಿಯಾಕ್ಕೆ ಹಿಂತಿರುಗುವುದನ್ನು ನಿಷೇಧಿಸಲಾಗಿದೆ.
ಸೌದಿ ಅರೇಬಿಯಾದಲ್ಲಿ ಕಾನೂನುಬದ್ಧ ದತ್ತಿ ವೇದಿಕೆಗಳ ಮೂಲಕ ಅಗತ್ಯವಿರುವವರಿಗೆ ಸಹಾಯವನ್ನು ತಲುಪಿಸಲಾಗುತ್ತದೆ. ಸ್ಥಳೀಯರು ಮತ್ತು ವಿದೇಶಿಯರು ಕಾನೂನು ವಿಧಾನಗಳ ಮೂಲಕ ಮಾತ್ರ ದೇಣಿಗೆ ನೀಡಬೇಕು ಎಂದು ಸೌದಿ ಅಧಿಕಾರಿಗಳು ನೆನಪಿಸಿದ್ದಾರೆ. ಕಳೆದ ವರ್ಷ, ಸೌದಿ ಅರೇಬಿಯಾ ಇಹ್ಸಾನ್ ಪ್ಲಾಟ್ಫಾರ್ಮ್ (Ihsan Platform) ಅನ್ನು ಪ್ರಾರಂಭಿಸಿತು, ಇದು ಸ್ಮಾರ್ಟ್ಫೋನ್ ಅಪ್ಲಿಕೇಶನ್ಗಳ ಮೂಲಕ ಅಗತ್ಯವಿರುವವರಿಗೆ ಸಹಾಯವನ್ನು ತಲುಪಿಸುತ್ತದೆ.
ಕೆಲವು ದಿನಗಳ ಹಿಂದೆ, ಸೌದಿ ಅರೇಬಿಯಾದ ರಿಯಾದ್ನಲ್ಲಿ ವಿವಿಧ ಸ್ಥಳಗಳಲ್ಲಿ ಭಿಕ್ಷೆ ಬೇಡುತ್ತಿದ್ದ ಮೂವರು ವಲಸಿಗರನ್ನು ಬಂಧಿಸಲಾಯಿತು. ಮಿನರಲ್ ವಾಟರ್ ಬಾಟಲ್ ಗಳನ್ನು ಮಾರಾಟ ಮಾಡುತ್ತಿರುವ ನೆಪದಲ್ಲಿ ಸಿಗ್ನಲ್ ಗಳಲ್ಲಿ ನಿಂತು ಪರೋಕ್ಷವಾಗಿ ಭಿಕ್ಷೆ ಬೇಡುತ್ತಿದ್ದವರನ್ನು ಬಂಧಿಸಲಾಗಿದೆ.
ಇನ್ನೊಂದು ಸ್ಥಳದಲ್ಲಿ ಪರೋಕ್ಷವಾಗಿ ಭಿಕ್ಷೆ ಬೇಡುತ್ತಿದ್ದ ಇಬ್ಬರು ಪಾಕಿಸ್ತಾನಿಯರು ಮತ್ತು ಬಾಂಗ್ಲಾದೇಶದ ಮಹಿಳೆಯನ್ನು ಬಂಧಿಸಲಾಗಿದೆ. ಮೂವರು ಕಾನೂನುಬದ್ಧ ಇಖಾಮಾದಲ್ಲಿ ದೇಶದಲ್ಲಿ ವಾಸಿಸುತ್ತಿದ್ದಾರೆ ಎಂದು ಸಾರ್ವಜನಿಕ ಭದ್ರತಾ ಇಲಾಖೆ ತಿಳಿಸಿದೆ. ಭಿಕ್ಷೆ ಬೇಡುವ ಬಗ್ಗೆ ಮಾಹಿತಿ ಹೊಂದಿರುವವರು, ಮಕ್ಕಾ, ರಿಯಾದ್ ಮತ್ತು ಪೂರ್ವ ಪ್ರಾಂತ್ಯಗಳಲ್ಲಿ 911 ಮತ್ತು ಇತರ ಪ್ರಾಂತ್ಯಗಳಲ್ಲಿ 999 ಗೆ ಕರೆ ಮಾಡಲು ಅಧಿಕಾರಿಗಳು ಕೇಳಿದ್ದಾರೆ.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ