ಸೌದಿ ಅರೇಬಿಯಾ : ರಿಯಾದ್ ನಲ್ಲಿ ಕಳೆದ ಎರಡು ವಾರದ ಹಿಂದೆ ಮೃತಪಟ್ಟ ಸಕಲೇಶಪುರ ನಿವಾಸಿ ಅಯ್ಯೂಬ್ ಖಾನ್ ರವರ ಅಂತ್ಯಕ್ರಿಯೆಯು ಡಿಸೆಂಬರ್ 4 ಆದಿತ್ಯವಾರದಂದು ನಸೀಮಿನ ಖಬರ್ ಸ್ಥಾನದಲ್ಲಿ ಕುಟುಂಬಸ್ಥರು, ಸ್ನೇಹಿತರು ಮತ್ತು ಕೆಸಿಎಫ್ ಸದಸ್ಯರ ಸಮ್ಮುಖದಲ್ಲಿ ನಡೆಯಿತು.
ಮೃತರ ಅಂತ್ಯಸಂಸ್ಕಾರಕ್ಕೆ ಬೇಕಾದ ಎಲ್ಲಾ ದಾಖಲೆ ಪತ್ರಗಳು, ರಾಯಭಾರಿ ಕಛೇರಿಗೆ ಬೇಕಾದ ಕಡತಗಳು ಹಾಗೂ ಇನ್ನಿತರ ಎಲ್ಲಾ ವ್ಯವಸ್ಥೆಗಳನ್ನು ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ರಿಯಾದ್ ನಾಯಕರ ನೇತೃತ್ವದಲ್ಲಿ ಸರಿಪಡಿಸಿದ್ದರು.
ಈ ಪುಣ್ಯ ಕಾರ್ಯದಲ್ಲಿ ಕೈ ಜೋಡಿಸಿ ಸಹಕರಿಸಿದ ರಿಯಾದ್ ಝೋನ್ ಸಾಂತ್ವನ ಇಲಾಖೆ ಅಧ್ಯಕ್ಷರಾದ ಮಜೀದ್ ವಿಟ್ಲ, ಕಾರ್ಯದರ್ಶಿ ಅಶ್ರಫ್ ಕೆಎಮ್ಮೆಸ್, ದಮ್ಮಾಮ್ ಸಾಂತ್ವನ ಇಲಾಖೆ ಅಧ್ಯಕ್ಷರಾದ ಬಾಷಾ ಗಂಗಾವಳಿ, ಇಬ್ರಾಹಿಂ ಬಾಯ್ ಹಾಗೂ ಕೆಸಿಎಫ್ ನೇತಾರರಾದ ಫಾರೂಕ್ ಪಾಣೆಮಂಗಳೂರು, ಸಿದ್ದೀಕ್ ಮದನಿ, ಶಿಹಾಬುದ್ದೀನ್ ಹಳೆಯಂಗಡಿ, ಅಝೀಝ್ ಮೂಡಿಗೆರೆ ಮತ್ತು ಸಹಕರಿಸಿದ ಕುಟುಂಬಸ್ಥರು, ಸ್ನೇಹಿತರು ಎಲ್ಲರಿಗೂ ಕೆಸಿಎಫ್ ರಿಯಾದ್ ಝೋನ್ ಸಾಂತ್ವನ ಇಲಾಖೆಯು ಎಲ್ಲಾ ವಿಧದ ಕೃತಜ್ಞತೆ ಸಲ್ಲಿಸಿರುವುದಾಗಿ ಈ ಮೂಲಕ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೃತರು ಪತ್ನಿ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ