ಮಂಗಳೂರು: ಮಂಗಳೂರಿನ ಕಂಕನಾಡಿ ಸುಲ್ತಾನ್ ಗೋಲ್ಡ್(Sultan Gold) ಗೆ ಬಜರಂಗ ದಳ ಪುಂಡರು, ಮುಸ್ಲಿಮ್ ಸೇಲ್ಸ್ ಪ್ರತಿನಿಧಿ ಯುವಕನನ್ನು, ಅದೇ ಸಂಸ್ಥೆಯಲ್ಲಿ ನೌಕರಿ ಮಾಡುತ್ತಿರುವ ಯುವತಿಯೊಂದಿಗೆ ಸಂಬಂಧ ಕಲ್ಪಿಸಿ, ಸುಲ್ತಾನ್ ಗೋಲ್ಡ್ ಸ್ವರ್ಣಾಭರಣ ಮಳಿಗೆಗೆ ನುಗ್ಗಿ ತೀವ್ರ ಹಲ್ಲೆ ನಡೆಸಿರುವುದನ್ನು ಮುಸ್ಲಿಮ್ ಒಕ್ಕೂಟದ ಅಧ್ಯಕ್ಷರಾಗಿ ಕೆ.ಅಶ್ರಫ್ ತೀವ್ರವಾಗಿ ಖಂಡಿಸಿದ್ದಾರೆ.
ಬಜರಂಗ ಪುಂಡರ ಈ ಕೃತ್ಯವು ಪೊಲೀಸು ಅಧಿಕಾರಿಗಳ ಸಮಕ್ಷಮವೇ ನಡೆದಿದ್ದು ವಿಪರ್ಯಾಸ.ಕೃತ್ಯದ ಬಗ್ಗೆ ಜ್ಯುವೆಲ್ಲರ್ಸ್ ಅಸೋಸಿಯೇಶನ್ ಮತ್ತು ಕರ್ನಾಟಕ ಗೋಲ್ಡ್ ನಿಯಂತ್ರಣ ಬೋರ್ಡ್ ಮಧ್ಯ ಪ್ರವೇಶಿಸಿ ಕ್ರಮಕ್ಕಾಗಿ ಒತ್ತಾಯಿಸಬೇಕು.
ಇತ್ತೀಚೆಗೆ ಬೆಂಗಳೂರಿನಲ್ಲಿ ಪ್ರಮೋದ್ ಮುತಾಲಿಕ್ ಹೇಳಿಕೆ ನೀಡಿ ಮುಸ್ಲಿಮ್ ಒಡೆತನದ ಸ್ವರ್ಣ ಮಳಿಗೆಗಳನ್ನು ನಿಷೇಧಿಸಿ, ಹಿಂದೂಗಳು ಯಾರೂ ಕೂಡ ವ್ಯಾಪಾರ ನಡೆಸ ಕೂಡದು ಎಂದು ಕರೆ ನೀಡಿರುವುದರ ಘಟನೆಯ ಮುಂದುವರಿಕೆ ಭಾಗ ಮಂಗಳೂರಿನ ಸ್ವರ್ಣ ಮಳಿಗೆಯ ಯುವಕನ ಮೇಲಿನ ಹಲ್ಲೆ ಎಂದು ತಿಳಿಯಬೇಕಾಗುತ್ತದೆ.
ಜ್ಯುವೆಲ್ಲರ್ಸ್ ಅಸೋಸಿಯೇಶನ್(Jewllers Association) ಈ ಬಗ್ಗೆ ಕ್ರಮಕ್ಕೆ ಒತ್ತಾಯ ಪಡಿಸದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ದ.ಕ.ಜಿಲ್ಲೆಯ ಪ್ರತೀ ಸ್ವರ್ಣ ಮಳಿಗೆಗಳನ್ನು ಗ್ರಾಹಕರು ಬಹಿಷ್ಕರಿಸುವ ಬಗ್ಗೆ ಆಂದೋಲನ ಮತ್ತು ಜಾಗೃತಿ ನಡೆಸಲಾಗುವುದು ಎಂದು ಕೆ.ಅಶ್ರಫ್(ಮಾಜಿ ಮೇಯರ್) ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕಂಕನಾಡಿಯ ಸುಲ್ತಾನ್ ಗೋಲ್ಡ್ ಜ್ಯುವೆಲ್ಲರಿಯಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣ ಸಂಬಂಧ ಮೂರು ಪ್ರತ್ಯೇಕ ಪ್ರಕರಣ ದಾಖಲಿಸಿದ ಕದ್ರಿ ಠಾಣಾ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಯುವತಿ ತಾಯಿ, ಹಲ್ಲೆಗೊಳಗಾದ ಯುವಕ ಮತ್ತು ಸುಲ್ತಾನ್ ಜ್ಯುವೆಲ್ಲರಿ ಮಾಲೀಕರ ದೂರು ಆಧಾರಿಸಿ ಎಫ್ಐಆರ್ ದಾಖಲಾಗಿದೆ.ಮಗಳ ಮೇಲೆ ದೌರ್ಜನ್ಯ ಹಾಗೂ ಬೆದರಿಕೆ ಒಡ್ಡಿದ ಬಗ್ಗೆ ಯುವತಿ ತಾಯಿ ದೂರು ನೀಡಿದ್ದಾರೆ. ಹಲ್ಲೆ ನಡೆಸಿ ಗಲಭೆ ಸೃಷ್ಟಿಸಿದ ಬಗ್ಗೆ ಯುವಕ ದೂರು ನೀಡಿದ್ದು, ಜ್ಯುವೆಲ್ಲರಿಗೆ ಅಕ್ರಮ ಪ್ರವೇಶ ಮಾಡಿ ದಾಂಧಲೆ ನಡೆಸಿದ ಬಗ್ಗೆ ಜ್ಯುವೆಲ್ಲರಿ ಆಡಳಿತ ದೂರು ದಾಖಲಿಸಿದೆ.
ಸುಲ್ತಾನ್ ಜ್ಯುವೆಲ್ಲರಿಯಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಆಗಿರುವ ಮಂಗಳೂರಿನ ಲುಕ್ಮಾನ್ ಉಲ್ ಹಕೀಂ ಮೇಲೆ ಹಲ್ಲೆ ನಡೆಸಲಾಗಿತ್ತು.ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಯುವತಿಯ ಪೋಷಕರ ಜೊತೆ ಸುಲ್ತಾನ್ ಜ್ಯುವೆಲ್ಲರಿಗೆ ಬಂದಿದ್ದ ಯುವತಿ ಪ್ರಿಯಕರ ಚೇತನ್ ಎಂಬಾತ ಹಲ್ಲೆ ನಡೆಸಿದ್ದಾಗಿ ಲುಕ್ಮಾನ್ ದೂರು ನೀಡಿದ್ದಾನೆ. ಈ ವೇಳೆ ಪೊಲೀಸರ ಜೊತೆ ಸ್ಥಳಕ್ಕೆ ಬಂದಿದ್ದ ಭಜರಂಗದಳ ಕಾರ್ಯಕರ್ತರು ಕೂಡ ಲುಕ್ಮಾನ್ ನನ್ನ ಪ್ರಶ್ನಿಸಿ ಹಲ್ಲೆ ನಡೆಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ