ರಿಯಾದ್ : ಸೌದಿ ಅರೇಬಿಯಾದಲ್ಲಿ(Saudi Arabia) , ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಲ್ಲಿ ಕಾರ್ಮಿಕರು ಕೆಲಸದ ಸ್ಥಳಕ್ಕೆ ತೆರಳಬಾರದು ಎಂದು ಮಾನವ ಸಂಪನ್ಮೂಲ ಮತ್ತು ಸಾಮಾಜಿಕ ಅಭಿವೃದ್ಧಿ ಸಚಿವಾಲಯ(Ministry of Human Resources and Social Development)ಹೇಳಿದೆ. ಅಂತಹ ಸಂದರ್ಭಗಳಲ್ಲಿ,ದೂರದಿಂದಲೇ ಕೆಲಸ ಮಾಡುವ ವಿಧಾನವನ್ನು ಬಳಸಬಹುದು ಅಥವಾ ಇನ್ನೊಂದು ದಿನದಲ್ಲಿ ಕೆಲಸ ಮಾಡಲು ಸೂಚಿಸಬಹುದು. ಕಾರ್ಮಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಖಾಸಗಿ ಸಂಸ್ಥೆಗಳು ಜಾಗರೂಕರಾಗಿರಬೇಕು ಎಂದು ಸಚಿವಾಲಯ ತಿಳಿಸಿದೆ.
ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಲ್ಲಿ ಅಪಘಾತಗಳನ್ನು ತಪ್ಪಿಸಲು ಮತ್ತು ಕಾರ್ಮಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕೆಲಸದ ಸ್ಥಳಕ್ಕೆ ಕಾರ್ಮಿಕರು ಬರುವುದನ್ನು ನಿಷೇಧಿಸುವ ಹಕ್ಕನ್ನು ಉದ್ಯೋಗದಾತರು ಹೊಂದಿದ್ದಾರೆಂದು ಮಾನವ ಸಂಪನ್ಮೂಲ ಮತ್ತು ಸಾಮಾಜಿಕ ಅಭಿವೃದ್ಧಿ ಸಚಿವಾಲಯ ಹೇಳಿದೆ.
ಗೈರುಹಾಜರಿ ಅಥವಾ ವಿಳಂಬದ ಸಂದರ್ಭದಲ್ಲಿ, ಕೆಲಸ ಮಾಡಲು ಮತ್ತೊಂದು ದಿನ ಅಥವಾ ಸಮಯವನ್ನು ಸೂಚಿಸಲು ಉದ್ಯೋಗ ಒಪ್ಪಂದ ಪ್ರಕಾರ ಅವಕಾಶವಿದೆ. ಸೌದಿ ಅರೇಬಿಯಾದಲ್ಲಿ
ವಿವಿಧ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂಬ ಹವಾಮಾನ ಇಲಾಖೆಯ ಸೂಚನೆಯ ಬೆನ್ನಲ್ಲೇ ಸಚಿವಾಲಯದಿಂದ ಈ ವಿವರಣೆ ಬಂದಿದೆ.
ಔದ್ಯೋಗಿಕ ಅಪಘಾತಗಳು, ಪ್ರಮುಖ ಕೈಗಾರಿಕಾ ಅಪಘಾತಗಳು ಮತ್ತು ಔದ್ಯೋಗಿಕ ಗಾಯಗಳನ್ನು ತಡೆಗಟ್ಟುವ ನಿಯಮಗಳಿಗೆ ಹೆಚ್ಚುವರಿಯಾಗಿದೆ ಈ ನಿಯಮ. ಕಾರ್ಮಿಕರು ಯಾವುದೇ ಅಪಾಯವನ್ನು ಎದುರಿಸದಂತೆ ಹೆಚ್ಚಿನ ಜಾಗರೂಕರಾಗಿರಲು ಎಲ್ಲಾ ಖಾಸಗಿ ವಲಯದ ಸಂಸ್ಥೆಗಳಿಗೆ ಸಚಿವಾಲಯ ಸೂಚಿಸಿದೆ ಮತ್ತು ಭಾರೀ ಮಳೆಯ ಸಾಧ್ಯತೆಯ ಬಗ್ಗೆ ಅಧಿಕಾರಿಗಳು ಎಚ್ಚರಿಕೆ ನೀಡಿದರೆ, ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸಚಿವಾಲಯ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ