ರಿಯಾದ್ : ಸೌದಿ ಅರೇಬಿಯಾದಲ್ಲಿ(Saudi Arabia) , ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಲ್ಲಿ ಕಾರ್ಮಿಕರು ಕೆಲಸದ ಸ್ಥಳಕ್ಕೆ ತೆರಳಬಾರದು ಎಂದು ಮಾನವ ಸಂಪನ್ಮೂಲ ಮತ್ತು ಸಾಮಾಜಿಕ ಅಭಿವೃದ್ಧಿ ಸಚಿವಾಲಯ(Ministry of Human Resources and Social Development)ಹೇಳಿದೆ. ಅಂತಹ ಸಂದರ್ಭಗಳಲ್ಲಿ,ದೂರದಿಂದಲೇ ಕೆಲಸ ಮಾಡುವ ವಿಧಾನವನ್ನು ಬಳಸಬಹುದು ಅಥವಾ ಇನ್ನೊಂದು ದಿನದಲ್ಲಿ ಕೆಲಸ ಮಾಡಲು ಸೂಚಿಸಬಹುದು. ಕಾರ್ಮಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಖಾಸಗಿ ಸಂಸ್ಥೆಗಳು ಜಾಗರೂಕರಾಗಿರಬೇಕು ಎಂದು ಸಚಿವಾಲಯ ತಿಳಿಸಿದೆ.
ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಲ್ಲಿ ಅಪಘಾತಗಳನ್ನು ತಪ್ಪಿಸಲು ಮತ್ತು ಕಾರ್ಮಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕೆಲಸದ ಸ್ಥಳಕ್ಕೆ ಕಾರ್ಮಿಕರು ಬರುವುದನ್ನು ನಿಷೇಧಿಸುವ ಹಕ್ಕನ್ನು ಉದ್ಯೋಗದಾತರು ಹೊಂದಿದ್ದಾರೆಂದು ಮಾನವ ಸಂಪನ್ಮೂಲ ಮತ್ತು ಸಾಮಾಜಿಕ ಅಭಿವೃದ್ಧಿ ಸಚಿವಾಲಯ ಹೇಳಿದೆ.
ಗೈರುಹಾಜರಿ ಅಥವಾ ವಿಳಂಬದ ಸಂದರ್ಭದಲ್ಲಿ, ಕೆಲಸ ಮಾಡಲು ಮತ್ತೊಂದು ದಿನ ಅಥವಾ ಸಮಯವನ್ನು ಸೂಚಿಸಲು ಉದ್ಯೋಗ ಒಪ್ಪಂದ ಪ್ರಕಾರ ಅವಕಾಶವಿದೆ. ಸೌದಿ ಅರೇಬಿಯಾದಲ್ಲಿ
ವಿವಿಧ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂಬ ಹವಾಮಾನ ಇಲಾಖೆಯ ಸೂಚನೆಯ ಬೆನ್ನಲ್ಲೇ ಸಚಿವಾಲಯದಿಂದ ಈ ವಿವರಣೆ ಬಂದಿದೆ.
ಔದ್ಯೋಗಿಕ ಅಪಘಾತಗಳು, ಪ್ರಮುಖ ಕೈಗಾರಿಕಾ ಅಪಘಾತಗಳು ಮತ್ತು ಔದ್ಯೋಗಿಕ ಗಾಯಗಳನ್ನು ತಡೆಗಟ್ಟುವ ನಿಯಮಗಳಿಗೆ ಹೆಚ್ಚುವರಿಯಾಗಿದೆ ಈ ನಿಯಮ. ಕಾರ್ಮಿಕರು ಯಾವುದೇ ಅಪಾಯವನ್ನು ಎದುರಿಸದಂತೆ ಹೆಚ್ಚಿನ ಜಾಗರೂಕರಾಗಿರಲು ಎಲ್ಲಾ ಖಾಸಗಿ ವಲಯದ ಸಂಸ್ಥೆಗಳಿಗೆ ಸಚಿವಾಲಯ ಸೂಚಿಸಿದೆ ಮತ್ತು ಭಾರೀ ಮಳೆಯ ಸಾಧ್ಯತೆಯ ಬಗ್ಗೆ ಅಧಿಕಾರಿಗಳು ಎಚ್ಚರಿಕೆ ನೀಡಿದರೆ, ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸಚಿವಾಲಯ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ