ಮಂಗಳೂರು, ಡಿ.25: ನಗರದ ಹೊರವಲಯದಲ್ಲಿ ಅಬ್ದುಲ್ ಜಲೀಲ್ ಎಂಬ ಯುವಕನ ಕೊಲೆ ನಡೆದಿರುವುದು ಅತ್ಯಂತ ಖಂಡನೀಯ. ಅಲ್ಲದೆ, ಕರಾವಳಿಯಲ್ಲಿ ನಡೆದಿರುವ ಇಂತಹ ಘಟನೆಗಳನ್ನು ಸಿಬಿಐ ತನಿಖೆಗೊಳಪಡಿಸಬೇಕು ಎಂದು ರಾಜ್ಯ ವಕ್ಸ್ ಬೋರ್ಡ್(Karnataka State Board of AUQAF) ಅಧ್ಯಕ್ಷ ಮೌಲಾನ ಎನ್.ಕೆ.ಮುಹಮ್ಮದ್ ಶಾಫಿ ಸಅದಿ ಆಗ್ರಹಿಸಿದ್ದಾರೆ.
ಇಂತಹ ಘಟನೆಗಳಿಂದ ಮೃತಪಡುವ ಸಂತ್ರಸ್ತರ ಕುಟುಂಬಗಳಿಗೆ ಸರಕಾರ ತಲಾ ಒಂದು ಕೋಟಿ ರೂ. ಪರಿಹಾರ ನೀಡಬೇಕು. ಅಬ್ದುಲ್ ಜಲೀಲ್ ಕುಟುಂಬಕ್ಕೆ ಸಾಂತ್ವನ ಹೇಳುವುದಾಗಿ ತಿಳಿಸಿದರು.
ಕರಾವಳಿ ಭಾಗದಲ್ಲಿ ಚುನಾವಣೆಗಳು ಸಮೀಪಿಸುವಾಗ ಹಾಗೂ ಚುನಾವಣೆಗಳ ನಂತರ ಕೊಲೆಗಳು ಆಗುತ್ತಿರುವುದು ದುರ್ದೈವ. ದ್ವೇಷ ಮನುಷ್ಯನ ಪ್ರಾಣ ಕಳೆಯುವಷ್ಟು ಕ್ರೂರವಾಗುತ್ತಿದೆ. ನಾಗರಿಕ ಸಮಾಜ ಈ ಬಗ್ಗೆ ಗಂಭೀರ ಚಿಂತನೆ ನಡೆಸಬೇಕು ಎಂದು ಶಾಫಿ ಸಅದಿ ಮನವಿ ಮಾಡಿದರು.
ಮಂಗಳೂರಿನಲ್ಲಿ ಇತ್ತೀಚೆಗಷ್ಟೇ ಫಾಝಿಲ್, ಪ್ರವೀಣ್ ನೆಟ್ಟಾರ್, ಮಸೂದ್ ಕೊಲೆಗಳು ಆಗಿವೆ. ಇದೀಗ ಜಲೀಲ್ ಹತ್ಯೆಯಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ