ಮಂಗಳೂರು, ಡಿ.25: ನಗರದ ಹೊರವಲಯದಲ್ಲಿ ಅಬ್ದುಲ್ ಜಲೀಲ್ ಎಂಬ ಯುವಕನ ಕೊಲೆ ನಡೆದಿರುವುದು ಅತ್ಯಂತ ಖಂಡನೀಯ. ಅಲ್ಲದೆ, ಕರಾವಳಿಯಲ್ಲಿ ನಡೆದಿರುವ ಇಂತಹ ಘಟನೆಗಳನ್ನು ಸಿಬಿಐ ತನಿಖೆಗೊಳಪಡಿಸಬೇಕು ಎಂದು ರಾಜ್ಯ ವಕ್ಸ್ ಬೋರ್ಡ್(Karnataka State Board of AUQAF) ಅಧ್ಯಕ್ಷ ಮೌಲಾನ ಎನ್.ಕೆ.ಮುಹಮ್ಮದ್ ಶಾಫಿ ಸಅದಿ ಆಗ್ರಹಿಸಿದ್ದಾರೆ.
ಇಂತಹ ಘಟನೆಗಳಿಂದ ಮೃತಪಡುವ ಸಂತ್ರಸ್ತರ ಕುಟುಂಬಗಳಿಗೆ ಸರಕಾರ ತಲಾ ಒಂದು ಕೋಟಿ ರೂ. ಪರಿಹಾರ ನೀಡಬೇಕು. ಅಬ್ದುಲ್ ಜಲೀಲ್ ಕುಟುಂಬಕ್ಕೆ ಸಾಂತ್ವನ ಹೇಳುವುದಾಗಿ ತಿಳಿಸಿದರು.
ಕರಾವಳಿ ಭಾಗದಲ್ಲಿ ಚುನಾವಣೆಗಳು ಸಮೀಪಿಸುವಾಗ ಹಾಗೂ ಚುನಾವಣೆಗಳ ನಂತರ ಕೊಲೆಗಳು ಆಗುತ್ತಿರುವುದು ದುರ್ದೈವ. ದ್ವೇಷ ಮನುಷ್ಯನ ಪ್ರಾಣ ಕಳೆಯುವಷ್ಟು ಕ್ರೂರವಾಗುತ್ತಿದೆ. ನಾಗರಿಕ ಸಮಾಜ ಈ ಬಗ್ಗೆ ಗಂಭೀರ ಚಿಂತನೆ ನಡೆಸಬೇಕು ಎಂದು ಶಾಫಿ ಸಅದಿ ಮನವಿ ಮಾಡಿದರು.
ಮಂಗಳೂರಿನಲ್ಲಿ ಇತ್ತೀಚೆಗಷ್ಟೇ ಫಾಝಿಲ್, ಪ್ರವೀಣ್ ನೆಟ್ಟಾರ್, ಮಸೂದ್ ಕೊಲೆಗಳು ಆಗಿವೆ. ಇದೀಗ ಜಲೀಲ್ ಹತ್ಯೆಯಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.
















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ