ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಮಾಜಘಾತುಕ ಶಕ್ತಿಗಳ ಅಟ್ಟಹಾಸ ಎಲ್ಲೆ ಮೀರಿದ್ದು, ಅಲ್ಪ ಸಂಖ್ಯಾತ ಮುಸ್ಲಿಮರಿಗೆ ಅಭದ್ರತೆ ಕಾಡತೊಡಗಿದೆ. ಸುಳ್ಯ ಮಸೂದ್, ಮಂಗಳಪೇಟೆ ಫಾಝಿಲ್ ಹತ್ಯೆಯ ನೋವು ಮಾಸುವ ಮುನ್ನವೇ ಅಮಾಯಕ ಸಾದು ಸ್ವಭಾವದ ಜಲೀಲ್ ಹತ್ಯೆಯಾಗಿದೆ. ಯಾರ ತಂಟೆ ತಕರಾರಿಗೂ ಹೋಗದೆ ತನ್ನ ಪಾಡಿಗೆ ಇದ್ದ ಜಲೀಲ್ ಹತ್ಯೆಯಿಂದ ನಾಗರಿಕ ಸಮಾಜ ಭಯಭೀತ ಗೊಂಡಿದೆ.
ಇತ್ತೀಚಿಗೆ ಕರಾವಳಿಯಲ್ಲಿ ಮುಸ್ಲಿಮರನ್ನು ಗುರಿಯಾಗಿಸಿ ನೈತಿಕ ಪೋಲಿಸ್ ಗಿರಿ ಕೂಡ ನಡೆಯುತ್ತಿದೆ. ಇಂತಹ ಘಟನೆಗಳು ನಡೆದಾಗ ಕಾನೂನು ಬಿಗಿಯಾಗಿದ್ದರೆ ಇಂದು ಜಲೀಲ್ ಹತ್ಯೆ ನಡೆಯುತ್ತಿರಲಿಲ್ಲ. ಹತ್ಯೆಗಳನ್ನು ಧರ್ಮಗಳ ದೃಷ್ಟಿ ಯಲ್ಲಿ ತಾರತಮ್ಯ ಮಾಡುವ ಸರ್ಕಾರದ ನಡೆಯಿಂದ ಜಲೀಲ್ ಹತ್ಯೆಗೆ ನ್ಯಾಯ ಸಿಗಬಹುದೇ ಎಂಬ ಆತಂಕವೂ ಮೂಡಿದೆ.
ಸರ್ಕಾರ ಕೂಡಲೇ ಅರೋಪಿಗಳನ್ನು ಬಂಧಿಸಬೇಕು. ಪ್ರವೀಣ್ ಹತ್ಯೆಯನ್ನು ಗಂಭೀರವಾಗಿ ಪರಿಗಣಿಸಿದಂತೆ ಜಲೀಲ್ ಹತ್ಯೆಯನ್ನು ಪರಿಗಣಿಸಬೇಕು ಹಾಗೂ ಸೂಕ್ತ ಪರಿಹಾರ ಒದಗಿಸಬೇಕು ಎಂದು KCF ಅಂತರಾಷ್ಟ್ರೀಯ ಸಮಿತಿ ಸರ್ಕಾರವನ್ನು ಒತ್ತಾಯಿಸಿದೆ.
















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ