ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಮಾಜಘಾತುಕ ಶಕ್ತಿಗಳ ಅಟ್ಟಹಾಸ ಎಲ್ಲೆ ಮೀರಿದ್ದು, ಅಲ್ಪ ಸಂಖ್ಯಾತ ಮುಸ್ಲಿಮರಿಗೆ ಅಭದ್ರತೆ ಕಾಡತೊಡಗಿದೆ. ಸುಳ್ಯ ಮಸೂದ್, ಮಂಗಳಪೇಟೆ ಫಾಝಿಲ್ ಹತ್ಯೆಯ ನೋವು ಮಾಸುವ ಮುನ್ನವೇ ಅಮಾಯಕ ಸಾದು ಸ್ವಭಾವದ ಜಲೀಲ್ ಹತ್ಯೆಯಾಗಿದೆ. ಯಾರ ತಂಟೆ ತಕರಾರಿಗೂ ಹೋಗದೆ ತನ್ನ ಪಾಡಿಗೆ ಇದ್ದ ಜಲೀಲ್ ಹತ್ಯೆಯಿಂದ ನಾಗರಿಕ ಸಮಾಜ ಭಯಭೀತ ಗೊಂಡಿದೆ.
ಇತ್ತೀಚಿಗೆ ಕರಾವಳಿಯಲ್ಲಿ ಮುಸ್ಲಿಮರನ್ನು ಗುರಿಯಾಗಿಸಿ ನೈತಿಕ ಪೋಲಿಸ್ ಗಿರಿ ಕೂಡ ನಡೆಯುತ್ತಿದೆ. ಇಂತಹ ಘಟನೆಗಳು ನಡೆದಾಗ ಕಾನೂನು ಬಿಗಿಯಾಗಿದ್ದರೆ ಇಂದು ಜಲೀಲ್ ಹತ್ಯೆ ನಡೆಯುತ್ತಿರಲಿಲ್ಲ. ಹತ್ಯೆಗಳನ್ನು ಧರ್ಮಗಳ ದೃಷ್ಟಿ ಯಲ್ಲಿ ತಾರತಮ್ಯ ಮಾಡುವ ಸರ್ಕಾರದ ನಡೆಯಿಂದ ಜಲೀಲ್ ಹತ್ಯೆಗೆ ನ್ಯಾಯ ಸಿಗಬಹುದೇ ಎಂಬ ಆತಂಕವೂ ಮೂಡಿದೆ.
ಸರ್ಕಾರ ಕೂಡಲೇ ಅರೋಪಿಗಳನ್ನು ಬಂಧಿಸಬೇಕು. ಪ್ರವೀಣ್ ಹತ್ಯೆಯನ್ನು ಗಂಭೀರವಾಗಿ ಪರಿಗಣಿಸಿದಂತೆ ಜಲೀಲ್ ಹತ್ಯೆಯನ್ನು ಪರಿಗಣಿಸಬೇಕು ಹಾಗೂ ಸೂಕ್ತ ಪರಿಹಾರ ಒದಗಿಸಬೇಕು ಎಂದು KCF ಅಂತರಾಷ್ಟ್ರೀಯ ಸಮಿತಿ ಸರ್ಕಾರವನ್ನು ಒತ್ತಾಯಿಸಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ