ಮಂಗಳೂರು,ಡಿ.26: ಕಾಟಿಪಳ್ಳ 4 ನೇ ಬ್ಲಾಕಿನಲ್ಲಿ ನಡೆದ ಜಲೀಲ್ ಹತ್ಯೆ ಒಳಗೊಂಡಂತೆ ನಗರದಲ್ಲಿ ನಡೆಯುತ್ತಿರುವ ಕೊಲೆಸರಣಿಯನ್ನು ಮಟ್ಟ ಹಾಕುವಂತೆ ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಘಟಕದ ಪದಾಧಿಕಾರಿಗಳು ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಅವರ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಮನವಿ ಸಲ್ಲಿಸಿದ್ದಾರೆ.
ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ ಕರ್ನಾಟಕ ಮುಸ್ಲಿಂ ಜಮಾಅತ್ ನಿಯೋಗವು, ಕೊಲೆಗಡುಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದರ ಜೊತೆಗೆ ಮೃತರ ಕುಟುಂಬಕ್ಕೆ ಮುಖ್ಯಮಂತ್ರಿ ಒಂದು ಕೋಟಿ ಪರಿಹಾರ ನೀಡಬೇಕೆಂದು ಆಗ್ರಹಿಸಿದೆ.
ಜಿಲ್ಲಾಧಿಕಾರಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕರ್ನಾಟಕ ಮುಸ್ಲಿಂ ಜಮಾಅತ್ ಪ್ರ. ಕಾರ್ಯದರ್ಶಿ ಮೌಲಾನಾ ಅಬೂಸುಫ್ಯಾನ್ ಮದನಿ, ಈ ಹಿಂದೆ ದ. ಕ ಜಿಲ್ಲೆಯಲ್ಲಿ ಕೊಲೆ ನಡೆದಾಗ ಮುಖ್ಯಮಂತ್ರಿಯವರು ತಾರತಮ್ಯ ನೀತಿ ತೋರಿದ್ದು ಸಹಜವಾಗಿ ಸಾರ್ವಜನಿಕರಲ್ಲಿ ಅಸಮಧಾನ ಉಂಟುಮಾಡಿದೆ. ಚುನಾವಣೆ ಹತ್ತಿರ ಬಂದಾಗ ಕರಾವಳಿಯಲ್ಲಿ ಕೊಲೆಯಾಗುವುದು ಸಹಜವಾಗಿಬಿಟ್ಟಿದೆ. ಕೊಲೆಗೆ ಧರ್ಮದ ಬಣ್ಣ ಬಳಿಯದೆ ಫಾಝಿಲ್, ಮಸೂದ್, ಜಲೀಲ್ ಮೂವರ ಮನೆಗೂ ಮುಖ್ಯಮಂತ್ರಿಯವರು ಭೇಟಿ ನೀಡಿ ತಕ್ಷಣ ಪರಿಹಾರ ಘೋಷಣೆ ಮಾಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಮುಸ್ಲಿಂ ಜಮಾಅತ್ ಕಾರ್ಯದರ್ಶಿ ಅಬ್ದುಲ್ ಹಮೀದ್ ಬಜ್ಪೆ, ಕೊಲೆ ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗಬೇಕು. ಅಪರಾಧಿಗಳು ಬಂಧನವಾದ ಕೆಲವೇ ದಿನಗಳಲ್ಲಿ ಜಾಮೀನು ಪಡೆದು ರಾಜಾರೋಷವಾಗಿ ಸುತ್ತಾಡುವುದು ಕಂಡುಬರುತ್ತಿದೆ. ಈ ವಿಷಯದಲ್ಲಿ ಹಾಗಾಗದೆ ಅರೋಪಿಗಳಿಗೆ ಕಠಿಣ ಕಲಂನಡಿಯಲ್ಲಿ ಕೇಸು ದಾಖಲಿಸಬೇಕು. ಪೊಲೀಸ್ ಇಲಾಖೆ, ಕಾನೂನು ಸುವ್ಯವಸ್ಥೆಯ ಮೇಲೆ ಜನರು ಇಟ್ಟಿರುವ ನಂಬಿಕೆಯು ಕುಸಿಯುವಂತೆ ಮಾಡುವ ಹತ್ಯಾ ಸರಣಿಗಳಿಗೆ ಕೊನೆ ಹಾಡಬೇಕು ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ ಉಪಾಧ್ಯಕ್ಷ ಪಿಪಿ ಅಹ್ಮದ್ ಸಖಾಫಿ ಕಾಶಿಪಟ್ನ, ರಾಜ್ಯ ಸಮಿತಿ ಸದಸ್ಯ ಅಶ್ರಫ್ ಕಿನಾರ, ದ.ಕ ಜಿಲ್ಲಾ ಸಮಿತಿ ಸದಸ್ಯ ಮುಹಮ್ಮದ್ ಹನೀಫ್ ಬಜ್ಪೆ, ಮಂಗಳೂರು ತಾಲೂಕು ಸದಸ್ಯ ಇಕ್ಬಾಲ್ ಕೃಷ್ಣಾಪುರ ಮುಂತಾದವರು ಉಪಸ್ಥಿತರಿದ್ದರು.

















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ