ಮಂಗಳೂರು,ಡಿ.27: ಇತ್ತೀಚಿನ ದಿನಗಳಲ್ಲಿ ದ.ಕ.ಜಿಲ್ಲೆಯಲ್ಲಿ ಏರುತ್ತಿರುವ ಸಮಾಜಘಾತುಕ ಘಟನೆಗಳನ್ನು ಖಂಡಿಸಿ, ಸುನ್ನೀ ಸಂಘಟನೆಗಳು ಇಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಸಭೆಯನ್ನು ನಡೆಸಲಿದೆ.
ಕರಾವಳಿ ಕ್ರೂರಿಗಳ, ರೌಡಿಗಳ, ಕೊಲೆಗಟುಕರ ಊರಾಗುವುದು ಬೇಡ. ಸಾಮ್ಯ-ಸಮರಸದ, ನಿರ್ಭೀತಿಯ, ವೈಭವದ ಕರಾವಳಿಯನ್ನು ಮರಳಿ ಕೊಡಿ ಎಂಬ ಧ್ಯೇಯವನ್ನು ಮುಂದಿಟ್ಟು ಕರ್ನಾಟಕ ಮುಸ್ಲಿಂ ಜಮಾಅತ್ ದ.ಕ.ಜಿಲ್ಲಾ ಸಮಿತಿ, ದ. ಕ. ಸುನ್ನೀ ಯುವಜನ ಸಂಘ(SYS), ದ.ಕ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (SSF) ಮಂಗಳೂರಿನ ಮಿನಿ ವಿಧಾನಸೌಧ ಮುಂಭಾಗದಲ್ಲಿ ಸಂಜೆ 3 ಗಂಟೆಗೆ ಬೃಹತ್ ಹಕ್ಕೊತ್ತಾಯ ಸಭೆಯನ್ನು ನಡೆಸಲಿದೆ.
ಇಂದಿನ ಪ್ರತಿಭಟನೆಯಲ್ಲಿ ಪಾಲ್ಗೊಂಡು ದಮನನೀತಿಯ ವಿರುದ್ಧ ಧ್ವನಿಯೆತ್ತೋಣ
ಡಾ. ಎಮ್ಮೆಸ್ಸೆಂ. ಝೈನೀ ಕಾಮಿಲ್
(ಎಸ್.ವೈ.ಎಸ್.ರಾಜ್ಯಾಧ್ಯಕ್ಷರು)
ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ನಿರಂತರವಾಗಿ ನಡೆಯುತ್ತಿರುವ ದಮನ ನೀತಿಯ ವಿರುಧ್ಧ ಧ್ವನಿಯೆತ್ತಲು ಮತ್ತು ನ್ಯಾಯ ಸಿಗುವ ವರೆಗೆ ಹೋರಾಟದ ಪ್ರತಿಜ್ಞೆ ಗೈಯ್ಯಲು ಇಂದು ಮಂಗಳೂರಿನಲ್ಲಿ ನಡೆಯುವ ಪ್ರತಿಭಟನೆಗೆ ಎಲ್ಲ ಸುನ್ನೀ ಕಾರ್ಯಕರ್ತರು, ಹಿತೈಷಿಗಳು ಆಗಮಿಸಿ ಯಶಸ್ವಿ ಗೊಳಿಸಬೇಕು.
ಕಾರ್ಯಕರ್ತರು ಎಸ್ಸೆಸ್ಸೆಫ್ ಮತ್ತು ಎಸ್. ವೈ.ಎಸ್.ಧ್ವಜಗಳನ್ನು ಹಿಡಿದುಕೊಂಡು ಬಂದು ಶಾಂತ ರೀತಿಯಲ್ಲಿ ಹಕ್ಕೊತ್ತಾಯ ಮಂಡಿಸಬೇಕು.
ಯಾವುದೇ ಉದ್ರೇಕಕಾರಿ ಘೋಷಣೆಗಳು, ಸಂಘಟನೆಗಳ ಸಿಧ್ದಾಂತಕ್ಕೆ ವಿರುದ್ದವಾದ ರೀತಿಯ ನಡವಳಿಕೆಗಳು ಇರಕೂಡದು.
ಸುನ್ನೀ ಸಂಘಟನೆಗಳ ಹೆಸರು ಕೆಡಿಸಲು ಹಿತಶತ್ರುಗಳು ಕಾರ್ಯಕ್ರಮದಲ್ಲಿ ನುಸುಳಿ ಅಹಿತಕರ ಘೋಷಣೆ ಕೂಗುವ, ಗೊಂದಲ ಸೃಷ್ಟಿಸುವ ಸಾಧ್ಯತೆ ಇದ್ದು ಅಂತದ್ದೇನಾದರೂ ಕಂಡು ಬಂದಲ್ಲಿ ತಕ್ಷಣ ಮೊಬೈಲ್ನಲ್ಲಿ ಅವರ ವೀಡಿಯೋ ಶೂಟಿಂಗ್ ಮಾಡಿ ಸಂಘಟನೆಯ ನಾಯಕರ ಗಮನಕ್ಕೆ ತನ್ನಿರಿ.
ದಕ್ಷಿಣ ಕನ್ನಡದ ಗತಕಾಲ ಪ್ರತಾಪ ಮತ್ತು ಸೌಹಾರ್ದದ ಇತಿಹಾಸವನ್ನು ಮರಳಿ ಪಡೆಯಲು ಎಲ್ಲ ಜಾತಿ ಧರ್ಮದ ಸಹೃದಯರ ಜತೆ ಸೇರಿ ಶ್ರಮಿಸೋಣ. ಗೂಂಡಾ ಸಾಮ್ರಾಜ್ಯವನ್ನು ಕಿತ್ತೊಗೆಯೋಣ.
“ಬೆಂಕಿ ಬಿದ್ದಿದೆ ಮನೆಗೆ ಓಡೋಡಿ ಬನ್ನಿ….. ಎಲ್ಲರೂ ಎದ್ದೆದ್ದು ಓಡಿ ಬನ್ನಿ” ಕಯ್ಯಾರರ ಮಾತುಗಳು ನಮಗೆ ಸ್ಪೂರ್ತಿಯಾಗಲಿ
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ