ಸಾಮಾಜಿಕ , ಶೈಕ್ಷಣಿಕ ಪ್ರಗತಿಗಾಗಿ ಕಾರ್ಯಾಚರಿಸುತ್ತಿರುವ ಸುನ್ನೀ ವಿದ್ಯಾರ್ಥಿ ಒಕ್ಕೂಟ , ಕರ್ನಾಟಕ ರಾಜ್ಯ ಸುನ್ನೀ ಸೂಡೆಂಟ್ಸ್ ಫೆಡರೇಷನ್ ( ಎಸ್ಸೆಸ್ಸೆಫ್ ) ಇದರ ಸದಸ್ಯತ್ವ ಅಭಿಯಾನ 2023 ಜನವರಿ 1 ರಿಂದ 10 ರ ತನಕ ರಾಜ್ಯಾದ್ಯಂತ ನಡೆಯಲಿದೆ . ಎಸ್ಸೆಸ್ಸೆಫ್ ಕರ್ನಾಟಕದ ಮಣ್ಣಿನಲ್ಲಿ ಸುಮಾರು ನಾಲ್ಕು ದಶಕಗಳಿಂದ ಯಶಸ್ವಿಯಾಗಿ ಕಾರ್ಯಾಚರಣೆ ಮಾಡುತ್ತಿದ್ದು ಧಾರ್ಮಿಕ , ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಚುರುಕಿನ ಕಾರ್ಯಾಚರಣೆ ಮಾಡುವ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳನ್ನು ಈ ನಾಡಿಗೆ ಸಮರ್ಪಿಸಿದೆ.
ಈ ಕಲುಷಿತಗೊಂಡಿರುವ ವಾತಾವರಣದಲ್ಲಿ ಹಾದಿ ತಪ್ಪುತ್ತಿರುವ ವಿದ್ಯಾರ್ಥಿ ಸಮೂಹಕ್ಕೆ ಧಾರ್ಮಿಕತೆ , ನೈತಿಕತೆ ಹಾಗೂ ಅಧ್ಯಾತ್ಮಿಕತೆಯನ್ನು ತುಂಬಿ ಸಮಾಜದ ಸತ್ಪಜೆಗಳನ್ನಾಗಿ ಮಾಡುವಲ್ಲಿ ಎಸ್ಸೆಸ್ಸೆಫ್ ಯಶಸ್ವಿಯಾಗಿದೆ. ರಾಷ್ಟ್ರದಾದ್ಯಂತ ಕಾರ್ಯಾಚರಿಸುತ್ತಿರುವ ಈ ಸಂಘಟನೆಗೆ ಇದೀಗ ಐದು ದಶಕಗಳು ತುಂಬಿ ಸುವರ್ಣ ಮಹೋತ್ಸವ ಆಚರಣೆಯಲ್ಲಿದೆ.
ಕರ್ನಾಟಕ ಉಲಮಾ ಒಕ್ಕೂಟದ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸುನ್ನೀ ವಿದ್ಯಾರ್ಥಿ ಒಕ್ಕೂಟವಾದ ಎಸ್ಸೆಸ್ಸೆಫ್ ಯುವಜನ ಒಕ್ಕೂಟವಾದ ಎಸ್.ವೈ.ಎಸ್ , ಕರ್ನಾಟಕ ಮುಸ್ಲಿಂ ಜಮಾಅತ್ ಮೂರು ಸಂಘಟನೆಗಳು ಸಂಯುಕ್ತವಾಗಿ ಸದಸ್ಯತ್ವ ಅಭಿಯಾನ ನಡೆಸಲಿದೆ .
‘ ವ್ಯರ್ಥವಾಗದಿರಲಿ ಯೌವ್ವನ ‘ ಎಂಬ ಧ್ಯೇಯ ವಾಕ್ಯದಡಿ ಎಸ್.ಎಸ್.ಎಫ್ 12 ವಯಸ್ಸಿನಿಂದ 32 ವಯಸ್ಸಿನವರೆಗೆ ಇರುವ , ಸಂಘಟನೆಯ ತತ್ವ ಸಿದ್ಧಾಂತಗಳಲ್ಲಿ ಬದ್ದರಾದ ವಿದ್ಯಾರ್ಥಿಗಳು , ಯುವಕರು ಸಂಘಟನೆಯ ಸದಸ್ಯತ್ವ ಅಭಿಯಾನದಲ್ಲಿ ಕೈಜೋಡಿಸಲಿದ್ದಾರೆ.
ಹನ್ನೆರಡು ವಯಸ್ಸಿನಿಂದ ಮೂವತ್ತೆರಡು ವಯಸ್ಸು ಪ್ರಾಯ ಮಿತಿಯಲ್ಲಿರುವ ಸುನ್ನೀ ಯುವಕರು ಈ ಅವಧಿಯಲ್ಲಿ ಸದಸ್ಯತ್ವ ಪಡೆದು ಮುಂದಿನ ದಿನಗಳಲ್ಲಿ ನಾಡಿಗೂ , ಕುಟುಂಬಕ್ಕೂ , ರಾಷ್ಟ್ರಕ್ಕೂ ಬೆನ್ನೆಲುಬಾಗಿ ನಿಲ್ಲುವ ಪ್ರಜೆಗಳಾಗಬೇಕಿದೆ ಎಂದು ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುನೀರ್ ಅಹ್ಮದ್ ಸಖಾಫಿ , ಉಳ್ಳಾಲ ( ಕಾರ್ಯದರ್ಶಿ , ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ )ಹಾಗೂ ಇಕ್ಬಾಲ್ ಮಧ್ಯನಡ್ಕ ( ಕೋಶಾಧಿಕಾರಿ ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ) ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ