janadhvani

Kannada Online News Paper

ದ್ವಿತೀಯ ಪಿಯು ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಪ್ರಥಮ

ಬೆಂಗಳೂರು: ದ್ವಿತೀಯ ಪಿಯು ಫಲಿತಾಂಶ ಸೋಮವಾರ ಬೆಳಗ್ಗೆ 11ಕ್ಕೆ ವೆಬ್‌ಸೈಟ್‌ನಲ್ಲಿ ಪ್ರಕಟವಾಗಿದೆ. ಈ ಬಾರಿ ಶೇ 59.56ರಷ್ಟು ಫಲಿತಾಂಶ ಪ್ರಕಟವಾಗಿದೆ, ಉಡುಪಿ ಜಿಲ್ಲೆ ಪ್ರಥಮ ಸ್ಥಾನಗಳಿಸಿದ್ದು, ಚಿಕ್ಕೋಡಿ ಕೊನೆ ಸ್ಥಾನ ಗಳಿಸಿದೆ. ಈ ವರ್ಷದ ಫಲಿತಾಂಶದಲ್ಲಿ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ ಎಂದು ಪಿಯು ಮಂಡಳಿಯ ನಿರ್ದೇಶಕಿ ಸಿ.ಶಿಖಾ ತಿಳಿಸಿದ್ದಾರೆ.

ಮೇ 1ರಂದು ರಾಜ್ಯದ ಎಲ್ಲಾ ಪಿಯು ಕಾಲೇಜುಗಳಲ್ಲಿ ದೊರೆಯಲಿದೆ. ಈ ಬಾರಿ ಒಟ್ಟು 4,725 ಕಾಲೇಜುಗಳಿಂದ 6,90,150 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

ಉತ್ತರ ಪತ್ರಿಕೆಗಳ ನಕಲು ಪ್ರತಿಯನ್ನು ಪಡೆಯಲು, ಮರು ಎಣಿಕೆ ಹಾಗೂ ಮರು ಮೌಲ್ಯಮಾಪನಕ್ಕೆ ಆನ್‌ಲೈನ್‌ ಮೂಲಕವೇ ಅರ್ಜಿ ಸಲ್ಲಿಸಬಹುದಾಗಿದೆ. ಮೇ ತಿಂಗಳ ಅಂತ್ಯದಲ್ಲಿ ಪೂರಕ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಮಂಡಳಿ ಹೇಳಿದೆ.

ಎಸ್ಎಂಎಸ್ ಮೂಲಕ ಫಲಿತಾಂಶ: ವಿದ್ಯಾರ್ಥಿಗಳು ಎಸ್ಎಂಎಸ್ ಮೂಲಕವೂ ಫಲಿತಾಂಶ ತಿಳಿಯಬಹುದು. ಮೊಬೈಲ್‌ನಲ್ಲಿ KAR12 ಎಂದು ಟೈಪ್ ಮಾಡಿ ಸ್ಪೇಸ್ ಕೊಟ್ಟು ರೋಲ್ ನಂಬರ್ ನಮೂದಿಸಿ 56263ಗೆ ಸಂದೇಶ ಕಳುಹಿಸಬೇಕು.

error: Content is protected !! Not allowed copy content from janadhvani.com