ಮಂಗಳೂರು: “ಈ ದೇಶದ ಮುಸ್ಲಿಮರು ವಾಕ್ಚಾತುರ್ಯ ಮಾಡ ಕೂಡದು, ಅವರಿಗೆ ಭಾರತದಲ್ಲಿ ಭಯ ಬೇಡ, ಇಲ್ಲಿನ ನಿರ್ಧಿಷ್ಟ ಸಮುದಾಯವೊಂದು ಸಾವಿರಾರು ವರ್ಷದಿಂದ ಕಲಹದಿಂದ ಬದುಕುತ್ತಿದೆ” ಎಂಬಿತ್ಯಾದಿ ಮೋಹನ್ ಭಾಗವತ್(Mohan Bhagwat) ರ ಅಸಂಬದ್ಧ ಹೇಳಿಕೆಗೆ ಮುಸ್ಲಿಮ್ ಒಕ್ಕೂಟದ ಅಧ್ಯಕರಾದ ಕೆ.ಅಶ್ರಫ್(K.Ashraf) ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಇಂತಹಾ ಹೇಳಿಕೆ ನೀಡಿ ಇಲ್ಲಿನ ಮುಸ್ಲಿಮೇತರನ್ನು ಖುಷಿ ಪಡಿಸಲು, ಮುಸ್ಲಿಮರ ಬಗ್ಗೆ ಕಾಳಜಿ ವಹಿಸುವುದರಲ್ಲಿ ಅರ್ಥವಿಲ್ಲ. ಭಾಗವತರ ಹೇಳಿಕೆ ಒಂದರ್ಥದಲ್ಲಿ ಖಂಡನೀಯ, ಮುಸ್ಲಿಮರ ಪ್ರತಿಕ್ರಿಯೆ ಅಪೇಕ್ಷಿಸಿಯೇ ಹೇಳಿಕೆ ನೀಡುವ ಭಾಗವತರ ಸಮುದಾಯ ಈ ದೇಶಕ್ಕಾಗಿ ಮಾಡಿದ್ದಾದರೂ ಏನು ಎಂಬುದನ್ನಾದರೂ ಬಹಿರಂಗ ಪಡಿಸಬೇಕಿತ್ತು ಎಂದು ಅಶ್ರಫ್ ಆಗ್ರಹಿಸಿದರು.
ಮುಸ್ಲಿಮರು ಈ ದೇಶಕ್ಕಾಗಿ ಮಾಡಿದ ತ್ಯಾಗ, ಸೇವೆ ಮತ್ತು ಕೊಡುಗೆಗಳ ಪಟ್ಟಿಯು ಈ ಮಣ್ಣಿನಲ್ಲಿ ಅಚ್ಚಳಿಯದೆ ಉಳಿದಿದೆ. ಅದನ್ನು ವಿವರಿಸುವ ಅಗತ್ಯ ಈ ಸಂಧರ್ಭದಲ್ಲಿ ಬರಲಾರದು.ಆದರೆ, ಭಾಗವತರು ಈ ದೇಶದ ಮುಸ್ಲಿಮರ ಬಗ್ಗೆ ಕಾಳಜಿ ವಹಿಸುವ ಬದಲು ವೈದಿಕರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಿದೆ ಮತ್ತು ತಮ್ಮ ಕಾಳಜಿಯಲ್ಲಿ ಮುಸ್ಲಿಮರನ್ನು ಸೇರ್ಪಡೆ ಗೊಳಿಸುವ ಅಗತ್ಯವೂ ಇಲ್ಲ.
ಈ ದೇಶದ ಮುಸ್ಲಿಮರು ಯಾರದೊ ಹಂಗಿನಲ್ಲಿ ಈ ದೇಶದಲ್ಲಿ ಬದುಕುತ್ತಿಲ್ಲ, ಬದಲಾಗಿ ಮುಸ್ಲಿಮರು ಈ ದೇಶದಲ್ಲಿ ಅವರದ್ದೇ ಆದ ಸಂಸ್ಕೃತಿ, ಸುಶಿಕ್ಷಣ ಮತ್ತು ಸಂಪ್ರದಾಯದಂತೆ ಬದುಕಿ ಈ ಮಣ್ಣಿನೊಂದಿಗೆ ಲೀನವಾಗುವ ಸರ್ವ ಹಕ್ಕನ್ನು ಹೊಂದಿದ್ದಾರೆ. ಅದಕ್ಕೆ ಯಾರದೋ ಶಿಫಾರಸಿನ ಅಗತ್ಯವೂ ಇಲ್ಲ. ಇವೆಲ್ಲದರ ಕೊರತೆ ಬಹುಷಃ ಒಂದು ನಿರ್ಧಿಷ್ಟ ಸಮುದಾಯಕ್ಕೆ ಇರಲೂ ಬಹುದು, ಆ ಬಗ್ಗೆ ಭಾಗವತರು ಕಾಳಜಿ ವಹಿಸುವುದು ಈ ಸಂದರ್ಭದ ಅನಿವಾರ್ಯತೆ ಕೂಡಾ ಹೌದು ಎಂಬುದನ್ನು ಅರಿಯಲಿ ಎಂದು ಕೆ.ಅಶ್ರಫ್(ಮಾಜಿ ಮೇಯರ್)
ಅಧ್ಯಕ್ಷರು.ದ.ಕ. ಜಿಲ್ಲಾ ಮುಸ್ಲಿಮ್ ಒಕ್ಕೂಟ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ