ಪುತ್ತೂರು: ಚುನಾವಣೆ ಹತ್ತಿರ ಬರುತ್ತಿದ್ದಂತೆ ಟಿಕೇಟಿಗಾಗಿ ಹಲವು ರೀತಿಯ ತಂತ್ರಗಾರಿಕೆ ನಡೆಯುತ್ತಿದೆ.ಪುತ್ತೂರು ಬಣ ರಾಜಕೀಯದ ಸದ್ದು ಜೋರಾಗಿದ್ದು ಮತ್ತೊಂದು ಕಡೆ ಈಗಲೂ ಬಿಜೆಪಿಯಲ್ಲಿರುವ ಓರ್ವರ ಹೆಸರು ಮುಂಚೂಣಿಯಲ್ಲಿದೆ.
ಕಾಂಗ್ರೆಸ್ ಯಾರಿಗೆ ಬೇಕಾದರು ಟಿಕೇಟ್ ನೀಡಲಿ, ಆದರೆ ಬೇರೆ ಪಕ್ಷದಿಂದ ದಿಢೀರನೆ ಸೀಟಿನ ಆಸೆಗಾಗಿ ಬಂದವರಿಗೆ ಅವಕಾಶ ಕೊಟ್ಟರೆ ಪಕ್ಷೇತರ ಅಭ್ಯರ್ಥಿಯನ್ನು ನಿಲ್ಲಿಸಿ ತಕ್ಕ ಪಾಠ ಕಲಿಸಲಿದ್ದೇವೆ ಎಂದು ಖ್ಯಾತ ವಾಗ್ಮಿ, ಚಿಂತಕ ಇಕ್ಬಾಲ್ ಬಾಳಿಲ ತಿಳಿಸಿದ್ದಾರೆ.
ಈ ವಿಚಾರದಲ್ಲಿ ಯುವಕರ ಆವೇಶ ಶಬ್ದವಾಗಿರುವ ಇಕ್ಬಾಲ್ ಬಾಳಿಲ, ಯುವಕರನ್ನು ಸಂಘಟಿಸಿ ಈಗಾಗಲೇ ಕಾರ್ಯಪ್ರವೃತರಾಗಿದ್ದಾರೆ.
ಕಾಂಗ್ರೆಸ್ ಎಂಬುವುದು ಜಾತ್ಯಾತೀತ ಪಕ್ಷ, ಅದು ಹಾಗೆಯೇ ಮುಂದುವರಿಯಬೇಕು. ಆದರೆ ಇತ್ತೀಚಿನ ಕೆಲವೊಂದು ನಡೆಯು ವಿಷಾದನೀಯ.
ಪುತ್ತೂರು ಕಾಂಗ್ರೆಸಿನಲ್ಲಿ ನಿಲ್ಲಲು ಇಲ್ಲಿ ಬೇಕಾದಷ್ಟು ಅಭ್ಯರ್ಥಿಗಳಿರುವಾಗ ಅದರ ನಡುವೆ ಬೇರೆ ಪಕ್ಷದಿಂದ ಬಂದವರಿಗೆ ಅವಕಾಶ ಕೊಡುವುದು ನ್ಯಾಯವಲ್ಲ, ಅದು ಕೂಡಾ ಅವಕಾಶ ಕೊಡುವುದಾದರೆ ಮಾತ್ರ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತೇನೆ ಎಂದು ಹೇಳುವವರಿಗೆ ಹೇಗೆ ಟಿಕೇಟ್ ಕೊಡಲು ಸಾದ್ಯ.? ಹಾಗಾದರೆ ಪಕ್ಷದ ತತ್ವ ಸಿದ್ದಾಂತಗಳೆಲ್ಲ ಬಡವರಿಗೆ ಮಾತ್ರವಾ.? ಇಲ್ಲಿ ನ್ಯಾಯಯುತವಾಗಿ ಪಕ್ಷದ ಹಿರಿಯ ಕಾರ್ಯಕರ್ತರಿಗೆ ಅವಕಾಶ ಕೊಡಿ, ಅದು ಯಾರಾದರು ಸೈ. ಇಲ್ಲವಾದರೆ ಪಕ್ಷೇತರ ಅಭ್ಯರ್ಥಿಯನ್ನು ನಿಲ್ಲಿಸಿ ಅಖಾಡಕ್ಕೆ ಇಳಿಯಲಿದ್ದೇವೆ ಎಂದು ಬಾಳಿಲ ತಿಳಿಸಿದ್ದಾರೆ.
ಈ ಕುರಿತು ಈಗಾಗಲೇ ಅಭಿಪ್ರಾಯವನ್ನು ಹಂಚಿಕೊಂಡಾಗ ನೂರಾರು ಯುವಕರು ಕೈ ಜೋಡಿಸಿದ್ದಾರೆ ಎಂದು ಬಾಳಿಲ ತಿಳಿಸಿದ್ದಾರೆ.
ಕಾಂಗ್ರೇಸಿನಲ್ಲಿ ನ್ಯಾಯಯುತ ಅವಕಾಶಗಳು ಲಭಿಸಲೆಂದು ಈ ತೀರ್ಮಾನಕ್ಕೆ ಬಂದಿರುವುದಾಗಿ ತಿಳಿಸಿದ್ದಾರೆ.ಯಾವುದೇ ಕಾರಣಕ್ಕೂ ಇದರಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲವೆಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)