ದಮ್ಮಾಮ್: ಪ್ರಾಯೋಜಕರೊಂದಿನ ಉದ್ಯೋಗ ಒಪ್ಪಂದ ಕೊನೆಗೊಂಡ ಬಳಿಕ ವಿದೇಶಿಗಳು ಇತರ ಸಂಸ್ಥೆಗಳಿಗೆ ವರ್ಗಾವಣೆಯಾಗುವಂತೆ ಅವಕಾಶ ನೀಡುವ ಕಾನೂನು ತಿದ್ದುಪಡಿಗೆ ಕಾರ್ಮಿಕ ಸಚಿವಾಲಯ ಮುಂದಾಗಿದೆ.ಈ ಬಗ್ಗೆ ಕಾರ್ಮಿಕ ಕಾನೂನು ತಿದ್ದುಪಡಿ ಪರಿಗಣನೆಯಲ್ಲಿದೆ ಎಂದು ಸಚಿವಾಲಯದ ಅಂಡರ್-ಸೆಕ್ರೆಟರಿ ಅಹ್ಮದ್ ಖತ್ತಾನ್ ತಿಳಿಸಿದ್ದಾರೆ.
ಪರಿಣಿತರಾದ ವಿದೇಶಿ ಕೆಲಸಗಾರರಿಗೆ ಉತ್ತಮ ಉದ್ಯೋಗಗಳನ್ನು ಸೃಷ್ಟಿಸಲು ಈ ಕಾನೂನು ಸಹಾಯ ಮಾಡಲಿದೆ ಮತ್ತು ಕಾರ್ಮಿಕ ಮಾರುಕಟ್ಟೆಯು ಮತ್ತೆ ಪುನರುಜ್ಜೀವನಗೊಳ್ಳಲಿದೆ. ಶಕ್ತರಲ್ಲದ ಕೆಲಸಗಾರರು ಮಾರುಕಟ್ಟೆಯಿಂದ ಹಿಂಜರಿಯಲು ಸಹ ಇದು ಕಾರಣವಾಗಲಿದೆ ಎಂದು ಅಹ್ಮದ್ ಖತ್ತಾನ್ ಹೇಳಿದರು.ಇದು ಭಾರತೀಯರು ಸೇರಿದಂತೆ ಲಕ್ಷಾಂತರ ವಿದೇಶಿಯರಿಗೆ ಪ್ರಯೋಜನವಾಗಲಿದೆ.
ಆದರೆ ಅಸ್ತಿತ್ವದಲ್ಲಿರುವ ಪ್ರಾಯೋಜಕತ್ವವನ್ನು ಉಳಿಸಿಕೊಂಡೇ ಹೊಸ ಕೆಲಸಕ್ಕೆ ಅವಕಾಶ ನೀಡಲಾಗುವುದೇ ಎನ್ನುವುದು ಸ್ಪಷ್ಟವಾಗಿಲ್ಲ. ಇದರ ಕುರಿತು ಹೆಚ್ಚಿನ ವಿವರಗಳನ್ನು ಶೀಘ್ರದಲ್ಲೇ ಹೊರಡಿಸಲಾಗುತ್ತದೆ. ಉದ್ಯೋಗದಲ್ಲಿ ತೊಡಗಿರುವವರು ಮತ್ತು ಉದ್ಯೋಗದಲ್ಲಿ ಸಂಕಷ್ಟ ಅನುಭವಿಸುತ್ತಿರುವವರಿಗೆ ಹಾಗೂ ಉದ್ಯೋಗ ಹುಡುಕುವ ವಿದೇಶಿ ಕಾರ್ಮಿಕರಿಗೆ ಈ ಕಾನೂನು ವರದಾನವಾಗಲಿದೆ.
ಪ್ರಸ್ತುತ ಉದ್ಯೋಗ ಒಪ್ಪಂದವು ಮುಕ್ತಾಯಗೊಂಡ ನಂತರವೂ ಪ್ರಾಯೋಜಕರ ಅನುಮತಿ ಇಲ್ಲವಾದರೆ, ಇತರ ಸಂಸ್ಥೆಗಳಲ್ಲಿ ಕೆಲಸ ಮಾಡಲು ಕಾರ್ಮಿಕರಿಗೆ ಅವಕಾಶ ನೀಡಲಾಗುವುದಿಲ್ಲ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ