ನವದೆಹಲಿ: ಯುಎಇಯ ರಾಜಮನೆತನದ ಕಚೇರಿ ಅಧಿಕಾರಿಯಂತೆ ನಟಿಸಿ ದೆಹಲಿಯ ಲೀಲಾ ಪ್ಯಾಲೇಸ್ ಪಂಚತಾರಾ ಹೋಟೆಲ್ನಲ್ಲಿ ಮೂರು ತಿಂಗಳಿಗೂ ಹೆಚ್ಚು ಕಾಲ ವಾಸವಿದ್ದು, ಬಳಿಕ ಹೊಟೇಲ್ ಬಿಲ್ ನೀಡದೇ ಪರಾರಿಯಾಗಿದ್ದ ವ್ಯಕ್ತಿಯನ್ನು ದೆಹಲಿ ಪೊಲೀಸರು ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಬಂಧಿಸಿದ್ದಾರೆ, ಆರೋಪಿಯನ್ನು 41 ವರ್ಷ ಪ್ರಾಯದ ಮಹಮ್ಮದ್ ಶರೀಫ್ ಎಂದು ಗುರುತಿಸಲಾಗಿದೆ.
ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಹೊಟೇಲ್ಗೆ ಆಗಮಿಸಿದ ಈತ ನವಂಬರ್ ಅಂತ್ಯದವರೆಗೂ ಅಲ್ಲೇ ಇದ್ದ. ಇದಾದ ನಂತರ ನವಂಬರ್ನಲ್ಲಿ ಅಲ್ಲಿ ರೂಮ್ ಖಾಲಿ ಮಾಡಿದ ಆರೋಪಿ ಈ ವೇಳೆ 20 ಲಕ್ಷ ಬಿಲ್ಗೆ ಚೆಕ್ ನೀಡಿದ್ದ. ಆದರೆ, ಚೆಕ್ ಬೌನ್ಸ್ ಆಗಿದೆ ಎಂದು ತಿಳಿದು ಬಂದಿದೆ.ಹೋಟೆಲ್ಗೆ ನಂಬಿಸಲು ಆರಂಭದಲ್ಲಿ ಮಹಮ್ಮದ್ ಶರೀಫ್ 1.5 ಲಕ್ಷ ಹಣ ಪಾವತಿಸಿದ್ದ. ಆದರೆ, ಬಾಕಿ 23 ಲಕ್ಷ ಪಾವತಿಸದೇ ಪರಾರಿಯಾಗಿದ್ದ.
ಈ ಘಟನೆಯ ನಂತರ ಹೊಟೇಲ್ ಮ್ಯಾನೇಜರ್ ಅನುಪಮ ದಾಸ್ ಗುಪ್ತಾ ಅವರು ಜನವರಿ 14 ರಂದು ದೆಹಲಿಯ ಸರೋಜಿನಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರನ್ನಾಧರಿಸಿ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.ಮಹಮ್ಮದ್ ಶರೀಫ್ ಯುಎಇ ಸುಲ್ತಾನ್ ಶೈಖ್ ಫಲ್ಹಾ ಬಿನ್ ಝಾಯಿದ್ ಆಲ್ ನಹ್ಯಾನ್ ಕಚೇರಿಯ ಅಧಿಕಾರಿ ಎಂದು ಹೇಳಿಕೊಂಡಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ದೂರಿನ ಬಳಿಕ ಈತನ ಬಂಧನಕ್ಕೆ ಬಲೆ ಬೀಸಿದ ದೆಹಲಿ ಪೊಲೀಸರು ತಂಡವೊಂದನ್ನು ರಚಿಸಿ ಕಾರ್ಯಾಚರಣೆಗೆ ಇಳಿದಿದ್ದರು. ನಂತರ ಜನವರಿ 19 ರಂದು ಶರೀಫ್ನನ್ನು (Mahamed Sharif) ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದೆಹಲಿ ಪೊಲೀಸರು ಬಂಧಿಸಿ ಕೋರ್ಟ್ಗೆ ಹಾಜರುಪಡಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?