ನವದೆಹಲಿ: ಯುಎಇಯ ರಾಜಮನೆತನದ ಕಚೇರಿ ಅಧಿಕಾರಿಯಂತೆ ನಟಿಸಿ ದೆಹಲಿಯ ಲೀಲಾ ಪ್ಯಾಲೇಸ್ ಪಂಚತಾರಾ ಹೋಟೆಲ್ನಲ್ಲಿ ಮೂರು ತಿಂಗಳಿಗೂ ಹೆಚ್ಚು ಕಾಲ ವಾಸವಿದ್ದು, ಬಳಿಕ ಹೊಟೇಲ್ ಬಿಲ್ ನೀಡದೇ ಪರಾರಿಯಾಗಿದ್ದ ವ್ಯಕ್ತಿಯನ್ನು ದೆಹಲಿ ಪೊಲೀಸರು ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಬಂಧಿಸಿದ್ದಾರೆ, ಆರೋಪಿಯನ್ನು 41 ವರ್ಷ ಪ್ರಾಯದ ಮಹಮ್ಮದ್ ಶರೀಫ್ ಎಂದು ಗುರುತಿಸಲಾಗಿದೆ.
ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಹೊಟೇಲ್ಗೆ ಆಗಮಿಸಿದ ಈತ ನವಂಬರ್ ಅಂತ್ಯದವರೆಗೂ ಅಲ್ಲೇ ಇದ್ದ. ಇದಾದ ನಂತರ ನವಂಬರ್ನಲ್ಲಿ ಅಲ್ಲಿ ರೂಮ್ ಖಾಲಿ ಮಾಡಿದ ಆರೋಪಿ ಈ ವೇಳೆ 20 ಲಕ್ಷ ಬಿಲ್ಗೆ ಚೆಕ್ ನೀಡಿದ್ದ. ಆದರೆ, ಚೆಕ್ ಬೌನ್ಸ್ ಆಗಿದೆ ಎಂದು ತಿಳಿದು ಬಂದಿದೆ.ಹೋಟೆಲ್ಗೆ ನಂಬಿಸಲು ಆರಂಭದಲ್ಲಿ ಮಹಮ್ಮದ್ ಶರೀಫ್ 1.5 ಲಕ್ಷ ಹಣ ಪಾವತಿಸಿದ್ದ. ಆದರೆ, ಬಾಕಿ 23 ಲಕ್ಷ ಪಾವತಿಸದೇ ಪರಾರಿಯಾಗಿದ್ದ.
ಈ ಘಟನೆಯ ನಂತರ ಹೊಟೇಲ್ ಮ್ಯಾನೇಜರ್ ಅನುಪಮ ದಾಸ್ ಗುಪ್ತಾ ಅವರು ಜನವರಿ 14 ರಂದು ದೆಹಲಿಯ ಸರೋಜಿನಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರನ್ನಾಧರಿಸಿ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.ಮಹಮ್ಮದ್ ಶರೀಫ್ ಯುಎಇ ಸುಲ್ತಾನ್ ಶೈಖ್ ಫಲ್ಹಾ ಬಿನ್ ಝಾಯಿದ್ ಆಲ್ ನಹ್ಯಾನ್ ಕಚೇರಿಯ ಅಧಿಕಾರಿ ಎಂದು ಹೇಳಿಕೊಂಡಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ದೂರಿನ ಬಳಿಕ ಈತನ ಬಂಧನಕ್ಕೆ ಬಲೆ ಬೀಸಿದ ದೆಹಲಿ ಪೊಲೀಸರು ತಂಡವೊಂದನ್ನು ರಚಿಸಿ ಕಾರ್ಯಾಚರಣೆಗೆ ಇಳಿದಿದ್ದರು. ನಂತರ ಜನವರಿ 19 ರಂದು ಶರೀಫ್ನನ್ನು (Mahamed Sharif) ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದೆಹಲಿ ಪೊಲೀಸರು ಬಂಧಿಸಿ ಕೋರ್ಟ್ಗೆ ಹಾಜರುಪಡಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ
ಒಪ್ಪಂದವನ್ನು ಗಾಳಿಗೆ ತೂರಿ ಇರಾನ್ ಮೇಲೆ ಯುಎಸ್ ದಾಳಿ- ಗಲ್ಫ್ ವಲಯದಲ್ಲಿ ಮತ್ತೆ ಆತಂಕ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ: ನಾಳೆ (ಜುಲೈ 8) ಶಾಲಾ-ಕಾಲೇಜುಗಳಿಗೆ ರಜೆ
ಅಜ್ಜಿನಡ್ಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಮಹಾಸಭೆ : ನೂತನ ಪದಾಧಿಕಾರಿಗಳ ಆಯ್ಕೆ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ