ಮಹಬುಲ: ಕೆಸಿಎಫ್ ಕುವೈಟ್ ರಾಷ್ಟ್ರೀಯ ಸಮಿತಿಯ ವತಿಯಿಂದ ಭಾರತದ 74ನೇ ಗಣರಾಜ್ಯೋತ್ಸವ ಕಾರ್ಯಕ್ರಮವು ಜ.26,
ಗುರುವಾರ ಕ್ಯಾಲಿಕಟ್ ಆಡೋಟೋರಿಯಂ ಮಹಬೂಲದಲ್ಲಿ ನಡೆಯಿತು.
ಸಮಿತಿ ಅಧ್ಯಕ್ಷರಾದ ಬಹುಮಾನ್ಯ ಹುಸೈನ್ ಎರ್ಮಡ್ ಉಸ್ತಾದ್ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ವಾಗತ ಭಾಷಣ ವನ್ನು ಕೆಸಿಎಫ್ ಕುವೈಟ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಾಕೂಬ್ ಕಾರ್ಕಳ ನಡೆಸಿದರು. ಗಣರಾಜೋತ್ಸವದ ಬಗ್ಗೆ ಸಂದೇಶ ಭಾಷಣ ಮಾಡಿದರು. ಸಂಘಟನಾ ವಿಭಾಗದ ಅಧ್ಯಕ್ಷರಾದ ಬಹುಮಾನ್ಯ ಉಮರ್ ಝುಹುರಿ ಅವರು ಉದ್ಘಾಟಿಸಿ ಶುಭ ಕೋರಿದರು.
ಜನಾಬ್ ಝಕರಿಯಾ ಆನೇಕಲ್ ಕೆಸಿಎಫ್ INC ಸದಸ್ಯರು, ಪ್ರಚಾರ ಮತ್ತು ಪ್ರಸಾರ ವಿಭಾಗ ಅಧ್ಯಕ್ಷ ರಾದ ಸಾಹುಲ್ ಹಮೀದ್ ಸಅದಿ ಝುಹುರಿ ಉಸ್ತಾದ್, ಆಡಳಿತ ವಿಭಾಗ ಅಧ್ಯಕ್ಷ ಜನಾಬ್ ಅಬ್ಬಾಸ್ ಬಳಂಜ ಅಸಂಶಗೈದರು ಶಫೀಕ್ ಅಹ್ಸನಿ ಉರುವಲ್ ಪದವು ಶಫೀಕ್ ಲತೀಫಿ ಸುಂಕದಕಟ್ಟೆ, ಕಾಸಿಂ ಉಸ್ತಾದ್ ಬೆಲ್ಮ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕೆಸಿಎಫ್ ಕುವೈಟ್ ರಾಷ್ಟ್ರೀಯ ಸಮಿತಿಯ ನಾಯಕರು ಸೌತ್ ಝೋನ್ ಮತ್ತು ನೋರ್ತ್ ಝೋನ್, ಸೆಕ್ಟರ್ ನಾಯಕರು ಭಾಗವಹಿಸಿದರು. ಕೆಸಿಎಫ್ ಕುವೈಟ್ ಸೌತ್ ಝೋನ್ ಅಧ್ಯಕ್ಷರಾದ ಜನಾಬ್ ಉಮರಬ್ಬ ಕೊಳಕೆ ಕಾರ್ಯಕ್ರಮದ ಕೊನೆಯಲ್ಲಿ ಧನ್ಯವಾದಗೈದರು.
ಕೆಸಿಎಫ್ ಕುವೈಟ್ ರಾಷ್ಟ್ರೀಯ ಅಧ್ಯಕ್ಷ ಬಹುಮಾನ್ಯ ಹುಸೈನ್ ಎರ್ಮಾಡ್ ಉಸ್ತಾದ್ ರವರ ದುವಾ ನಡೆಸಿದರು.
ವರದಿ :ಇಬ್ರಾಹಿಂ ವೇಣೂರು
(ಪ್ರಚಾರ ಮತ್ತು ಪ್ರಸಾರ ವಿಭಾಗ ಕಾರ್ಯದರ್ಶಿ ಕೆಸಿಎಫ್ ಕುವೈಟ್)