ದಮ್ಮಾಮ್: ಇಲ್ಲಿನ ಅಲ್ ಅಹ್ಸಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಮೂವರು ಯುವಕರು ಸಹಿತ ನಾಲ್ಕು ಮಂದಿ ಮೃತಪಟ್ಟಿದ್ದಾಗಿ ವರದಿಯಾಗಿದೆ.
ಇವರು ಸಂಚರಿಸುತ್ತಿದ್ದ ಕಾರಿಗೆ ಒಂಟೆಯೊಂದು ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಮೃತರನ್ನು ಹಳೆಯಂಗಡಿ ಕದಿಕೆಯ ರಿಝಾನ್, ಕೃಷ್ಣಾಪುರದ ಅಕೀಲ್, ನಾಸಿರ್ ಮತ್ತೋರ್ವ ಯುವಕನನ್ನು ಬಾಂಗ್ಲಾದೇಶದ ಶಿಹಾಬ್ ಎಂದು ಗುರುತಿಸಲಾಗಿದೆ.
ಇವರು ಕೆಲಸಕ್ಕೆಂದು ಮಧ್ಯರಾತ್ರಿ ಪಿಕ್ ಅಪ್ ವಾಹನದಲ್ಲಿ ಸೌದಿ ಅರೇಬಿಯಾದ ರಿಯಾದ್ ಪ್ರಾಂತ್ಯದ ಅಲ್ ಅಹ್ಸಾ ಖುರೈಶ್ ರಸ್ತೆಯಲ್ಲಿ ಸಂಚರಿಸುತ್ತಿದ್ದಂತೆ ಒಂಟೆಯೊಂದು ಏಕಾಏಕಿ ಅಡ್ಡ ಬಂದು ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಸೇರಿದಂತೆ ಒಟ್ಟು ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇವರೆಲ್ಲರೂ SAQCO ಎಂಬ ಕಂಪನಿಯಲ್ಲಿ ನೌಕರರಾಗಿದ್ದರು ಎಂದು ಕೆಸಿಎಫ್ ಅಲ್ ಅಹ್ಸಾ ನಾಯಕರು ಜನಧ್ವನಿಗೆ ಮಾಹಿತಿ ನೀಡಿದ್ದಾರೆ.

















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ