ದುಬೈ : ಕರ್ನಾಟಕ ಕಲ್ಚರಲ್ ಫೌಂಡೇಶನ್ ದುಬೈ ನೋರ್ತ್ ಝೋನ್ ವತಿಯಿಂದ “ತನಾಫುಸ್-2023 ಸ್ಪೋರ್ಟ್ಸ್ ಡೇ” ಫೆ.05 ರಂದು ದುಬೈ ಅಲ್ ವರ್ಕ ಮೈದಾನ್ ನಲ್ಲಿ ನಡೆಯಿತು.
ಮುರಾರ್ ಸೆಕ್ಟರ್ ಅಧ್ಯಕ್ಷರಾದ ಆಶ್ರಫ್ ಮದನಿ ಉಸ್ತಾದರ ದುವಾದೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು.

ಕೆಸಿಎಫ್ ದುಬೈ ನೋರ್ತ್ ಝೋನ್ ಅಧ್ಯಕ್ಷರಾದ ಇಸ್ಮಾಯಿಲ್ ಹಾಜಿ ಮದನಿ ನಗರ ಉದ್ಘಾಟನೆ ಮಾಡಿದರು. ಅಲ್ ಮುರಾರ್, ಕಿಸೈಸ್, ಹೊರ್ಲಂಝ್, ನೈಫ್, ನಖಿಲ್ ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ಕ್ರಿಕೆಟ್, ವಾಲಿಬಾಲ್, ರಿಲೇ, ಓಟ ಮತ್ತು ಹಗ್ಗ ಜಗ್ಗಾಟ ಸ್ಪರ್ಧೆಗಳಲ್ಲಿ ಅತ್ಯಂತ ಹೆಚ್ಚಿನ ಅಂಕ ಪಡೆದು ಅಲ್ ಮುರಾರ್ ತಂಡವು ಚಾಂಪಿಯನ್ ಶಿಪ್ ತನ್ನದಾಗಿಸಿಕೊಂಡವು. 75 ಕಿಂತ ಹೆಚ್ಚು ಸ್ಪರ್ಧಾರ್ಥಿಗಳು ಪಾಲ್ಗೊಂಡಿದ್ದರು.

ಕೊನೆಯಲ್ಲಿ ನಡೆದ ಸಮಾರೋಪ ವೇದಿಕೆಯನ್ನು ಕೆಸಿಎಫ್ ಯುಎಇ ರಾಷ್ಟ್ರೀಯ ಪ್ರ.ಕಾರ್ಯದರ್ಶಿ ಮೂಸ ಹಾಜಿ ಬಸರ ಉದ್ಘಾಟನೆ ಮಾಡಿದರು.
ಅಬ್ದುಲ್ ಆಝೀಝ್ ಮಿಸ್ಬಾಹಿ ಸಂಘಟನೆಯ ಬಗ್ಗೆ ಹಿತ ನುಡಿದರು. ಕಾರ್ಯಕ್ರಮದಲ್ಲಿ ಕ್ಯಾಬಿನೆಟ್ ನಾಯಕರಾದ ನಿಯಾಝ್ ಬಸರ, ಶುಕೂರ್ ಮಾಣಿಲ,ಲೆತೀಫ್ ಪಾತೂರ್,ಮಜೀದ್ ಮಂಜನಾಡಿ,ಬಷೀರ್ ಪಡುಬಿದ್ರಿ, ಝುಬೈರ್ ಹಾಜಿ,ಅಲೀ ಅಬ್ಬೆಟು ಹಾಗೂ ಸೆಕ್ಟರ್ ನ ಪ್ರಮುಖ ನಾಯಕರು ಉಪಸ್ಥಿತಿಯಿದ್ದರು.
ಹಬೀಬ್ ಸಜಿಪ ಸ್ವಾಗತಿಸಿದರೆ ಮುಸ್ತಫಾ ಮಾಸ್ಟರ್ ಧನ್ಯವಾದವಿತ್ತರು.

















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು