ಪುತ್ತೂರು: ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಬನ್ನೂರು ಬ್ರಾಂಚ್ ಇದರ ವಾರ್ಷಿಕ ಮಹಾಸಭೆಯು ಫೆಬ್ರವರಿ 05-2023 ಭಾನುವಾರ SYS ಬ್ರಾಂಚ್ ಅಧ್ಯಕ್ಷ ಬಹು| ಇಸ್ಮಾಈಲ್ ಹಾಜಿಯವರ ಅಧ್ಯಕ್ಷತೆಯಲ್ಲಿ ಜರಗಿತು.
ಬಹು|ಇದ್ದುಕುಂಞ ಮದನಿ ದುಆ ನೆರವೇರಿಸಿದರು. ತಾಜುಲ್ ಉಲಮಾ ಸುನ್ನೀ ಚಾರಿಟೇಬಲ್ ಟ್ರಸ್ಟ್ ಬನ್ನೂರು ಇದರ ಪ್ರಧಾನ ಕಾರ್ಯದರ್ಶಿ ಬಹು| ಸೈಫುದ್ದೀನ್ ಸಅದಿ ಪ್ರಾಸ್ತಾವಿಕ ಭಾಷಣ ಮಾಡಿದರು. SYS ಪ್ರಧಾನ ಕಾರ್ಯದರ್ಶಿ K.H ಅಬ್ದುಲ್ಲಾ ಮುಸ್ಲಿಯಾರ್ ಸ್ವಾಗತಿಸಿ ವರದಿ ಮತ್ತು ಲೆಕ್ಕಪತ್ರ ಮಂಡಿಸಿದರು. ಚುನಾವಣಾ R.O ಆಗಿ ಆಗಮಿಸಿದ ಜಿಲ್ಲಾ ಕಾರ್ಯದರ್ಶಿ ಸ್ವಾಲಿಹ್ ಮುರ, ರಾಜ್ಯ ಇಸಾಬ ಡೈರೆಕ್ಟರ್ ಇಖ್ಬಾಲ್ ಬಪ್ಪಳಿಗೆ KMJ, SYS ಸಮಿತಿಗಳ ಆಯ್ಕೆ ಪ್ರಕ್ರಿಯೆಗೆ ನಾಯಕತ್ವ ನೀಡಿದರು.
ನೂತನವಾಗಿ ಅಸ್ಥಿತ್ವಕ್ಕೆ ಬಂದ KMJ ಅಧ್ಯಕ್ಷರಾಗಿ ಅಬ್ದುಲ್ ಮಜೀದ್ ಅಕ್ಕರೆ,ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕ್ಕರ್ ಹಾಜಿ ವಾಡರಗುರಿ ಕೋಶಾಧಿಕಾರಿಯಾಗಿ ಇಸ್ಮಾಈಲ್ ಹಾಜಿ ಅಕ್ಕರೆ ಉಪಾಧ್ಯಕ್ಷರಾಗಿ ಅಬೂಬಕ್ಕರ್ ಹಾಜಿ ಪಾಪ್ಲಿ, ಇಬ್ರಾಹೀಂ ಸುಪಾರಿ, ಜೊತೆ ಕಾರ್ಯದರ್ಶಿಯಾಗಿ K.H ಅಬ್ದುಲ್ಲಾ ಮುಸ್ಲಿಯಾರ್ ,ಪಿ.ಬಿ ಅಬ್ದುರ್ರಹ್ಮಾನ್ ಮದನಿ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ 11 ಮಂದಿ ಆಯ್ಕೆಯಾದರು.
SYS ಅಧ್ಯಕ್ಷರಾಗಿ ಉಮರ್ ವಾಡರಗುರಿ,ಪ್ರಧಾನ ಕಾರ್ಯದರ್ಶಿಯಾಗಿ ಉಮರುಲ್ ಫಾರೂಖ್ ಬನ್ನೂರು ಗುತ್ತು,ಕೋಶಾಧಿಕಾರಿ ಯಾಗಿ ಶಮೀರ್ ಅಕ್ಕರೆ,ದಅವಾ ಕಾರ್ಯದರ್ಶಿಯಾಗಿ ಸೈಫುಲ್ಲಾ ಸಅದಿ, ಉಪಾಧ್ಯಕ್ಷರಾಗಿ ಶೇಖ್ ಇಸ್’ಹಾಖ್ ಸಾಂತ್ವನ ಕಾರ್ಯದರ್ಶಿಯಾಗಿ ಮುಹಮ್ಮದ್ ಅಲೀ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಇತರ 7 ಮಂದಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.ಸಭೆಯ ಕೊನೆಯಲ್ಲಿ ಅಬ್ದುಲ್ಲಾ ಮುಸ್ಲಿಯಾರ್ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್