ರಿಯಾದ್: ಉಮ್ರಾ ವೀಸಾ ಹೊಂದಿರುವವರು ಸೌದಿ ಅರೇಬಿಯಾದ ಎಲ್ಲಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳ ಮೂಲಕ ಪ್ರಯಾಣಿಸಲು ಅನುಮತಿಸಲಾಗಿದೆ. ಈ ಸಂಬಂಧ ಸೌದಿ ನಾಗರಿಕ ವಿಮಾನಯಾನ ಪ್ರಾಧಿಕಾರವು(Saudi Civil Aviation Authority) ವಿಮಾನಯಾನ ಸಂಸ್ಥೆಗಳಿಗೆ ಸುತ್ತೋಲೆ ಕಳುಹಿಸಿದೆ. ಈ ನಿರ್ಧಾರವನ್ನು ಮೊದಲೇ ಪ್ರಕಟಿಸಲಾಗಿತ್ತು, ಆದರೆ ವಿಮಾನಯಾನ ಕಂಪನಿಗಳು ಆದೇಶವನ್ನು ಸ್ವೀಕರಿಸದ ಕಾರಣ ಅನೇಕ ಜನರ ಪ್ರಯಾಣವು ಮೊಟಕುಗೊಂಡಿತ್ತು.
ಈ ವರ್ಷದ ಉಮ್ರಾ ಸೀಝನ್ ಹಲವು ವಿಶೇಷತೆಗಳೊಂದಿಗೆ ಆರಂಭವಾಗಿದೆ. ಉಮ್ರಾ ವೀಸಾ ಅವಧಿಯನ್ನು 90 ದಿನಗಳಿಗೆ ವಿಸ್ತರಿಸಿರುವುದು ಮತ್ತು ಯಾವುದೇ ವೀಸಾದೊಂದಿಗೆ ಬರುವವರಿಗೆ ಉಮ್ರಾ ನಿರ್ವಹಿಸಲು ಅನುಮತಿ ನೀಡಿರುವುದು ಪ್ರಮುಖವಾಗಿದೆ.
ಉಮ್ರಾ ವೀಸಾದಲ್ಲಿರುವವರು ದೇಶದ ಯಾವುದೇ ವಿಮಾನ ನಿಲ್ದಾಣಕ್ಕೆ ಆಗಮನ ಮತ್ತು ನಿರ್ಗಮನದ ಅವಕಾಶವಿದೆ ಎಂದು ಸಚಿವಾಲಯ ಈ ಹಿಂದೆ ತಿಳಿಸಿತ್ತು. ಆದರೆ ಸಚಿವಾಲಯದ ನಿರ್ಧಾರ ಹೊರಬಂದ ನಂತರವೂ ಹಲವು ವಿಮಾನಯಾನ ಸಂಸ್ಥೆಗಳು ಈ ನಿರ್ದೇಶನವನ್ನು ಪಾಲಿಸಿಲ್ಲ.
ಜಿದ್ದಾ ಹೊರತುಪಡಿಸಿ ಇತರ ವಿಮಾನ ನಿಲ್ದಾಣಗಳಿಗೆ ಟಿಕೆಟ್ ಹೊಂದಿದ್ದ ಅನೇಕ ಯಾತ್ರಾರ್ಥಿಗಳು ವಿಮಾನಯಾನ ಕಂಪನಿಗಳು ಪ್ರಯಾಣವನ್ನು ನಿರಾಕರಿಸಿದೆ ಎಂದು ದೂರಿದ್ದಾರೆ. ಹೊಸ ನಿರ್ಧಾರದ ಬಗ್ಗೆ ಸೌದಿ ನಾಗರಿಕ ವಿಮಾನಯಾನ ಪ್ರಾಧಿಕಾರದಿಂದ ಯಾವುದೇ ಅಧಿಕೃತ ಸೂಚನೆಯನ್ನು ವಿಮಾನಯಾನ ಸಂಸ್ಥೆಗಳು ಸ್ವೀಕರಿಸದಿರುವುದೇ ಇದಕ್ಕೆ ಕಾರಣ. ಈ ಸಮಸ್ಯೆ ಈಗ ಬಗೆಹರಿದಿದೆ.
ವಿಮಾನಯಾನ ಸಂಸ್ಥೆಗಳಿಗೆ GACA ಹೊರಡಿಸಿದ ಹೊಸ ಸುತ್ತೋಲೆಯಲ್ಲಿ, ಉಮ್ರಾ ಯಾತ್ರಿಕರು ಎಲ್ಲಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳ ಮೂಲಕ ಸೌದಿ ಅರೇಬಿಯಾಕ್ಕೆ ಪ್ರವೇಶಿಸಲು ಮತ್ತು ಹಿಂತಿರುಗಲು ಅನುಮತಿಸಲಾಗಿದೆ ಎಂಬುದು ಸ್ಪಷ್ಟವಾಗಿದೆ. ಇದರ ವಿರುದ್ಧ ವರ್ತಿಸುವ ವಿಮಾನಯಾನ ಸಂಸ್ಥೆಗಳ ವಿರುದ್ಧ ಶಿಕ್ಷಾರ್ಹ ಕ್ರಮ ಕೈಗೊಳ್ಳಲಾಗುವುದು ಎಂದೂ ಸುತ್ತೋಲೆಯಲ್ಲಿ ಎಚ್ಚರಿಸಲಾಗಿದೆ.
ಆದಾಗ್ಯೂ, ಪ್ರಯಾಣಿಕರು ತಮ್ಮ ಟಿಕೆಟ್ಗಳನ್ನು ಕಾಯ್ದಿರಿಸುವ ಮೊದಲು ವಿಮಾನಯಾನ ಸಂಸ್ಥೆಗಳೊಂದಿಗೆ ಪರಿಶೀಲಿಸುವುದು ಸೂಕ್ತವಾಗಿದೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್