ಮಂಗಳೂರು: ಮಾಜಿ ಮುಖ್ಯಮಂತ್ರಿ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಗುರಿಯಾಗಿಸಿ, ಸಚಿವ ಅಶ್ವಥ್ ನಾರಾಯಣ್, ಟಿಪ್ಪುವನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕೆಂದು ಪ್ರಚೋದಿತ ಹೇಳಿಕೆ ನೀಡಿರುವುದು ಖಂಡನಾರ್ಹ,ಅಕ್ಸ್ಯಮ್ಮ ಅಪರಾಧ ಕೂಡಾ, ರಾಜ್ಯದ ಪೊಲೀಸು ಮಹಾ ನಿರ್ದೇಶಕರು ಈ ಹೇಳಿಕೆಯ ವಿರುದ್ಧ ಪ್ರಕರಣ ದಾಖಲಿಸಬೇಕಿದೆ ಎಂದು ಮುಸ್ಲಿಮ್ ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್ ರವರು ಆಗ್ರಹಿಸಿದ್ದಾರೆ.
ಸಿದ್ದು ವಿರುದ್ಧ ಜಾತಿ ಪ್ರಚೋದಿತ ಹೇಳಿಕೆ ನೀಡಲಾಗಿದೆ. ಮೊದಲು ಟಿಪ್ಪು ಬಗ್ಗೆಗಿನ ಹೇಳಿಕೆ ನೀಡಿ ವೈರಿಯಂತೆ ಬಿಂಬಿಸಲಾಗಿದೆ, ನಂತರ ಟಿಪ್ಪುವಿನ ಹೆಸರಿನೊಂದಿಗೆ ಸಿದ್ದರಾಮಯ್ಯರನ್ನು ಸಮೀಕರಿಸಿ ಬಿಂಬಿಸಲಾಯಿತು, ತದ ನಂತರ ಟಿಪ್ಪುವಿನ ದಾರುಣ ಅಂತ್ಯವನ್ನು ವೈಭವೀಕರಿಸಿ, ಸಿದ್ದರಾಮಯ್ಯನವರ ರಾಜಕೀಯ ಅಂತ್ಯದೊಂದಿಗೆ ಸಮೀಕರಿಸಿ ಪ್ರಚೋದಿತ ಹೇಳಿಕೆ ನೀಡಲಾಗಿದೆ.
ಇದು ಮತೀಯ ದ್ವೇಷಿತ ಹೇಳಿಕೆ ಆಗಿದೆ. ಸಿದ್ದುವನ್ನು ಗುರಿಯಾಗಿಸಿ, ಟಿಪ್ಪುವನ್ನು ಸಮೀಕರಿಸಿ, ಮುಸ್ಲಿಮ್ ಜನಾಂಗವನ್ನು ವಿರೋಧಿಸುವ ವ್ಯವಸ್ಥಿತ ಷಡ್ಯಂತ್ರದ ಕೇಶವ ಕೃಪಾ ಪ್ರೇರಿತ ಹೇಳಿಕೆ ನೀಡಲಾಗಿದೆ. ಈ ಪ್ರಚೋದನೆ ಜನರಿಗೆ ಮನವರಿಕೆ ಆಗಲು ಅಧಿಕ ಸಮಯ ಬೇಕಾಗಿಲ್ಲ ಎಂದು ಕೆ.ಅಶ್ರಫ್(ಮಾಜಿ ಮೇಯರ್) ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ