ದೋಹಾ,ಫೆ18 : ಕರ್ನಾಟಕ ಕಲ್ಚರಲ್ ಫೌಂಡೇಶನ್(ಕೆ.ಸಿ.ಎಫ್) ಖತರ್ ಘಟಕ ಇದರ ವತಿಯಿಂದ ಕೆ.ಸಿ.ಎಫ್ ಫೌಂಡೇಶನ್ ಡೇ ಇದರ ಪ್ರಯುಕ್ತ ಇಲ್ಲಿನ ಪ್ರಖ್ಯಾತ ಹಾಮದ್ ಆಸ್ಪತ್ರೆಯಲ್ಲಿ ಫೆ.17 ರಂದು ರಕ್ತದಾನ ಶಿಬಿರ ನಡೆಯಿತು.
ಸಭೆಯನ್ನುದ್ದೇಶಿಸಿ ಮಾತನಾಡಿದ ಇಂಡಿಯನ್ ಕಲ್ಚರಲ್ ಸೆಂಟರ್ (ICC) ಉಪಾಧ್ಯಕ್ಷ ಸುಬ್ರಹ್ಮಣ್ಯ ಹೆಬ್ಬಾಗಿಲು,ರಕ್ತದಾನದಿಂದ ಕೆ.ಸಿ.ಎಫ್ ಜೀವ ತುಂಬುತ್ತಿದೆ.ನೊಂದ ಅನಿವಾಸಿಗಳ ಪಾಲಿಗೆ ಆಶ್ರಿತವಾಗಿ ಕಾರ್ಯಾಚರಿಸುತ್ತಿರುವ ಕೆ.ಸಿ.ಎಫ್ ಕಾರ್ಯವೈಖರಿಗಳು ಶ್ಲಾಘನೀಯವೆಂದು ಅಭಿಪ್ರಾಯಪಟ್ಚರು.
ಕಾರ್ಯಕ್ರಮದಲ್ಲಿ 100ಕ್ಕಿಂತಲೂ ಮಿಕ್ಕ ಕಾರ್ಯಕರ್ತರು ಸ್ವಯಂಪ್ರೇರಿತ ರಕ್ತದಾನಮಾಡಿ ಮಾದರಿಯಾದರು.
ಕಾರ್ಯಕ್ರಮದಲ್ಲಿ INC ನಾಯಕ ಹಾಫಿಳ್ ಉಮರುಲ್ ಫಾರೂಕ್ ಸಖಾಫಿ ಎಮ್ಮೆಮ್ಮಾಡು, ಕನ್ನಡ ಸಂಘ ಖತರ್ ನಾಯಕ ರಮೇಶ ಮುಂತಾದವರು ಉಪಸ್ಥಿತರಿದ್ದರು.
ಕೆ.ಸಿ.ಎಫ್ ಖತರ್ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಹನೀಫ್ ಪಾತೂರು ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಕೆ.ಸಿ.ಎಫ್ ಖತರ್ ಪ್ರ.ಕಾರ್ಯದರ್ಶಿ ಫಾರೂಕ್ ಕೃಷ್ಣಾಪುರ ಸ್ವಾಗತಿಸಿ ಮಅ್ ರೂಫ್ ಸುಲ್ತಾನಿ ವಂದಿಸಿದರು.






















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ