ಶೈಖುನಾ ಕನ್ಯಾನ ಉಸ್ತಾದರ ಶಿಷ್ಯಂದಿರ ಸಂಘಟನೆ ಜಂಇಯ್ಯತು ತ್ತರ್ಬಿಯತಿಲ್ ಅನ್ಸಾರಿಯ್ಯ ಇದರ ವತಿಯಿಂದ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ಬೃಹತ್ ಅಜ್ಮೀರ್ ಮೌಲಿದ್ ಮತ್ತು ಜಲಾಲಿಯ್ಯ ರಾತೀಬ್ ಮಜ್ಲಿಸ್ ಇದೇ ಬರುವ ದಿನಾಂಕ 25 ಶನಿವಾರ ಕನ್ಯಾನ ರಹ್ಮಾನಿಯ್ಯ ಜುಮಾ ಮಸೀದಿಯಲ್ಲಿ ಬಹಳ ವಿಜೃಂಭಣೆಯಿಂದ ನಡೆಯಲಿದೆ.
ಉಡುಪಿ ಚಿಕ್ಕಮಗಳೂರು ಖಾಝಿ ಶೈಖುನಾ ಮಾಣಿ ಉಸ್ತಾದರ ನೇತೃತ್ವ ದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.
ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ರವರ ನೇತೃತ್ವದಲ್ಲಿ ಜಲಾಲಿಯ ರಾತೀಬ್ ನಡೆಯಲಿದೆ.ಸಮಾರೋಪ ದುಆ ಕಾರ್ಯಕ್ರಮಕ್ಕೆ ಅಸ್ಸಯ್ಯಿದ್ ಮುಹಮ್ಮದ್ ಶಹೀರ್ ತಂಙಳ್ ಮಳ್ಹರ್ ಪೊಸೋಟ್ ನೇತೃತ್ವ ನೀಡಲಿದ್ದಾರೆ.
ಶೈಖುನಾ ಕನ್ಯಾನ ಇಬ್ರಾಹೀಂ ಫೈಝಿ ಉಸ್ತಾದರ ವಿಶೇಷ ಮುತುವರ್ಜಿಯಿಂದ ನಡೆಯುವ ಈ ಬೃಹತ್ ಆಧ್ಯಾತ್ಮಿಕ ಸಂಗಮ ದಲ್ಲಿ ಊರ ಪರವೂರ ಸಾವಿರಾರು ಮಂದಿ ಭಾಗವಹಿಸುತ್ತಾರೆ.
ವಿಶೇಷ ಆಧ್ಯಾತ್ಮಿಕ ಹುರುಪು ಮಾನಸಿಕ ಶಾಂತಿಯು ಈ ಮಜ್ಲಿಸ್ ನಲ್ಲಿ ದೊರೆಯುತ್ತದೆ.
ಆದ್ದರಿಂದಲೇ ಪ್ರಸ್ತುತ ಮಜ್ಲಿಸ್ ನಲ್ಲಿ ಒಮ್ಮೆ ಭಾಗವಹಿಸಿದವರು ನಿರಂತರ ಭಾಗವಹಿಸಲು ಆಶಿಸುತ್ತಾರೆ.
















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ