ವಿಟ್ಲ : ಇಲ್ಲಿನ ಅಡ್ಯನಡ್ಕ ಎಂಬಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಕಾರ್ಯಾಗಾರ ನಡೆಯುತ್ತಿದ್ದ ವೇಳೆ ಮಧ್ಯ ಪ್ರವೇಶಿಸಿ ಸಂಘ ಪರಿವಾರ ಅಡ್ಡಿ ಪಡಿಸಿದ ಪ್ರಕರಣವು ವರದಿಯಾಗಿದೆ. ಆದರೆ, ಕಾರ್ಯಾಗಾರ ನಡೆಸಿದ ಸಂಘಟಕರ ವಿರುದ್ಧವೇ ಪೋಲೀಸರು ಪ್ರಕರಣ ದಾಖಲಿಸಿದ್ದನ್ನು ಕರ್ನಾಟಕ ಮುಸ್ಲಿಂ ಜಮಾಅತ್, ಸುನ್ನೀ ಯುವ ಜನ ಸಂಘ, ಸುನ್ನೀ ಸ್ಟೂಡೆಂಟ್ ಫೆಡರೇಶನ್ ಮೂಡಂಬೈಲ್ ಅಡ್ಯನಡ್ಕ ಯುನಿಟ್ ಸಮಿತಿ ಖಂಡಿಸಿದೆ.
ಇಲ್ಲಿನ ನುಸುರತ್ತುಲ್ ಇಸ್ಲಾಂ ಯಂಗ್ಮೆನ್ಸ್ ಅಸೋಸಿಯೇಷನ್ ವತಿಯಿಂದ ನಡೆಸಲಾದ ಶೈಕ್ಷಣಿಕ ಕಾರ್ಯಾಗಾರದಲ್ಲಿ ಪ್ರಚೋದನಕಾರಿ ಭಾಷಣ, ಇಸ್ಲಾಂ ಮತ ಪ್ರವಚನ ನಡೆಸಲಾಗಿದೆ ಎಂದು ಸಂಘ ಪರಿವಾರ ಸಂಘಟನೆಗಳು ಹೊರಿಸಿದ ಸುಳ್ಳಾರೋಪ ಮತ್ತು ನೀಡಿದ ಪ್ರಕರಣವನ್ನು ಸ್ವೀಕರಿಸಿ FIR ದಾಖಲಿಸಿದ ಪೊಲೀಸರ ನಡೆ ಖಂಡನೀಯವಾಗಿದೆ.
ಕಾರ್ಯಾಗಾರಕ್ಕೆ ನೇತೃತ್ವ ನೀಡಿದ ರಫೀಖ್ ಮಾಸ್ಟರ್ ರವರು ಅನೇಕ ಸ್ಥಳಗಳಲ್ಲಿ ಶೈಕ್ಷಣಿಕ ಕಾರ್ಯಾಗಾರ ನಡೆಸಿದ ಇತಿಹಾಸ ಹೊಂದಿರುವ ಉತ್ತಮ ವ್ಯಕ್ತಿಯಾಗಿದ್ದಾರೆ.ಅವರ ವಿರುದ್ಧ ಸುಳ್ಳಾರೋಪ ಹೊರಿಸಿರುವುದು ಖೇದಕರ.
ಅಡ್ಯನಡ್ಕ ಎಂಬ ಈ ಪ್ರದೇಶವು ಶಾಂತಿ, ಸೌಹಾರ್ದತೆಯ ಸುಂದರ ನಾಡಾಗಿದೆ. ಇಲ್ಲಿ ನುಸುರತ್ತುಲ್ ಇಸ್ಲಾಂ ಯಂಗ್ಮೆನ್ಸ್ ಅಸೋಸಿಯೇಷನ್ ಸಂಘಟನೆಯು ಅನೇಕ ವರ್ಷಗಳಿಂದ ಉತ್ತಮ ಕಾರ್ಯಗಳನ್ನು ನಡೆಸುತ್ತಿದೆ.ಪ್ರತಿ ವರ್ಷ ಶೈಕ್ಷಣಿಕ ಕಾರ್ಯಾಗಾರವನ್ನು ನಡೆಸುತ್ತಾ ಬಂದಿದೆ.
ಇಂತಹಾ ಉನ್ನತ ಕಾರ್ಯಗಳಿಗೆ ದಕ್ಕೆ ತರುವ ಹಾಗೂ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಹುನ್ನಾರವನ್ನು ನಡೆಸುತ್ತಿರುವ ಸಂಘ ಪರಿವಾರದ ವ್ಯಕ್ತಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅಡ್ಯನಡ್ಕ,ಮೂಡಂಬೈಲ್ KMJ, SYS, SSF ಸಮಿತಿ ಆಗ್ರಹಿಸಿದೆ.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ