ಬೆಂಗಳೂರು,ಫೆ.22: ಸೌದಿ ಅರೇಬಿಯಾದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ರಾಯಚೂರು ಮೂಲದ ಒಂದೇ ಕುಟುಂಬದ ನಾಲ್ವರು ಸೇರಿ 6 ಮಂದಿ ಮೃತಪಟ್ಟಿರುವ ಘಟನೆ ಬುಧವಾರ ಮುಂಜಾನೆ ವರದಿಯಾಗಿದೆ.
ರಾಯಚೂರು ಮೂಲದ ಒಂದೇ ಕುಟುಂಬದ ಶಫೀದ್ ಹುಸೈನ್ ಸುಲ್ಲದ್, ಬಡೇಜಾನ್ ಸುಲ್ಲದ್, ಸಿರಾಜ್ ಬೇಗಮ್ ಸುಲ್ಲದ್, ಸಮೀರ್ ಸುಲ್ಲದ್ ಹಾಗೂ ಕಲಬುರಗಿಯ ಸಾಮಾಜಿಕ ಕಾರ್ಯಕರ್ತ ಮುಹಮ್ಮದ್ ಮೈನುದ್ದೀನ್ ಸಾಹೇಬ್, ಸೇಡಂನ ಬೇಗಮ್ ಮುಹಮ್ಮದ್ ಅಲಿ ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಇವರು ಸಾಲಿಹೀನ್ ಎಂಬ ಹಜ್ ಮತ್ತು ಉಮ್ರಾ ಟೂರ್ ಆ್ಯಂಡ್ ಟ್ರಾವೆಲ್ಸ್ ಕಂಪನಿಯ ಮೂಲಕ ಪವಿತ್ರ ಮಕ್ಕಾ ಮತ್ತು ಮದೀನಾ ಪ್ರವಾಸ ಕೈಗೊಂಡಿದ್ದರು. ಉಮ್ರಾ ನಿರ್ವಹಿಸಿ ನಿನ್ನೆ ರಾತ್ರಿ ಬಸ್ ಮೂಲಕ ಮದೀನಾಕ್ಕೆ ತೆರಳುತ್ತಿದ್ದಾಗ ಇವರು ಪ್ರಯಾಣಿಸುತ್ತಿದ್ದ ಬಸ್ ಮಕ್ಕಾದಿಂದ 250 ಕಿ.ಮೀ.ದೂರದಲ್ಲಿ ಮುಂದೆ ಚಲಿಸುತ್ತಿದ್ದ ಟ್ರಕ್’ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ