ಬೆಂಗಳೂರು,ಫೆ.22: ಸೌದಿ ಅರೇಬಿಯಾದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ರಾಯಚೂರು ಮೂಲದ ಒಂದೇ ಕುಟುಂಬದ ನಾಲ್ವರು ಸೇರಿ 6 ಮಂದಿ ಮೃತಪಟ್ಟಿರುವ ಘಟನೆ ಬುಧವಾರ ಮುಂಜಾನೆ ವರದಿಯಾಗಿದೆ.
ರಾಯಚೂರು ಮೂಲದ ಒಂದೇ ಕುಟುಂಬದ ಶಫೀದ್ ಹುಸೈನ್ ಸುಲ್ಲದ್, ಬಡೇಜಾನ್ ಸುಲ್ಲದ್, ಸಿರಾಜ್ ಬೇಗಮ್ ಸುಲ್ಲದ್, ಸಮೀರ್ ಸುಲ್ಲದ್ ಹಾಗೂ ಕಲಬುರಗಿಯ ಸಾಮಾಜಿಕ ಕಾರ್ಯಕರ್ತ ಮುಹಮ್ಮದ್ ಮೈನುದ್ದೀನ್ ಸಾಹೇಬ್, ಸೇಡಂನ ಬೇಗಮ್ ಮುಹಮ್ಮದ್ ಅಲಿ ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಇವರು ಸಾಲಿಹೀನ್ ಎಂಬ ಹಜ್ ಮತ್ತು ಉಮ್ರಾ ಟೂರ್ ಆ್ಯಂಡ್ ಟ್ರಾವೆಲ್ಸ್ ಕಂಪನಿಯ ಮೂಲಕ ಪವಿತ್ರ ಮಕ್ಕಾ ಮತ್ತು ಮದೀನಾ ಪ್ರವಾಸ ಕೈಗೊಂಡಿದ್ದರು. ಉಮ್ರಾ ನಿರ್ವಹಿಸಿ ನಿನ್ನೆ ರಾತ್ರಿ ಬಸ್ ಮೂಲಕ ಮದೀನಾಕ್ಕೆ ತೆರಳುತ್ತಿದ್ದಾಗ ಇವರು ಪ್ರಯಾಣಿಸುತ್ತಿದ್ದ ಬಸ್ ಮಕ್ಕಾದಿಂದ 250 ಕಿ.ಮೀ.ದೂರದಲ್ಲಿ ಮುಂದೆ ಚಲಿಸುತ್ತಿದ್ದ ಟ್ರಕ್’ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ