ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ ಮಂಗಳೂರು ದಮ್ಮಾಮ್ ವಲಯ ಅಧೀನದ ತುಕ್ಬಾ ಘಟಕದ 28 ನೇ ವಾರ್ಷಿಕ ಮಹಾಸಭೆ 16, ಫೆಬ್ರವರಿ 2023 ಗುರುವಾರ ಅಸ್ತಮಿಸಿದ ಶುಕ್ರವಾರ ರಾತ್ರಿ 10 ಘಂಟೆಗೆ ಸರಿಯಾಗಿ ಜರಗಿತು. ಡಿಕೆಯಸ್ಸಿ ಖಾದಿಮ್ ಇಸ್ಮಾಯೀಲ್ ಕಾಟಿಪಳ್ಳ ದುಆ ನಸೀಹತ್ ಗೈದರು.
ಡಿಕೆಯಸ್ಸಿ ತುಕ್ಬಾ ಘಟಕದ ಅಧ್ಯಕ್ಷ ಅಬ್ದುಲ್ ಅಝೀಝ್ ಮೂಳೂರು ರವರ ಘನ ಅಧ್ಯಕ್ಷತೆಯಲ್ಲಿ ಜರಗಿದ ಸಭೆಯಲ್ಲಿ ಮೂಳೂರು ಅಲ್ ಇಹ್ಸಾನ್ ಹಳೆ ವಿದ್ಯಾರ್ಥಿ ಮುರ್ಷಿದ್ ಅಹ್ಮದ್ ಉಚ್ಚಿಲ ಖಿರಾಅತ್ ಪಠಿಸಿದರು.
ಡಿಕೆಯಸ್ಸಿ ದಮ್ಮಾಮ್ ಘಟಕದ ಅಧ್ಯಕ್ಷ ಸಯ್ಯದ್ ಬಾವ ಬಜ್ಪೆ ಸಭೆಯನ್ನು ಉದ್ಘಾಟಿಸಿದರು. ತುಕ್ಬಾ ಘಟಕದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಮೀದ್ ಉಚ್ಚಿಲ ಸ್ವಾಗತಿಸಿದರು. ಕೋಶಾಧಿಕಾರಿ ಅಬ್ದುರ್ರಹ್ಮಾನ್ ಉಚ್ಚಿಲ ರವರ ಉಪಸ್ಥಿತಿಯಲ್ಲಿ ಪ್ರವರ್ತನಾ ವರದಿ ಮಂಡಿಸಲಾಯಿತು.
ಅಧ್ಯಕ್ಷರಾದ ಅಬ್ದುಲ್ ಅಝೀಝ್ ಮೂಳೂರು ರವರು ಮಾತನಾಡಿ ಮುಂದಿನ ಸಮಯಗಳಲ್ಲಿ ಹೆಚ್ಚಿನ ಸಮಯ ಡಿಕೆಯಸ್ಸಿ ಯ ಅಭಿವೃದ್ಧಿ ಕಾರ್ಯಗಳಿಗೆ ಮೀಸಲಿಡಿರಿ. ಎಂದು ನುಡಿದರು.
ಡಿಕೆಯಸ್ಸಿ ದಮ್ಮಾಮ್ ವಲಯದ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ರೋಯಲ್ ರವರ ಉಸ್ತುವಾರಿಯಲ್ಲಿ 2023-24 ನೇ ಸಾಲಿಗೆ ನೂತನ ಸಮಿತಿ ರಚಸಲಾಯಿತು.
ಗೌರವ ಅಧ್ಯಕ್ಷರಾಗಿ ಡಾಕ್ಟರ್ ಮುಹಮ್ಮದ್ ಷರೀಫ್ ಮೂಳೂರು, ಅಧ್ಯಕ್ಷರಾಗಿ ಅಬ್ದುಲ್ ಅಝೀಝ್ ಮೂಳೂರು, ಪ್ರಧಾನ ಕಾರ್ಯದರ್ಶಿ ಯಾಗಿ ಮುರ್ಷಿದ್ ಅಹ್ಮದ್ ಉಚ್ಚಿಲ ಹಾಗೂ ಕೋಶಾಧಿಕಾರಿ ಯಾಗಿ ಅಸ್ಲಮ್ ಶಿರ್ವ ರವರನ್ನು ಆರಿಸಲಾಯಿತು.
ಉಪಾಧ್ಯಕ್ಷರಾಗಿ ಅಸೀಬುರ್ರಹ್ಮಾನ್ ಮತ್ತು ಶಂಸುದ್ದೀನ್ ಮೊಯಿದಿನ್, ಜೊತೆ ಕಾರ್ಯದರ್ಶಿಗಳಾಗಿ ಸರ್ಫ್ರಾಝ್ ಮೂಳೂರು ಮತ್ತು ಶಂಸೀರ್ ಉಚ್ಚಿಲ, ಸಲಹಾ ಸಮಿತಿಗೆ ಎನ್. ಎಸ್. ಅಬ್ದುಲ್ಲಾ ಮತ್ತು ಅಬ್ದುಲ್ ಹಮೀದ್ ಉಚ್ಚಿಲ, ಸಂಚಾಲಕರಾಗಿ ರಿಯಾಝ್ ಮಣಿಪುರ ಮತ್ತು ಅಬ್ದುರ್ರಹ್ಮಾನ್ ಉಚ್ಚಿಲ ರವರನ್ನು ನೇಮಕ ಗೊಳಿಸಲಾಯಿತು.
ಉಳಿದ ಹತ್ತು ಮಂದಿ ಸದಸ್ಯರನ್ನು ಕಾರ್ಯಕಾರಿ ಸಮಿತಿಗೆ ಸದಸ್ಯರನ್ನಾಗಿ ಆರಿಸಲಾಯಿತು.
ಮುಖ್ಯ ಅತಿಥಿಗಳಾಗಿ ಡಿಕೆಯಸ್ಸಿ ತುಕ್ಬಾ ಘಟಕದ ಉಸ್ತುವಾರಿ ಅಬ್ದುಲ್ ಅಝೀಝ್ ಮೂಡುತೋಟ, ಎನ್. ಎಸ್. ಅಬ್ದುಲ್ಲಾ ಮತ್ತು ಅಲ್ ಖೋಬರ್ ನಿಂದ ಅಬ್ದುಲ್ ಹಮೀದ್ ಸುಳ್ಯ ಆಗಮಿಸಿ ಸಂದರ್ಭೋಚಿತವಾಗಿ ಮಾತನಾಡಿದರು.
ಗೌರವ ಅಧ್ಯಕ್ಷರಾದ ಡಾಕ್ಟರ್ ಮುಹಮ್ಮದ್ ಷರೀಫ್ ಮೂಳೂರು ಮಾತನಾಡಿ ಡಿಕೆಯಸ್ಸಿ ಯು ಹಮ್ಮಿಕೊಂಡ ಯೋಜನೆಗಳನ್ನು ಸಂಪೂರ್ಣ ಗೊಳಿಸುವಲ್ಲಿ ತಾವುಗಳೆಲ್ಲರ ಸಹಾಯ ಸಹಕಾರ ಅಗತ್ಯವಿದ್ದು ಯಶಸ್ವಿಗೊಳಿಸುವಲ್ಲಿ ಸಹಕರಿಸಿರಿ ಎಂದು ನುಡಿದರು.
ಸಭೆಯ ಕೊನೆಯಲ್ಲಿ ನೂತನ ಪ್ರಧಾನ ಕಾರ್ಯದರ್ಶಿ ಮುರ್ಷಿದ್ ಅಹ್ಮದ್ ಉಚ್ಚಿಲ ಧನ್ಯವಾದಗೈದರು.
ವರದಿ: ಇಸ್ಮಾಯೀಲ್ ಕಾಟಿಪಳ್ಳ ದಮ್ಮಾಂ
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ